ಸಿದ್ದರಾಮಯ್ಯ 
ರಾಜಕೀಯ

'ಕೈ' ಕಾರ್ಯಕರ್ತನಾಗಿದ್ದರೆ, ಆತನನ್ನು ಬಿಡಿಸಿದ್ದು ಯಾಕೆ?: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಮತ್ತೆ ಕಿಡಿ

ತಮ್ಮ ಕಾರಿನ ಮೇಲೆ ಮೊಟ್ಟೆ ಎಸೆದ ಆರೋಪಿ ಕಾಂಗ್ರೆಸ್ ಕಾರ್ಯಕರ್ತ ಎಂಬ ಸುದ್ದಿ ಪ್ರಸಾರವಾಗುತ್ತಲೇ ಈ ಕುರಿತು ಸರಣಿ ಟ್ವೀಟ್ ಮೂಲಕ ಬಿಜೆಪಿಗೆ ಕುಟುಕಿರುವ ಸಿದ್ದರಾಮಯ್ಯ, ಆಪರೇಷನ್ ಕಮಲ' ಎಂದರೆ ಶಾಸಕರಿಗೆ ಮಾತ್ರ ಅಲ್ಲ.. ಈಗ ಬೀದಿ ಪುಂಡರಿಗೂ ಆಪರೇಷನ್ ಕಮಲ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಬೆಂಗಳೂರು: ತಮ್ಮ ಕಾರಿನ ಮೇಲೆ ಮೊಟ್ಟೆ ಎಸೆದ ಆರೋಪಿ ಕಾಂಗ್ರೆಸ್ ಕಾರ್ಯಕರ್ತ ಎಂಬ ಸುದ್ದಿ ಪ್ರಸಾರವಾಗುತ್ತಲೇ ಈ ಕುರಿತು ಸರಣಿ ಟ್ವೀಟ್ ಮೂಲಕ ಬಿಜೆಪಿಗೆ ಕುಟುಕಿರುವ ಸಿದ್ದರಾಮಯ್ಯ, ಆಪರೇಷನ್ ಕಮಲ' ಎಂದರೆ ಶಾಸಕರಿಗೆ ಮಾತ್ರ ಅಲ್ಲ.. ಈಗ ಬೀದಿ ಪುಂಡರಿಗೂ ಆಪರೇಷನ್ ಕಮಲ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಈ ಕುರಿತ ಸರಣಿ ಟ್ವೀಟ್ ನಲ್ಲಿ ಬಿಜೆಪಿ ವಿರುದ್ಧ ಕಿಡಿಕಾರಿರುವ ಸಿದ್ದರಾಮಯ್ಯ, 'ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ರಾತೋರಾತ್ರಿ ಪೊಲೀಸ್ ಠಾಣೆಗೆ ಹೋಗಿ ಬಿಡಿಸಿಕೊಂಡು ಯಾಕೆ ಬರಬೇಕಾಗಿತ್ತು? ಕಾಂಗ್ರೆಸ್‌ನವನೆಂದು ಹೇಳಿಕೊಂಡರೆ ಮಾತ್ರ ಪೊಲೀಸರಿಂದ ಬಿಡಿಸ್ತೇನೆ ಎಂದು ಷರತ್ತು ಹಾಕಿ ಬಿಡುಗಡೆ ಮಾಡಿದಿರಾ?.. 'ಆಪರೇಷನ್ ಕಮಲ' ಎಂದರೆ ಶಾಸಕರಿಗೆ ಮಾತ್ರ ಎಂದು ತಿಳಿದುಕೊಂಡಿದ್ದೆವು. ಈಗ ಬೀದಿ ಪುಂಡರ 'ಆಪರೇಷನ್ ಕಮಲ' ಕೂಡಾ ಬಿಜೆಪಿ ನಡೆಸುತ್ತದೆ ಎಂದು‌ ಮಡಿಕೇರಿಯಲ್ಲಿ ಸಾಬೀತಾಗಿದೆ ಎಂದು ಹೇಳಿದ್ದಾರೆ.

ಅಂತೆಯೇ ಬಿಜೆಪಿಯ ಇಂತಹ ನಾಟಕಗಳೆಲ್ಲ ಹಳತಾಗಿದೆ. ಮೊಟ್ಟೆ ಎಸೆದವ ಕಾಂಗ್ರೆಸ್ ಪಕ್ಷದವನಾಗಿದ್ದರೆ ಅವನನ್ನು ಮೊದಲು ಜೈಲಿಗೆ ಕಳಿಸಿ. ನಿಮಗ್ಯಾಕೆ ಅವನ ಹಿತರಕ್ಷಣೆಯ ಉಸಾಬರಿ ಬಿಜೆಪಿ ಎಂದು ಕಿಡಿಕಾರಿದ್ದಾರೆ.

ಈ ಹಿಂದೆ ಮೊಟ್ಟೆ ಎಸೆದ ಆರೋಪಿ ಸಂಪತ್ ವಿಡಿಯೋದಲ್ಲಿ ತಾನು, ನಾನು ಕಾಂಗ್ರೆಸ್ ಕಾರ್ಯಕರ್ತನೆ, ಕಾಂಗ್ರೆಸ್​ನಲ್ಲಿ ಹಿಂದೂಗಳಿಲ್ವಾ? ವಿಪಕ್ಷ ನಾಯಕ ಸಿದ್ದರಾಮಯ್ಯ ಹಿಂದೂಗಳೂ ದನದ ಮಾಂಸ ತಿಂತಾರೆ ಅಂದಿದ್ದು ತಪ್ಪಲ್ವಾ? ಹಿಂದೂ ವಿರೋಧಿ ಹೇಳಿಕೆಯಿಂದ ನೋವಾಗಿತ್ತು. ಹೀಗಾಗಿ ಮೊಟ್ಟೆ ಹೊಡೆದೆ ಎಂದು ಹೇಳಿಕೆ ನೀಡಿದ್ದ. ಈ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದ್ದಂತೆಯೇ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT