ರಾಹುಲ್ ಗಾಂಧಿ(ಸಂಗ್ರಹ ಚಿತ್ರ) 
ರಾಜಕೀಯ

ಕಾಂಗ್ರೆಸ್ ನಿಂದ ಭಾರತ್ ಜೋಡೋ ಯಾತ್ರೆ: ನಾಳೆಯಿಂದ ಎರಡು ದಿನ ಬೆಂಗಳೂರಿನಲ್ಲಿ ನಾಯಕರಿಂದ ಸರಣಿ ಸಭೆ

ಕಾಂಗ್ರೆಸ್ ನಲ್ಲೀಗ ಭಾರತ್ ಜೋಡೋ (Bharat Jodo) ಯಾತ್ರೆಯ ಸಿದ್ಧತೆ. ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ, 2023ರ ವಿಧಾನಸಭಾ ಚುನಾವಣೆಗೆ ಸಿದ್ಧತೆ ಮತ್ತು ಇತರ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲು ಕಾಂಗ್ರೆಸ್ ನಾಯಕರು ನಾಳೆ ಮತ್ತು ನಾಡಿದ್ದು ಬೆಂಗಳೂರಿನಲ್ಲಿ ಸರಣಿ ಸಭೆಗಳನ್ನು ನಡೆಸಲಿದ್ದಾರೆ. 

ಬೆಂಗಳೂರು: ಕಾಂಗ್ರೆಸ್ ನಲ್ಲೀಗ ಭಾರತ್ ಜೋಡೋ (Bharat Jodo) ಯಾತ್ರೆಯ ಸಿದ್ಧತೆ. ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ, 2023ರ ವಿಧಾನಸಭಾ ಚುನಾವಣೆಗೆ ಸಿದ್ಧತೆ ಮತ್ತು ಇತರ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲು ಕಾಂಗ್ರೆಸ್ ನಾಯಕರು ನಾಳೆ ಮತ್ತು ನಾಡಿದ್ದು ಬೆಂಗಳೂರಿನಲ್ಲಿ ಸರಣಿ ಸಭೆಗಳನ್ನು ನಡೆಸಲಿದ್ದಾರೆ. 

ಕಾಂಗ್ರೆಸ್‌ನ ಹಿರಿಯ ನಾಯಕರಾದ ರಣದೀಪ್ ಸಿಂಗ್ ಸುರ್ಜೇವಾಲಾ, ದಿಗ್ವಿಜಯ್ ಸಿಂಗ್, ಜೈರಾಮ್ ರಮೇಶ್, ಸಿದ್ದರಾಮಯ್ಯ, ಪಕ್ಷದ ಶಾಸಕರು, ಕೆಪಿಸಿಸಿ ಪದಾಧಿಕಾರಿಗಳು, 2018ರ ವಿಧಾನಸಭೆ ಮತ್ತು 2019ರ ಲೋಕಸಭೆ ಅಭ್ಯರ್ಥಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಸೆಪ್ಟೆಂಬರ್ 10 ರಿಂದ ಪ್ರಾರಂಭವಾಗುವ ರಾಜ್ಯ ವಿಧಾನಮಂಡಲ ಅಧಿವೇಶನದ ಪಕ್ಷದ ಕಾರ್ಯತಂತ್ರವನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳು ಮತ್ತು ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಪರಿಸ್ಥಿತಿ ಸೇರಿದಂತೆ ವಿವಿಧ ವಿಷಯಗಳನ್ನು ಪಕ್ಷವು ಕಲಾಪದಲ್ಲಿ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ.

ಮುಂದಿನ ವಾರ ಗಣೇಶ ಹಬ್ಬಕ್ಕೆ ವಿನಾಯಕ ದಾಮೋದರ ಸಾವರ್ಕರ್ ಅವರ ಪೋಸ್ಟರ್ ಹಂಚಿದ್ದಕ್ಕೆ ಬಿಜೆಪಿ ವಿರುದ್ಧ ಶಿವಕುಮಾರ್ ಇದೇ ಸಂದರ್ಭದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಅಭಿವೃದ್ಧಿಯ ಬಗ್ಗೆ ಮಾತನಾಡುವ ಸ್ಥಿತಿಯಲ್ಲಿಲ್ಲ. ಸಮಾಜವನ್ನು ವಿಭಜಿಸಲು ಅವರು ಇಂತಹ ವಿಷಯಗಳನ್ನು ಅವಲಂಬಿಸಿದ್ದಾರೆ. ಸಾವರ್ಕರ್ ಮತ್ತು ಗಣೇಶ ಹಬ್ಬಕ್ಕೂ ಏನು ಸಂಬಂಧ ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT