ಅಶ್ವತ್ಥ ನಾರಾಯಣ 
ರಾಜಕೀಯ

'ತಮ್ಮ ಸಿದ್ಧಾಂತ ಯಾವುದು ಸ್ಪಷ್ಟಪಡಿಸಿ; ಜಾತಿ, ಧರ್ಮವನ್ನೊಡೆದು ಆಳುವುದೇ? ನೆಹರು ಕುಟುಂಬದ ಗುಲಾಮಗಿರಿ ಮಾಡುವುದೇ?'

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ –ಬಿಜೆಪಿ ಕಾರ್ಯಕರ್ತರ ನಡುವೆ ತಂದಿಟ್ಟು ತಮಾಷೆ ನೋಡುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್‌. ಅಶ್ವತ್ಥನಾರಾಯಣ ಕಿಡಿಕಾರಿದ್ದಾರೆ.

ಬೆಂಗಳೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ –ಬಿಜೆಪಿ ಕಾರ್ಯಕರ್ತರ ನಡುವೆ ತಂದಿಟ್ಟು ತಮಾಷೆ ನೋಡುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್‌. ಅಶ್ವತ್ಥನಾರಾಯಣ ಕಿಡಿಕಾರಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅಶ್ವತ್ಥ ನಾರಾಯಣ ‘ಪ್ರಚೋದನಕಾರಿ ಹೇಳಿಕೆ ನೀಡುವಲ್ಲಿ ನಿಸ್ಸೀಮರಾದ ಸಿದ್ದರಾಮಯ್ಯ ಅವರು ಮುಸ್ಲಿಂ ಏರಿಯಾದಲ್ಲಿ ವೀರ ಸಾವರ್ಕರ್‌ ಫೋಟೊ ಯಾಕೆ? ಎಂದು ಕೇಳಿ ದೇಶಭಕ್ತರನ್ನು ಕೆರಳಿಸಿದ್ದಾರೆ. ಈಗ ತಮಗೂ ಮೊಟ್ಟೆ ಎಸೆಯಲು ಬರಲ್ವಾ? ಎಂದು ಕೇಳುವ ಮೂಲಕ ಬಿಜೆಪಿ-ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ತಂದಿಟ್ಟು ತಮಾಷೆ ನೋಡುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಅವರೇ, ನಿಮ್ಮ ಸಿದ್ಧಾಂತ ಯಾವುದು? ಮತಾಂಧ ಟಿಪ್ಪುವನ್ನು ಸ್ವಾತಂತ್ರ್ಯ ಹೋರಾಟಗಾರ ಎಂದು ಬಿಂಬಿಸುವುದೇ?, ಮುಸ್ಲಿಂ ಏರಿಯಾದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಹಾಕಬಾರದು ಎಂಬುದೇ? ಜಾತಿ, ಧರ್ಮವನ್ನೊಡೆದು ಆಳುವುದೇ? ಅಥವಾ, ನೆಹರು ಕುಟುಂಬದ ಗುಲಾಮಗಿರಿ ಮಾಡುವುದೇ’ ಎಂದು ಅಶ್ವತ್ಥನಾರಾಯಣ ಪ್ರಶ್ನಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳನ್ನು ವೀಕ್ಷಿಸಲು ಗುರುವಾರ ಬಂದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಕಾರ್ಯಕರ್ತರು ಘೇರಾವ್ ಹಾಕಿದ್ದರು. ಕಪ್ಪು ಬಾವುಟ ಪ್ರದರ್ಶಿಸಿ, ಅವರು ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಕೋಳಿಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT