ಯತೀಂದ್ರ ಸಿದ್ದರಾಮಯ್ಯ (ಸಂಗ್ರಹ ಚಿತ್ರ) 
ರಾಜಕೀಯ

ಸಿದ್ದರಾಮಯ್ಯ ಹತ್ಯೆಗೆ RSS, ಬಿಜೆಪಿ ಸಂಚು: ಶಿವರಾಮ್ ಗಂಭೀರ ಆರೋಪ; ತಂದೆಗೆ ಜೀವ ಬೆದರಿಕೆ ಇದೆ ಎಂದ ಯತೀಂದ್ರ ಸಿದ್ದರಾಮಯ್ಯ

ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹತ್ಯೆಗೆ ಆರ್ ಎಸ್ಎಸ್ ಮತ್ತು ಬಿಜೆಪಿ ಸಂಚು ರೂಪಿಸಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಶಿವರಾಮ್ ಅವರು ಆರೋಪ ಮಾಡಿದ್ದಾರೆ.

ಮೈಸೂರು: ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಹತ್ಯೆಗೆ ಆರ್ ಎಸ್ಎಸ್ ಮತ್ತು ಬಿಜೆಪಿ ಸಂಚು ರೂಪಿಸಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ರಾಜ್ಯಾಧ್ಯಕ್ಷ ಶಿವರಾಮ್ ಅವರು ಆರೋಪ ಮಾಡಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶಿವರಾಮ್ ಅವರು, ಸಿದ್ದರಾಮಯ್ಯ ಹತ್ಯೆಗೆ ಬಿಜೆಪಿ ಮತ್ತು ಆರ್‌ಎಸ್‍ಎಸ್ ಸಂಚು ಮಾಡಿದೆ. ಅದರ ಟ್ರಯಲ್ ಗುರುವಾರ ಮಡಿಕೇರಿಯಲ್ಲಿ ನಡೆದಿದೆ. ಗಾಂಧೀಜಿಯ ರೀತಿ ಸಾರ್ವಜನಿಕರ ಮಧ್ಯೆಯೆ ಸಿದ್ದರಾಮಯ್ಯರನ್ನು ಕೊಲ್ಲಲು ಬಿಜೆಪಿ, ಆರ್‌ಎಸ್‍ಎಸ್ ಸಂಚು ಮಾಡಿದೆ. ಸಿದ್ದರಾಮಯ್ಯ ಹತ್ಯೆ ಮೂಲಕ ಹಿಂದುಳಿದ ವರ್ಗಗಳ ಮಹಾನ್ ನಾಯಕನ ಯುಗಾಂತ್ಯ ಮಾಡಲು ಬಿಜೆಪಿ ಸಂಚು ಮಾಡಿದೆ ಎಂದು ಅವರು ಕಿಡಿಕಾರಿದ್ದಾರೆ. 

ತಂದೆಗೆ ಜೀವ ಬೆದರಿಕೆ ಇದೆ: ಯತೀಂದ್ರ ಸಿದ್ದರಾಮಯ್ಯ
ಮತ್ತೊಂದೆಡೆ ಯತೀಂದ್ರ, ಸಾವರ್ಕರ್ ಬಗ್ಗೆ ಮಾತನಾಡಿದ್ದಕ್ಕೆ ನಮ್ಮ ತಂದೆ ಸಿದ್ದರಾಮಯ್ಯ ಅವರಿಗೆ ಜೀವಬೆದರಿಕೆಯಿದೆ. ಹಿಂದೂ ಸಂಘಟನೆಗಳಿಂದಲೇ ಬೆದರಿಕೆಗಳು ಬಂದಿವೆ ಎಂದು ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ.

'ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ವಿರೋಧ ಪಕ್ಷದ ನಾಯಕರುಗಳಿಗೆ ಭದ್ರತೆ ಕೊಡಲು ವಿಫಲವಾಗಿದೆ. ಇನ್ನು ಜನರಿಗೆ ಹೇಗೆ ಭದ್ರತೆ ಕೊಡುತ್ತಾರೋ ಗೊತ್ತಿಲ್ಲ. ಜೊತೆಗೆ ಮೊಟ್ಟೆ ಒಡೆಸಿ ಹೇಡಿ ಕೃತ್ಯ ಮಾಡಿದೆ. ಬಿಜೆಪಿ ಸರ್ಕಾರ ಮೊದಲು ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಗಲಭೆ ಬಗ್ಗೆ ಗಮನ ಹರಿಸಬೇಕು. ಅದು ಬಿಟ್ಟು ವಿರೋಧ ಪಕ್ಷಗಳು ನೀಡುವ ಸಣ್ಣ ಪುಟ್ಟ ಹೇಳಿಕೆಗಳನ್ನು ಹಿಡಿದುಕೊಂಡು, ಅನಗತ್ಯ ಗೊಂದಲ ಸೃಷ್ಟಿಸಿ ಅಪಪ್ರಚಾರ ಮಾಡುತ್ತಿದೆ. ಟೆರರಿಸ್ಟ್‌ಗಳು ಕೂಡಾ ದೇಶ ಪ್ರೇಮಿಗಳೇ ಆಗಿರುತ್ತಾರೆ. ಆದರೆ ಅವರು ಹಿಡಿಯುವ ದಾರಿ ತಪ್ಪಲ್ವಾ? ಅದರಂತೆಯೇ ಸಾವರ್ಕರ್ ಕೂಡಾ ದೇಶ ಪ್ರೇಮಿಯೇ ಆಗಿರಬಹುದು. ಆದರೆ ಆ ದೇಶ ಪ್ರೇಮವನ್ನು ವ್ಯಕ್ತಪಡಿಸುವುದಕ್ಕೋಸ್ಕರ ಹಿಂದೂಯೇತರ ಪ್ರಜೆಗಳನ್ನು ದೇಶದ ಭಾಗವಾಗಿರಬಾರದು, ಅವರು 2ನೇ ದರ್ಜೆಯ ಪ್ರಜೆಗಳಾಗಿರಬೇಕು ಹಾಗೂ ಅವರನ್ನು ದ್ವೇಷಿಸುವುದು ಈ ದೇಶಕ್ಕೆ ಮಾರಕ ಎಂದು ಹೇಳಿದರು.

ಗುರುವಾರ ಮಡಿಕೇರಿ ಪ್ರವಾಸ ಕೈಗೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಹಿಂದೂ ಸಂಘಟನೆಯವರು ಮೊಟ್ಟೆ ಒಡೆದು ಅಗೌರವ ತೋರಿದ್ದರು. ಈ ಘಟನೆಗೆ ಕಾಂಗ್ರೆಸ್ ಮಾತ್ರವಲ್ಲದೇ ಬಿಜೆಪಿ, ಜೆಡಿಎಸ್ ಕೂಡಾ ಅಸಮಾಧಾನ ವ್ಯಕ್ತಪಡಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT