ನಕ್ಷೆ ಬಿಡುಗಡೆ 
ರಾಜಕೀಯ

ಕಾಂಗ್ರೆಸ್ ನಿಂದ ಭಾರತ ಜೋಡೋ ಯಾತ್ರೆಯ ನಕ್ಷೆ ಬಿಡುಗಡೆ

ಕಾಂಗ್ರೆಸ್ ಪಕ್ಷ ಶುಕ್ರವಾರ ಭಾರತ ಜೋಡೋ ಯಾತ್ರೆಯ ನಕ್ಷೆಯನ್ನು ಬಿಡುಗಡೆಗೊಳಿಸಿದ್ದು, 3500 ಕಿಲೋಮೀಟರ್‌ಗಳು ಪ್ರಯಾಣ ಬೆಳೆಸಲು ನಿರ್ಧರಿಸಿದೆ.

ಬೆಂಗಳೂರು: ಕಾಂಗ್ರೆಸ್ ಪಕ್ಷ ಶುಕ್ರವಾರ ಭಾರತ ಜೋಡೋ ಯಾತ್ರೆಯ ನಕ್ಷೆಯನ್ನು ಬಿಡುಗಡೆಗೊಳಿಸಿದ್ದು, 3500 ಕಿಲೋಮೀಟರ್‌ಗಳು ಪ್ರಯಾಣ ಬೆಳೆಸಲು ನಿರ್ಧರಿಸಿದೆ.

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ ಜೋಡೋ ಯಾತ್ರೆಯಲ್ಲಿ ಕನ್ಯಾಕುಮಾರಿ, ತಿರುವನಂತಪುರ, ಕೊಚ್ಚಿ, ಮೈಸೂರು, ಬಳ್ಳಾರಿ, ರಾಯಚೂರಿನಿಂದ ಪ್ರಾರಂಭಿಸಿ ಶ್ರೀನಗರಕ್ಕೆ ತಲುಪುವ ಯೋಜನೆ ಹಾಕಿಕೊಂಡಿದೆ.

ಈ ಯಾತ್ರೆಯನ್ನು ಆರ್ಥಿಕ ಅಸಮಾನತೆಯನ್ನು ಹೋಗಲಾಡಿಸಲು, ಸಾಮಾಜಿಕ ಧ್ರುವೀಕರಣದಿಂದ ಮುಕ್ತಿ ಪಡೆಯಲು ರಾಜಕೀಯ ಉದ್ವಿಗ್ನತೆಯನ್ನು ಹೋಗಲಾಡಿಸಿ, ಆರೋಗ್ಯಕರ ರಾಜಕಾರಣದ ಆರಂಭಕ್ಕಾಗಿ ಕೈಗೊಳ್ಳುತ್ತಿರುವುದಾಗಿ ಕಾಂಗ್ರೆಸ್ ಹೇಳಿದ್ದು, ಎಲ್ಲರೂ ಒಂದಾಗಿ ಭಾರತವನ್ನು ಒಗ್ಗೂಡಿಸೋಣ ಎಂದು ಕಾಂಗ್ರೆಸ್ ಕರೆ ನೀಡಿದೆ.

ದೇಶದಲ್ಲಿ 20 ರಿಂದ 24 ವರ್ಷದ ಶೇ. 42 ರಷ್ಟು ಯುವ ಜನತೆ ನಿರುದ್ಯೋಗಿಗಳಾಗಿದ್ದಾರೆ. ಬನ್ನಿ, ನಿರುದ್ಯೋಗದ ಜಾಲವನ್ನು ಮುರಿಯೋಣ, ಭಾರತವನ್ನು ಒಗ್ಗೂಡಿಸೋಣ ಎಂದು ಕಾಂಗ್ರೆಸ್ ಹೇಳಿದೆ.

ಇನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೂಡ ಹೆಜ್ಜೆಗಳನ್ನು ಜೋಡಿಸಿ, ದೇಶವನ್ನು ಒಂದಾಗಿಸಿ ಎಂದು ಆಹ್ವಾನ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT