ಆರ್. ಧ್ರುವ ನಾರಾಯಣ್ 
ರಾಜಕೀಯ

ಸಿದ್ದು ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ: ಗೃಹ ಸಚಿವರ ರಾಜೀನಾಮೆಗೆ ಆರ್ ಧ್ರುವ ನಾರಾಯಣ್ ಆಗ್ರಹ

ಕೊಡಗಿನಲ್ಲಿ ನಿನ್ನೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧ ನೈತಿಕ ಹೊಣೆ ಹೊತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು  ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ಆಗ್ರಹಿಸಿದ್ದಾರೆ.

ಮೈಸೂರು: ಕೊಡಗಿನಲ್ಲಿ ನಿನ್ನೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧ ನೈತಿಕ ಹೊಣೆ ಹೊತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು  ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಇದು ಸರ್ಕಾರಿ ಪ್ರಾಯೋಜಿತ ಕೃತ್ಯ. ಸಿದ್ದರಾಮಯ್ಯ ಮಾಸ್ ಲೀಡರ್. ಅದಕ್ಕಾಗಿಯೇ ಅವರನ್ನು ಟಾರ್ಗೆಟ್ ಮಾಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಕಾರ್ಯಕರ್ತರನ್ನು ಬಂಧಿಸಬಹುದಿತ್ತು. ಆದರೆ, ಉದ್ದೇಶಪೂರ್ವಕವಾಗಿಯೇ ಸಿದ್ದರಾಮಯ್ಯ ಅವರನ್ನು ಗುರಿ ಮಾಡಲಾಗಿದೆ ಎಂದರು.  

ಕೊಡಗಿನಲ್ಲಿ ಈ ಹಿಂದೆ ಮನೆಗೊಬ್ಬರು ಸೈನಿಕರಿರುತ್ತಿದ್ದರು. ಆದರೆ, ಈಗ ಮನೆಗೊಬ್ಬರು ಪುಂಡರಿದ್ದಾರೆ. ಸಿದ್ದರಾಮಯ್ಯ ಅವರ ಕಾರಿನ ಮೇಲಿನ ಮೊಟ್ಟೆ ಎಸೆತ ಪ್ರಕರಣ ಖಂಡಿಸಿ ಆಗಸ್ಟ್ 26 ರಂದು ಕಾಂಗ್ರೆಸ್ ಚಲೋ ನಡೆಸಲಾಗುವುದು ಎಂದು ಧ್ರುವನಾರಾಯಣ್ ತಿಳಿಸಿದರು. 

ಮತ್ತೊಂದೆಡೆ ಬೆಂಗಳೂರಿನಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ, ಇದು ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದ್ದು,  ಗೃಹ ಸಚಿವ ಆರಗ ಜ್ಞಾನೇಂದ್ರ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT