ಪ್ರಹ್ಲಾದ್ ಜೋಶಿ 
ರಾಜಕೀಯ

ಭೌದ್ದಿಕ ದಿವಾಳಿತನ, ಕಾಂಗ್ರೆಸ್ ನಾಯಕತ್ವದ ದುರಹಂಕಾರದಿಂದ ಹಿರಿಯರು ಪಕ್ಷ ತೊರೆಯುವಂತಾಗಿದೆ: ಜೋಶಿ

ಕಾಂಗ್ರೆಸ್ ಪಕ್ಷದಲ್ಲಿನ ನಾಯಕತ್ವ, ದುರಹಂಕಾರ ಮತ್ತು ಭೌದ್ದಿಕ ದಿವಾಳಿಕೋರತನದ ವಿರುದ್ಧ ಅಲ್ಲಿನ ಹಿರಿಯರು ಪಕ್ಷ ತೊರೆಯುವಂತಾಗಿದೆ.

ಧಾರವಾಡ: ಕಾಂಗ್ರೆಸ್ ಪಕ್ಷದಲ್ಲಿನ ನಾಯಕತ್ವ, ದುರಹಂಕಾರ ಮತ್ತು ಭೌದ್ದಿಕ ದಿವಾಳಿಕೋರತನದ ವಿರುದ್ಧ ಅಲ್ಲಿನ ಹಿರಿಯರು ಪಕ್ಷ ತೊರೆಯುವಂತಾಗಿದೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರಾಗಿದ್ದ ಗುಲಾಬ್ ನಬೀ ಅಜಾದ್ ಈಗ ಪಕ್ಷ ತೊರೆದಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದರು.

ಧಾರವಾಡದಲ್ಲಿ ಮಾತನಾಡಿದ ಅವರು, ಈ ಹಿಂದೆಯೂ ಸಾಕಷ್ಟು ಹಿರಿಯ ನಾಯಕರು ಪಕ್ಷದ ದುರಾಡಳಿತದಿಂದ ಮನನೊಂದು ಹೊರ ಬಂದಿದ್ದಾರೆ, ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಅನುಭವಿಸಿ ಈಗ ತೊರೆದಿದ್ದಾರೆ ಎಂಬಂತೆ ಸಾಕಷ್ಟು ಪ್ರತಿಕ್ರಿಯೆ ಬಂದಿವೆ. ಪಕ್ಷದಲ್ಲಿ ಸ್ಥಾನಮಾನ ಕೊಟ್ಟಿದ್ದೀರಾ ಅಂದರೆ ಆ ಸ್ಥಾನಮಾನ ಅವಧಿ ಮುಗಿದ ಬಳಿಕವೂ ಯಾವುದೇ ವ್ಯಕ್ತಿಯಾದರೂ ಸರಿಯೇ ಅವರ ಘನತೆ, ಗೌರವಕ್ಕೆ ತಕ್ಕಂತೆ ನಡೆದುಕೊಳ್ಳಬೇಕು. ಅಲ್ಲಿನ ನಾಯಕರು, ಅಧ್ಯಕ್ಷರು ಆ ರೀತಿ ನಡೆದುಕೊಳ್ಳಬೇಕು. ಆದರೆ ಕಾಂಗ್ರೆಸ್ ಪಕ್ಷದಲ್ಲಿ ದುರಹಂಕಾರ ನಡೆಯಿಂದ ಮನನೊಂದು ಪಕ್ಷ ತೊರೆದಿದ್ದಾರೆ ಎಂದರು.

ಚಿತ್ರದುರ್ಗದ ಮುರುಘಾ ಶರಣರ ವಿರುದ್ದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದಡಿ ದೂರು ದಾಖಲಿಸಿದ್ದು, ಈಗಾಗಲೇ ತನಿಖೆ ಕೂಡ ಆರಂಭಗೊಂಡಿದೆ. ಹೀಗಾಗಿ ಈ ಬಗ್ಗೆ ಹೆಚ್ಚು ಮಾತನಾಡುವ ಅಗತ್ಯವಿಲ್ಲ. ನಾಡಿನ ಪ್ರತಿಷ್ಠಿತ ಶ್ರೀಗಳು ಅವರಾಗಿದ್ದು, ಹೀಗಾಗಿ ಸೂಕ್ತವಾದ ನ್ಯಾಯಯುತ ತನಿಖೆ ಆಗಲಿ ಎಂದು ಸಚಿವ ಪ್ರಹ್ಲಾದ ಜೋಶಿ ಪ್ರತಿಕ್ರಿಯೆ ನೀಡಿದರು.

ಎಲ್‌ಅಂಡ್‌ಟಿ ಮತ್ತು ಎಚ್‌ಡಿಎಂಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ, ಪ್ರತಿ ಪ್ರದೇಶದಲ್ಲಿ ಸಾರ್ವಜನಿಕರ ಅಗತ್ಯಕ್ಕೆ ಅನುಗುಣವಾಗಿ ಕುಡಿಯುವ ನೀರು ಒದಗಿಸಲಾಗುವುದು ಎಂದು ಭರವಸೆ ನೀಡಿದರು. ಹೊಸ ಸಿಬ್ಬಂದಿ ನೇಮಕ ಮಾಡಿ ಕಾಮಗಾರಿ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT