ಬಿಜೆಪಿಗೆ ಕಾಂಗ್ರೆಸ್ ತಿರುಗೇಟು 
ರಾಜಕೀಯ

ಮಹಮದ್ ಗಡ್ಕರಿ ಶೇಕ್, ಬೊಮ್ಮಾಯುಲ್ಲಾ ಖಾನ್, ಜಬ್ಬಾರ್ ಖಾನ್, ಅಶ್ವಾಖ್ ಇನಾಯತ್ ಖಾನ್ ಹೆಸರಿಂದ ಕರೆಯಬಹುದಾ ಸಿ.ಟಿ ರವಿ ಅವರೇ?

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸಿದ್ರಾಮುಲ್ಲಾಖಾನ್ ಎಂದಿದ್ದ ಬಿಜೆಪಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ತಿರುಗೇಟು ನೀಡಿದೆ. ಮುಖ್ಯಮಂತ್ರಿ ಸೇರಿದಂತೆ ಬಿಜೆಪಿ ನಾಯಕರ ಹೆಸರು ಪ್ರಸ್ತಾಪಿಸಿ ಟಾಂಗ್ ಕೊಟ್ಟಿದೆ.

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸಿದ್ರಾಮುಲ್ಲಾಖಾನ್ ಎಂದಿದ್ದ ಬಿಜೆಪಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ತಿರುಗೇಟು ನೀಡಿದೆ. ಮುಖ್ಯಮಂತ್ರಿ ಸೇರಿದಂತೆ ಬಿಜೆಪಿ ನಾಯಕರ ಹೆಸರು ಪ್ರಸ್ತಾಪಿಸಿ ಟಾಂಗ್ ಕೊಟ್ಟಿದೆ.

ಬಿಜೆಪಿ ಸರಣಿ ಟ್ವಿಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್‌, ನಿಮ್ಮ ಹಲವು ನಾಯಕರಿಗೆ ​​ಈ ಹೆಸರಿಂದ ಕರೆಯಬಹುದೇ? ಎಂದು ಪ್ರಶ್ನಿಸಿದೆ. ಮುಖ್ಯಮಂತ್ರಿ ಬಸವರಾಜ್ ಬೊಯ್ಮಾಯಿಗೆ 'ಬೊಮ್ಮಾಯುಲ್ಲಾ ಖಾನ್' ಎನ್ನಬಹುದೇ. ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್‌ಗೆ 'ಜಬ್ಬಾರ್ ಖಾನ್', ಕಂದಾಯ ಸಚಿವ ಆರ್‌.ಅಶೋಕ್ 'ಅಶ್ವಾಖ್ ಇನಾಯತ್ ಖಾನ್' ಎಂದು ಹೆಸರಿಡುತ್ತೀರಾ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೆಸರು ಟ್ಯಾಗ್ ಮಾಡಿ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಕೇಂದ್ರ ಸಚಿವ ನಿತಿನ್ ಗಡ್ಕರಿಗೆ 'ಮಹಮದ್ ಗಡ್ಕರಿ ಶೇಕ್' ಎಂದು ಹೆಸರಿಡುವಿರಾ? ಎಂದು ಟ್ವೀಟ್​ ಮೂಲಕ ಕಾಂಗ್ರೆಸ್‌ ತಿರುಗೇಟು ನೀಡಿದೆ. ಈ ಎಲ್ಲ ಬಿಜೆಪಿ ನಾಯಕರು ಈ ಹಿಂದೆ ಯಾವಾಗಲೋ ಮುಸ್ಲಿಮರ ಟೋಪಿ, ಟಿಪ್ಪು ಪೇಟಾ ಧರಿಸಿರುವ ಫೋಟೊವನ್ನು ಕರ್ನಾಟಕ ಕಾಂಗ್ರೆಸ್ ಹಂಚಿಕೊಂಡಿದೆ. ಇತ್ತೀಚೆಗಷ್ಟೇ ಸಿಟಿ ರವಿ ಅವರು ಸಿದ್ರಾಮುಲ್ಲಾಖಾನ್ ಎಂದಿದ್ದಕ್ಕೆ ಕಾಂಗ್ರೆಸ್ ಗೆ ಉರಿ ಹತ್ತಿಕೊಂಡಿದೆ ಎಂದು ಟೀಕಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT