ರಾಜಕೀಯ

ಸಂಪುಟ ವಿಸ್ತರಣೆಗೆ ರೆಕ್ಕೆಪುಕ್ಕ: ಸಿಎಂ ಬೊಮ್ಮಾಯಿ ಭೇಟಿ ಮಾಡಿದ ರಮೇಶ್ ಜಾರಕಿಹೊಳಿ

Lingaraj Badiger

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಬೆರಳೆಣೆಕೆಯ ತಿಂಗಳುಗಳು ಮಾತ್ರ ಬಾಕಿ ಉಳಿದಿವೆ. ಈ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆಯ ಮಾತುಗಳಿಗೆ ರೆಕ್ಕೆ ಪುಕ್ಕಗಳು ಮೂಡತೊಡಗಿವೆ.

ಇದಕ್ಕೆ ಇಂಬು ನೀಡುವಂತೆ ಶನಿವಾರ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಆರ್.ಟಿ ನಗರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಆಗಮಿಸಿ ಚರ್ಚೆ ನಡೆಸಿದರು. ಸರಕಾರ ರಚನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ರಮೇಶ್ ಜಾರಕಿಹೊಳಿ ಮತ್ತೆ ಮಂತ್ರಿಗಿರಿಗಾಗಿ ಲಾಭಿ ನಡೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಹಿಂದೆ ಅಶ್ಲೀಲ‌ ಸಿಡಿ ಪ್ರಕರಣದಿಂದ ಮಂತ್ರಿ ಸ್ಥಾನ‌ ಕಳೆದುಕೊಂಡಿದ್ದ ರಮೇಶ್ ಜಾರಕಿಹೊಳಿ, ಸಚಿವ ಸ್ಥಾನದ ಮೇಲೆ ಮತ್ತೆ ಕಣ್ಣಿಟ್ಟಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ.

ಈಗಾಗಲೇ ಹೈಕಮಾಂಡ್ ನಾಯಕರು, ಬಿಎಲ್ ಸಂತೋಷ್‌ ಬಳಿ ಬೇಡಿಕೆ ಇಟ್ಟಿರುವ ರಮೇಶ್ ಜಾರಕಿಹೊಳಿ, ನಿನ್ನೆಯೂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.

SCROLL FOR NEXT