ಬಸವರಾಜ ಬೊಮ್ಮಾಯಿ 
ರಾಜಕೀಯ

'ವಯಸ್ಸಾಯ್ತು ಮನೆಯಲ್ಲಿರಿ, ಕಿರಿಯರಿಗೆ ಅವಕಾಶ ಕೊಡಿ': ಚುನಾವಣೆಯಲ್ಲಿ ಸ್ಪರ್ಧಿಸದಂತೆ ಹಿರಿಯ ನಾಯಕರ ಮನವೊಲಿಕೆ! ಬೊಮ್ಮಾಯಿ ಸಂಪುಟದ ಹಲವರಿಗೆ ಕೊಕ್!

ಇನ್ನು ಕೆಲವು ಬಿಜೆಪಿ ಶಾಸಕರು ಕೂಡ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಆರೋಗ್ಯ ಸೇರಿದಂತೆ ನಾನಾ ಕಾರಣಗಳಿಂದ ಸ್ಪರ್ಧಿಸುವುದಿಲ್ಲ ಎಂದು ಕೆಲವು ಹಿರಿಯ ನಾಯಕರು ಹೇಳಿದ್ದಾರೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ನಡೆಯಲು ಇನ್ನಿ ಕೆಲವೇ ತಿಂಗಳುಗಳು ಬಾಕಿಯಿವೆ. ಮುಂದಿನ ಪೀಳಿಗೆಯ ನಾಯಕರಿಗೆ ಅವಕಾಶ ಕಲ್ಪಿಸಲು ಚುನಾವಣೆಗೆ ಸ್ಪರ್ಧಿಸದಂತೆ ಮನವೊಲಿಸಲು ರಾಜ್ಯ ಬಿಜೆಪಿ 70 ವರ್ಷ ಮೇಲ್ಪಟ್ಟ ತನ್ನ ನಾಯಕರ ಪಟ್ಟಿಯನ್ನು ಸಿದ್ಧಪಡಿಸುತ್ತಿದೆ.ಇದರಲ್ಲಿ ಕೆಲವೊಂದು ಷರತ್ತುಗಳು ಅನ್ವಯವಾಗುತ್ತವೆ ಎಂದು ಮೂಲಗಳು ತಿಳಿಸಿವೆ.

ಸದ್ಯ ವಿಧಾನಸಭೆಯಲ್ಲಿ, ಬಿಜೆಪಿಯು 120 ಸ್ಥಾನಗಳನ್ನು ಹೊಂದಿದೆ. ಸವದತ್ತಿ ಕ್ಷೇತ್ರ ಪ್ರತಿನಿಧಿಸುತ್ತಿದ್ದ  ಆನಂದ ಮಾಮನಿ ಮತ್ತು ಹುಕ್ಕೇರಿ  ಶಾಸಕ ಉಮೇಶ ಕತ್ತಿ ನಿಧನರಾಗಿದ್ದಾರೆ.

ಶಿರಸಿಯನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರತಿನಿಧಿಸುತ್ತಿದ್ದಾರೆ. ಮೂರ್ನಾಲ್ಕು ಅವಧಿಗೆ ಚುನಾಯಿತರಾಗಿ 70 ವರ್ಷ ಮೀರಿದ ಶಾಸಕರು ಅನೇಕರಿದ್ದಾರೆ.

ಕೆಲವು ತಿಂಗಳ ಹಿಂದೆ, 79 ವರ್ಷದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಬಹಿರಂಗವಾಗಿ ಹೇಳಿದ್ದರು.

ಇನ್ನು ಕೆಲವು ಬಿಜೆಪಿ ಶಾಸಕರು ಕೂಡ ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಆರೋಗ್ಯ ಸೇರಿದಂತೆ ನಾನಾ ಕಾರಣಗಳಿಂದ ಸ್ಪರ್ಧಿಸುವುದಿಲ್ಲ ಎಂದು ಕೆಲವು ಹಿರಿಯ ನಾಯಕರು ಹೇಳಿದ್ದಾರೆ.

ಚುನಾವಣೆಯಿಂದ ದೂರ ಉಳಿಯುವಂತ  ನಾಯಕರ ಪಟ್ಟಿಯನ್ನು ಸಿದ್ಧಪಡಿಸುತ್ತಿದ್ದೇವೆ ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ. ಗೆಲುವಿಗಾಗಿ, ಜಾತಿಯ ಅಂಶ ಮತ್ತು ಜನಪ್ರಿಯ ಅವಶ್ಯಕತೆಯಿರುವುದರಿಂದ ಕೆಲವರು ನಾಯಕರು ಸ್ಪರ್ಧಿಸುವುದನ್ನು ತಡೆಯಲು ಸಾಧ್ಯವಿಲ್ಲ. ಕೆಲವು ಹಿರಿಯ ನಾಯಕರು 70 ವರ್ಷ ಮೇಲ್ಪಟ್ಟವರಾಗಿದ್ದರೂ ದೈಹಿಕವಾಗಿಯೂ ಸದೃಢರಾಗಿದ್ದಾರೆ. ನಾವು ಕೆಲವು ನಾಯಕರನ್ನು ಆಯ್ಕೆ ಮಾಡಬಹುದು ಮತ್ತು ಹೊಸಬರಿಗೆ ಅವಕಾಶ ನೀಡುವಂತೆ ಮನವೊಲಿಸಬಹುದು ಹೇಳಿದರು. ಆದರೆ ಅದೇ ಸಮಯದಲ್ಲಿ, ಈ ಹಿರಿಯ ನಾಯಕರನ್ನು ಸ್ಪರ್ಧೆಯಿಂದ ಬಲವಂತವಾಗಿ  ಹೊರದೂಡಲಾಗದು ಎಂದು ಅವರು ಹೇಳಿದರು.

ಇತ್ತೀಚೆಗಷ್ಟೇ ನಡೆದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಹಲವು ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿ, ಹೊಸಬರಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿತ್ತು. ಕರ್ನಾಟಕ ಬಿಜೆಪಿ ಕೂಡ ಇಲ್ಲಿ ಇಂತಹದ್ದೇ ಕಾರ್ಯವಿಧಾನವನ್ನು ನಿರೀಕ್ಷಿಸುತ್ತಿದೆ.

ಹಿರಿಯರಿಗೆ ಟಿಕೆಟ್ ನೀಡದಿರುವ ಸಂಬಂಧ ಕರ್ನಾಟಕ ಮತ್ತು ದೆಹಲಿಯಲ್ಲಿ ಚರ್ಚೆ ನಡೆಯುತ್ತಿವೆ.  ಈ ಪಟ್ಟಿಯನ್ನು ಈಗ ಪ್ರಕಟಿಸುವುದಿಲ್ಲ ಏಕೆಂದರೆ ಇದು ಪಕ್ಷದ ಭವಿಷ್ಯದ ಮೇಲೆ ಪರಿಣಾಮ ಬೀರಬಹುದು.  ಬಸವರಾಜ ಬೊಮ್ಮಾಯಿ ಸಂಪುಟದ ಕೆಲವು ಸಚಿವರಿಗೂ ಟಿಕೆಟ್ ನಿರಾಕರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಪ್ರತಿಪಕ್ಷ ಕಾಂಗ್ರೆಸ್ ಕೂಡ ಈ ತಂತ್ರವನ್ನು ಅನುಸರಿಸಿ ಚುನಾವಣೆಯಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡುವ ಸಾಧ್ಯತೆಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

SCROLL FOR NEXT