ರಮೇಶ್ ಜಾರಕಿಹೊಳಿ 
ರಾಜಕೀಯ

ಸಂಪುಟ ವಿಸ್ತರಣೆಗೆ ರೆಕ್ಕೆಪುಕ್ಕ: ಸಿಎಂ ಬೊಮ್ಮಾಯಿ ಭೇಟಿ ಮಾಡಿದ ರಮೇಶ್ ಜಾರಕಿಹೊಳಿ

ರಾಜ್ಯ ವಿಧಾನಸಭಾ ಚುನಾವಣೆಗೆ ಬೆರಳೆಣೆಕೆಯ ತಿಂಗಳುಗಳು ಮಾತ್ರ ಬಾಕಿ ಉಳಿದಿವೆ. ಈ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆಯ ಮಾತುಗಳಿಗೆ ರೆಕ್ಕೆ ಪುಕ್ಕಗಳು ಮೂಡತೊಡಗಿವೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಬೆರಳೆಣೆಕೆಯ ತಿಂಗಳುಗಳು ಮಾತ್ರ ಬಾಕಿ ಉಳಿದಿವೆ. ಈ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆಯ ಮಾತುಗಳಿಗೆ ರೆಕ್ಕೆ ಪುಕ್ಕಗಳು ಮೂಡತೊಡಗಿವೆ.

ಇದಕ್ಕೆ ಇಂಬು ನೀಡುವಂತೆ ಶನಿವಾರ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಆರ್.ಟಿ ನಗರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಆಗಮಿಸಿ ಚರ್ಚೆ ನಡೆಸಿದರು. ಸರಕಾರ ರಚನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ರಮೇಶ್ ಜಾರಕಿಹೊಳಿ ಮತ್ತೆ ಮಂತ್ರಿಗಿರಿಗಾಗಿ ಲಾಭಿ ನಡೆಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಈ ಹಿಂದೆ ಅಶ್ಲೀಲ‌ ಸಿಡಿ ಪ್ರಕರಣದಿಂದ ಮಂತ್ರಿ ಸ್ಥಾನ‌ ಕಳೆದುಕೊಂಡಿದ್ದ ರಮೇಶ್ ಜಾರಕಿಹೊಳಿ, ಸಚಿವ ಸ್ಥಾನದ ಮೇಲೆ ಮತ್ತೆ ಕಣ್ಣಿಟ್ಟಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ.

ಈಗಾಗಲೇ ಹೈಕಮಾಂಡ್ ನಾಯಕರು, ಬಿಎಲ್ ಸಂತೋಷ್‌ ಬಳಿ ಬೇಡಿಕೆ ಇಟ್ಟಿರುವ ರಮೇಶ್ ಜಾರಕಿಹೊಳಿ, ನಿನ್ನೆಯೂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT