ಮಂಜುನಾಥ್ ಪ್ರಸಾದ್ 
ರಾಜಕೀಯ

ರಾಜಕಾರಣಕ್ಕೆ ಕಂದಾಯ ಸಚಿವರ ಕ್ಲಾಸ್ ಮೇಟ್: ವಿಧಾನಸಭೆ ಚುನಾವಣೆಯಲ್ಲಿ ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಸ್ಪರ್ಧೆ!

1994ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರಧಾನ ಕಾರ್ಯದರ್ಶಿ ಎನ್‌ ಮಂಜುನಾಥ್‌ ಪ್ರಸಾದ್‌ ಅವರು 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ.

ಬೆಂಗಳೂರು: 1994ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪ್ರಧಾನ ಕಾರ್ಯದರ್ಶಿ ಎನ್‌ ಮಂಜುನಾಥ್‌ ಪ್ರಸಾದ್‌ ಅವರು 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ.

ಇದರ ಬೆನ್ನಲ್ಲೆ ಭಾನುವಾರ ತುಮಕೂರಿನಲ್ಲಿ ನಡೆದ ಭೋವಿ ಸಮುದಾಯದ ಸಮಾವೇಶದಲ್ಲಿ ಸಿಎಂ ಬೊಮ್ಮಾಯಿ  ಮಂಜುನಾಥ್ ಪ್ರಸಾದ್‌ ಅವರನ್ನು ಹೊಗಳಿದ್ದಾರೆ. ಎಂತಹ ಸಂದರ್ಭವನ್ನೂ ಕೂಡ ಎದುರಿಸುವ ಸಾಮರ್ಥ್ಯ ಅವರಿಗಿದೆ. ಅವರು ಈ ಹುದ್ದೆಯನ್ನ ಕೇಳಿರಲಿಲ್ಲ, ನಾನೇ ಕರೆದು ಕೊಟ್ಟಿದ್ದೇನೆ. ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಪರಿಹಾರ ಮಾಡುವ ವ್ಯಕ್ತಿ ಮಂಜುನಾಥ್ ಪ್ರಸಾದ್‌. ವೆಸ್ಟ್ ಬೆಂಗಾಲ್ ನಲ್ಲಿ ಅವರು ಕೆಲಸ ಮಾಡಿ ಅನುಭವ ಹೊಂದಿದ್ದಾರೆ. ಅವರ ಯಶೋಗಾಥೆಯನ್ನು ನೀವು ಸ್ಫೂರ್ತಿಯಾಗಿ ತೆಗೆದುಕೊಳ್ಳಬೇಕು ಎಂದರು.

ಪ್ರಸಾದ್ ರಾಜಕೀಯ ಸಂಪರ್ಕ ಹೊಂದಿದ್ದಾರೆ. ಕಂದಾಯ ಸಚಿವ ಆರ್.ಅಶೋಕ ಅವರ ಸಹಪಾಠಿಯಾಗಿದ್ದರು. ಅವರ ಅತ್ತೆ ಮಂಗಮ್ಮ ಮುನಿಸ್ವಾಮಿ ಅವರು ಕೋಲಾರ ಜಿಪಂ ಮಾಜಿ ಅಧ್ಯಕ್ಷರಾಗಿದ್ದರು ಮತ್ತು ಅವರ ಮಾವ ಮುನಿಸ್ವಾಮಿ ಐಎಎಸ್ ಅಧಿಕಾರಿಯಾಗಿದ್ದರು ಎಂದು ಮಾಹಿತಿ ನೀಡಿದರು.

ಹಳೇ ಮೈಸೂರು ಭಾಗದ ಕೊರಟಗೆರೆ, ನೆಲಮಂಗಲ, ಆನೇಕಲ್, ಕೆಜಿಎಫ್ ಸೇರಿದಂತೆ ಯಾವುದೇ ಎಸ್‌ಸಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಭರವಸೆ ನೀಡಿದರೆ  ಮಂಜುನಾಥ್ ಪ್ರಸಾದ್ ವಿಆರ್‌ಎಸ್ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ನಿವೃತ್ತ ಐಎಎಸ್ ಅಧಿಕಾರಿ ಬಿ.ಎಚ್.ಅನಿಲ್ ಕುಮಾರ್ ಈಗಾಗಲೇ ಕೊರಟಗೆರೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪ್ರಚಾರ ನಡೆಸಿದ್ದಾರೆ. ಹೀಗಾಗಿ, ಮಂಜುನಾಥ್ ಪ್ರಸಾದ್ ಅವರು ಬೇರೆ ಕ್ಷೇತ್ರ ಹುಡುಕಬೇಕಾಗಬಹುದು ಎಂದು ಮೂಲಗಳು ತಿಳಿಸಿವೆ.

ರಾಜಕೀಯ ಅವರನ್ನು ಸದ್ಯಕ್ಕೆ ಬೆಂಬಲಿಸುತ್ತಿರಬಹುದು, ಆದರೆ ಅವರ ಸ್ಥಾನಮಾನಕ್ಕೆ ಹೊಂದುವಂತ, ಜಾತಿ ಸಮೀಕರಣ ಲೆಕ್ಕಾಚಾರದಲ್ಲಿ ಅವರು ಕ್ಷೇತ್ರ ಆಯ್ಕೆ ಮಾಡಬೇಕಾಗ ಅವಶ್ಯಕತೆಯಿದೆ ಎಂದು ರಾಜಕೀಯ ಪಂಡಿತರು ಅಭಿಪ್ರಾಯ ಪಟ್ಟಿದ್ದಾರೆ.

ಇನ್ನೂ ಈ ವಿಷಯದ ಸಂಬಂಧ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿದ ಎನ್.ಮಂಜುನಾಥ್ ಪ್ರಸಾದ್ ರಾಜಕೀಯ ಸೇರುವ ವದಂತಿಗಳ ಬಗ್ಗೆ ತೆರೆ ಎಳೆದಿದ್ದಾರೆ. ನನಗೆ ಇನ್ನೂ 2.5 ವರ್ಷಗಳ ಸೇವಾವಧಿ ಬಾಕಿಯಿದೆ, ಹೀಗಿರುವಾಗ ನಾನು ವಿಆರ್ ಎಸ್ ಏಕೆ ತೆಗೆದುಕೊಳ್ಳಲಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT