ಡಿಕೆ ಶಿವಕುಮಾರ್ ಭೇಟಿಯಾದ ಎಚ್‌. ವಿಶ್ವನಾಥ್ 
ರಾಜಕೀಯ

ಖರ್ಗೆ, ಸಿದ್ದರಾಮಯ್ಯ ನಂತರ ಡಿಕೆ ಶಿವಕುಮಾರ್ ಭೇಟಿಯಾದ ಎಚ್‌. ವಿಶ್ವನಾಥ್

ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು...

ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬೆನ್ನಲ್ಲೇ ಶುಕ್ರವಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ಹಳ್ಳಿ ಹಕ್ಕಿ ಮರಳಿ ಕಾಂಗ್ರೆಸ್ ಗೂಡಿಗೆ ಸೇರುವ ಲಕ್ಷಣಗಳು ಸ್ಪಷ್ಟವಾಗುತ್ತಿವೆ.

ಎಚ್. ವಿಶ್ವನಾಥ್ ಅವರು ಇಂದು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಡಿ. ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದರು. ಕಾಂಗ್ರೆಸ್‌ನ ಹಿರಿಯ ನಾಯಕ ಎಸ್. ಆರ್‌. ಪಾಟೀಲ್ ಸಹ ಜೊತೆಗಿದ್ದರು.

ವಿಶ್ವನಾಥ್ ಅವರು ತಮ್ಮನ್ನು ಭೇಟಿ ಮಾಡಿದ ಬಗ್ಗೆ ಡಿ. ಕೆ. ಶಿವಕುಮಾರ್ ಫೇಸ್‌ಬುಕ್ ಪೋಸ್ಟ್ ಹಾಕಿದ್ದು,  ವಿದೇಶದಿಂದ ಮರಳಿದ ನಂತರ ಎಂದಿನಂತೆ ಭೇಟಿ ಕಾರ್ಯಗಳಲ್ಲಿ ನಿರತನಾಗಿದ್ದೇನೆ. ಮಾಜಿ ಸಚಿವರಾದ ಎಚ್. ವಿಶ್ವನಾಥ್‌ ಅವರು ಇಂದು ಗೃಹ ಕಚೇರಿಯಲ್ಲಿ ನನ್ನನ್ನು ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು. ಇದೇ ವೇಳೆ ಪರಿಷತ್‌ ಮಾಜಿ ಅಧ್ಯಕ್ಷರಾದ ಎಸ್. ಆರ್. ಪಾಟೀಲ್‌ ಅವರು ತಮ್ಮ ಮಗಳ ಮದುವೆಗೆ ಆಗಮಿಸುವಂತೆ ನನ್ನನ್ನು ಆಹ್ವಾನಿಸಿದರು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೋಮಾ ಸ್ಥಿತಿಯಲ್ಲಿ ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ? ವದಂತಿ ಬೆನ್ನಲ್ಲೇ ದಿಢೀರ್ Video ಬಿಡುಗಡೆ ಮಾಡಿದ ಇರಾನ್; ಸತ್ಯ ಮುಚ್ಚಿಡುವ ಯತ್ನವೇ..?

ಇಡೀ ದೇಹಕ್ಕೆ ಹರಡಿದ cancer, Joe Biden ಆರೋಗ್ಯ ಮತ್ತಷ್ಟು ಕ್ಷೀಣ; BBC ಸಂದರ್ಶನದಲ್ಲಿ ಪುತ್ರ ಹಂಟರ್ ಕಳವಳ

KBC ವೇದಿಕೆಯಲ್ಲಿ ಆಮಿರ್ ಖಾನ್‌; ‘4ನೇ ಮದುವೆ ಯಾವಾಗ?’; ಕಾಲೆಳೆದ ನೆಟ್ಟಿಗರು, Amitabh bachchan ಶೋ Promoಗೆ ಕಮೆಂಟ್‌ಗಳ ಮಹಾಪೂರ..!

40 ಕೋಟಿ ಯುವಕರು ದೇಶದ ನಿಜವಾದ ಶಕ್ತಿ, ಆದರೆ ನಿರುದ್ಯೋಗ ತಾಂಡವವಾಡುತ್ತಿದೆ: ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿ

Toxic Trailer: ನಾನು ಬರೋ ಸಮಯ ಬಂದಿದೆ ಎಂದ ಯಶ್, ನಾವೆಲ್ಲರೂ ಕಾಯುತ್ತಿದ್ದೇವೆ ಎಂದ ಶಿವಣ್ಣ!