ಸಂಗ್ರಹ ಚಿತ್ರ 
ರಾಜಕೀಯ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಂದರೂ ಕುರ್ಚಿ ಬಿಟ್ಟು ಎದ್ದು ನಿಲ್ಲದ ಸಿದ್ದರಾಮಯ್ಯ: ವಿಡಿಯೋ ವೈರಲ್

ಕಲ್ಯಾಣ ಕ್ರಾಂತಿ ಸಮಾವೇಶ ಪಾಲ್ಗೊಳ್ಳಲು ವೇದಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸಿದರೂ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಎದ್ದು ನಿಲ್ಲದೆ ಅಗೌರವ ತೋರಿದ್ದಾರೆಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕಲಬುರಗಿ: ಕಲ್ಯಾಣ ಕ್ರಾಂತಿ ಸಮಾವೇಶ ಪಾಲ್ಗೊಳ್ಳಲು ವೇದಿಕೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸಿದರೂ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಎದ್ದು ನಿಲ್ಲದೆ ಅಗೌರವ ತೋರಿದ್ದಾರೆಂಬ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಕಲಬುರಗಿಗೆ ಖರ್ಗೆ ಅವರ ಚೊಚ್ಚಲ ಭೇಟಿ ಇದಾಗಿತ್ತು. ಈ ಹಿನ್ನೆಲೆಯಲ್ಲಿ ಕಲ್ಯಾಣ-ಕರ್ನಾಟಕದ ಏಳು ಜಿಲ್ಲಾ ಕಾಂಗ್ರೆಸ್ ಘಟಕಗಳು ಶನಿವಾರ ಅದ್ಧೂರಿ ಸ್ವಾಗತ ಕೋರುವ ಸಮಾವೇಶವನ್ನು ಆಯೋಜಿಸಿದ್ದವು.

ಖರ್ಗೆ ಅವರು ವೇದಿಕೆ ಬಳಿ ಬಂದಾಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತಿತರ ಮುಖಂಡರು ಎದ್ದು ನಿಂತು ಗೌರವ ಸೂಚಿಸಿದರು. ಖರ್ಗೆ ಅವರನ್ನು ವೇದಿಕೆಗೆ ಕರೆತರಲು ಡಿಕೆ.ಶಿವಕುಮಾರ್ ಅವರು ಮೆಟ್ಟಿಲು ಬಳಿ ತೆರಳಿದರು. ಆದರೆ ಸಿದ್ದರಾಮಯ್ಯ ಅವರು ಮಾತ್ರ ಕುಳಿತಿದ್ದ ಕುರ್ಚಿಯಿಂದ ಮೇಲೆ ಎದ್ದು ನಿಂತಿರಲಿಲ್ಲ. ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಸಂಬಂಧ ಖರ್ಗೆ ಅವರ ಕಟ್ಟಾ ಅನುಯಾಯಿಯಾಗಿರುವ ಕೆಪಿಸಿಸಿ ಉಪಾಧ್ಯಕ್ಷ ಡಿ.ಶರಣಪ್ರಕಾಶ್ ಪಾಟೀಲ್ ಅವರನ್ನು ಸಂಪರ್ಕಿಸಲಾಗಿದ್ದು, ಈ ಘಟನೆಯನ್ನು ನಾನು ಗಮನಿಸಲಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT