ಆರಗ ಜ್ಞಾನೇಂದ್ರ 
ರಾಜಕೀಯ

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದು ತಪ್ಪು, ಇದು ಚುನಾವಣಾ ವರ್ಷ, ಜಾಗ್ರತೆಯಿಂದ ಮಾತಾಡಬೇಕು: ಆರಗ ಜ್ಞಾನೇಂದ್ರ

ಕೊಡಗು ಜಿಲ್ಲೆ ಪ್ರವಾಸ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಆರಗ ಜ್ಞಾನೇಂದ್ರ ಇಂದು ಶುಕ್ರವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಮುಂದೆ ಪ್ರತಿಕ್ರಿಯಿಸಿದ್ದು, ಕಾರಿಗೆ ಮೊಟ್ಟೆ ಎಸೆದ ಕೃತ್ಯ ತಪ್ಪು ಎಂದು ಹೇಳಿದ್ದಾರೆ.

ಬೆಂಗಳೂರು: ಕೊಡಗು ಜಿಲ್ಲೆ ಪ್ರವಾಸ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹಸಚಿವ ಆರಗ ಜ್ಞಾನೇಂದ್ರ ಇಂದು ಶುಕ್ರವಾರ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಮುಂದೆ ಪ್ರತಿಕ್ರಿಯಿಸಿದ್ದು, ಕಾರಿಗೆ ಮೊಟ್ಟೆ ಎಸೆದ ಕೃತ್ಯ ತಪ್ಪು ಎಂದು ಹೇಳಿದ್ದಾರೆ.

ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡಲು ಅವಕಾಶ ಇದೆ. ಆದರೆ ಕಾನೂನನ್ನು ಕೈಗೆ ತೆಗೆದುಕೊಂಡು ಹಿಂಸಾತ್ಮಕ ಧೋರಣೆ ಹೊಂದುವ ಅಧಿಕಾರ ಯಾರಿಗೂ ಇಲ್ಲ, ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈಗಾಗಲೇ 9 ಜನರನ್ನು ಬಂಧಿಸಿದ್ದಾರೆ ಎಂದು ಹೇಳಿದರು.

ಸಂಯಮದಿಂದ ಮಾತನಾಡಬೇಕು: ವಿಧಾನಸಭೆ ಚುನಾವಣೆಗೆ ದಿನ ಸಮೀಪಿಸುತ್ತಿದೆ. ಪರಿಸ್ಥಿತಿ ಸೂಕ್ಷ್ಮವಾಗಿದೆ. ಎಲ್ಲರೂ ಸಂಯಮದಿಂದ ಮಾತನಾಡಬೇಕು. ಎಲ್ಲರೂ ಗಡಿದಾಟಿ ಮೀರಿ ಮಾತನಾಡಬಾರದು. ಕಾಂಗ್ರೆಸ್ ಕಾರ್ಯಕರ್ತನೊಬ್ಬ ಶಿವಮೊಗ್ಗದಲ್ಲಿ ಸಾವರ್ಕರ್ ಫೋಟೋವನ್ನು ಇಳಿಸಿ ಇಂಗ್ಲಿಷರ ಬೂಟ್ ನೆಕ್ಕಿದವನು ಸಾವರ್ಕರ್ ಎಂದು ಹೇಳುತ್ತಾನೆ. ಸಾವರ್ಕರ್ ಫೋಟೋ ಸರ್ಕಲ್ ನಲ್ಲಿ ಹಾಕಿದಾಗ ಸಿದ್ದರಾಮಯ್ಯನವರು ಮುಸ್ಲಿಂ ಏರಿಯಾದಲ್ಲಿ ಏಕೆ ಹಾಕಿದ್ದು ಎನ್ನುತ್ತಾರೆ. ನಮ್ಮ ದೇಶದ ಸಮಗ್ರತೆ, ಏಕತೆಗೆ ಧಕ್ಕೆ ತರುವಂತಹ ಮಾತುಗಳನ್ನು ಆಡಿದರೆ ಜನರು ಆಕ್ರೋಶಗೊಳ್ಳುತ್ತಾರೆ.

ರಾಜಕಾರಣ ಎಲ್ಲರೂ ಮಾಡೋಣ, ಜನರ ಶಾಂತಿಯನ್ನು ಗಮನದಲ್ಲಿಟ್ಟುಕೊಂಡು ನಾವೆಲ್ಲರೂ ಮಾತನಾಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಸ್ಸಾಂ: ಸೈರಾಂಗ್‌-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ; ಸ್ಥಳದಲ್ಲೇ 7 ಆನೆಗಳ ದಾರುಣ ಸಾವು

ಉ.ಕ. ನಿರ್ಲಕ್ಷ್ಯ ಮಾಡಿದ್ದೇವೆ ಎಂದು ಹೇಳುವ ನೈತಿಕ ಹಕ್ಕು ಬಿಜೆಪಿಯವರಿಗೆ ಇಲ್ಲ, 'ಗ್ಯಾರಂಟಿ ನಿಧಿ'ಯ ಶೇ. 43.63 ಭಾಗ ನೀಡಿದ್ದೇವೆ: ಸಿದ್ದರಾಮಯ್ಯ

Epstein Files ಬಿಡುಗಡೆ: ಟ್ರಂಪ್ ಬಗ್ಗೆ ಹೆಚ್ಚಿನದ್ದಿಲ್ಲ; ಕ್ಲಿಂಟನ್ ಫೋಟೋಗಳು ಬಹಿರಂಗ!

ಬಿಕ್ಲು ಶಿವ ಕೊಲೆ ಕೇಸ್ ನಲ್ಲಿ ಸಿಗದ ನಿರೀಕ್ಷಣಾ ಜಾಮೀನು: ಅಜ್ಞಾತ ಸ್ಥಳಕ್ಕೆ ತೆರಳಿದ ಬಿಜೆಪಿ ಶಾಸಕ ಭೈರತಿ ಬಸವರಾಜು?

ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾತ್ರೋರಾತ್ರಿ ಶೋಧ; ಇತಿಹಾಸದಲ್ಲಿಯೇ ಮೊದಲ ಬಾರಿಗೆ 30 ಮೊಬೈಲ್ ಫೋನ್‌ಗಳು ವಶ!

SCROLL FOR NEXT