ರಾಜಕೀಯ

ಮಾಂಸ ತಿಂದು ದೇವಸ್ಥಾನಕ್ಕೆ ಹೋಗುತ್ತೇನೆ ಅನ್ನೋದು ಭಂಡತನ: ಬಿ ವೈ ವಿಜಯೇಂದ್ರ ವಾಗ್ದಾಳಿ

Shilpa D

ಗದಗ: ಯಾರು ಏನು ಬೇಕಾದರೂ ತಿನ್ನಬಹುದು, ಅದು ಅವರ ಸ್ವಾತಂತ್ರ್ಯ, ಆದರೆ ಮಾಂಸ ತಿಂದು ದೇವಸ್ಥಾನಕ್ಕೆ ಹೋಗುವ ಭಂಡತನವನ್ನು ಯಾರೂ ಒಪ್ಪುವುದಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ಧಾರೆ.

ಗದಗದಲ್ಲಿ ಮಾತನಾಡಿದ ವಿಜಯೇಂದ್ರ ಅವರು ‘ಈ ರಾಜ್ಯದಲ್ಲಿ ಸಂಸ್ಕೃತಿ ಪರಂಪರೆ ಇದೆ.. ಧಾರ್ಮಿಕ ಶ್ರದ್ಧೆ ಇದೆ, ದೈವವನ್ನು ನಂಬಿ ಜೀವನ ನಡೆಸುವ ಅಪಾರ ಜನ ಸಂಖ್ಯೆ ಇದೆ. ಉನ್ನತ ಸ್ಥಾನದಲ್ಲಿರುವವರು ಬಹಿರಂಗವಾಗಿ ಹೇಳಿಕೆ ನೀಡ್ತಿದ್ದಾರೆ. ರಾಜಕಾರಣಿಗಳ ಹೇಳಿಕೆಗಳಿಂದ ಇತರರಿಗೆ ಘಾಸಿ ಆಗಬಾರದು ಎಂದು ತಿಳಿಸಿದ್ಧಾರೆ.

ಅಧಿಕಾರಕ್ಕೆ ಬಂದೇ ಬಿಟ್ಟಿದ್ದೇವೆ ಅನ್ನೋ ವಿಶ್ವಾಸದಲ್ಲಿ ಕಾಂಗ್ರೆಸ್ ಇದೆ. ಬಿಜೆಪಿ ಹೈಕಮಾಂಡ್​ ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರಿಗೆ ಉನ್ನತ ಸ್ಥಾನ ಕೊಟ್ಟಿದ್ದು ಕಾಂಗ್ರೆಸ್ ಗೆ ಆಘಾತ ಆಗಿದೆ ಎಂದು ಲೇವಡಿ ಮಾಡಿದರು.

SCROLL FOR NEXT