ಜನಾರ್ದನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ ನೂತನ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಭಾಗಿ 
ರಾಜಕೀಯ

ಗಣಿಧಣಿ ಜನಾರ್ದನ ರೆಡ್ಡಿ ರಾಜಕೀಯ ಸೆಕೆಂಡ್ ಇನ್ನಿಂಗ್ಸ್ ಗಂಗಾವತಿಗೆ ಶಿಫ್ಟ್?: ರೆಡ್ಡಿ ಅನುಪಸ್ಥಿತಿಯಲ್ಲಿ ನೂತನ ಗೃಹ ಪ್ರವೇಶ

ಬಿಜೆಪಿ ಮಾಜಿ ಸಚಿವ ಬಳ್ಳಾರಿಯ ಗಣಿಧಣಿ ಜನಾರ್ದನ ರೆಡ್ಡಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನಿಂದ ರಾಜಕೀಯದ ಮತ್ತೊಂದು ಎರಡನೇ ಇನ್ನಿಂಗ್ಸ್ ಆರಂಭಿಸುವುದು ಬಹುತೇಕ ಖಚಿತವಾಗಿದೆ. 

ಗಂಗಾವತಿ (ಕೊಪ್ಪಳ ಜಿಲ್ಲೆ): ಬಿಜೆಪಿ ಮಾಜಿ ಸಚಿವ ಬಳ್ಳಾರಿಯ ಗಣಿಧಣಿ ಜನಾರ್ದನ ರೆಡ್ಡಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನಿಂದ ರಾಜಕೀಯದ ಮತ್ತೊಂದು ಎರಡನೇ ಇನ್ನಿಂಗ್ಸ್ ಆರಂಭಿಸುವುದು ಬಹುತೇಕ ಖಚಿತವಾಗಿದೆ. 

ಇದರ ಆರಂಭವಾಗಿ ನಾಂದಿಯಾಗಿ ಇಂದು ಗಂಗಾವತಿಯಲ್ಲಿ ಅವರ ನೂತನ ಗೃಹಪ್ರವೇಶ ಸಮಾರಂಭ ಏರ್ಪಟ್ಟಿದೆ. ವಿಶೇಷವೆಂದರೆ ಜನಾರ್ದನ ರೆಡ್ಡಿಯವರ ಅನುಪಸ್ಥಿತಿಯಲ್ಲಿ ಅವರ ಪತ್ನಿ ಅರುಣಾ ಲಕ್ಷ್ಮಿ ಪುರೋಹಿತರ ನೇತೃತ್ವದಲ್ಲಿ ಗೃಹ ಪ್ರವೇಶ ಶಾಸ್ತ್ರ ನೆರವೇರಿಸಿದ್ದಾರೆ. ಕಾರ್ಯಕ್ರಮದಲ್ಲಿ ಕುಟುಂಬದ ಆಪ್ತರು, ಸ್ನೇಹಿತರು ಮಾತ್ರ ಪಾಲ್ಗೊಂಡಿದ್ದಾರೆ. 

ಜನಾರ್ದನ ರೆಡ್ಡಿಯವರು ಹೊಸ ಪಕ್ಷ ಆರಂಭಿಸುತ್ತಿದ್ದು ಅವರು ಗಂಗಾವತಿ ಕ್ಷೇತ್ರದಿಂದಲೇ ಸ್ಪರ್ಧಿಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಗೃಹ ಪ್ರವೇಶ ನಂತರ ಮಾತನಾಡುತ್ತೇನೆ, ತಮ್ಮ ಯೋಜನೆಗಳನ್ನು ಬಹಿರಂಗಪಡಿಸುತ್ತೇನೆ ಎಂದು ಇತ್ತೀಚೆಗೆ ಜನಾರ್ದನ ರೆಡ್ಡಿ ಹೇಳಿದ್ದರು. 

ಈ ಸಂದರ್ಭದಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮಿ, ಜನಾರ್ದನ ರೆಡ್ಡಿ ಅವರಿಗೆ ಜನರೇ ತಂದೆ ತಾಯಿ. ದೇವಾನುದೇವತೆಗಳೇ ಕಾಡಿಗೆ ಹೋಗಿ ವನವಾಸ ಅನುಭವಿಸಿ ಹಾಗೂ ಇತರ ಕಷ್ಟಗಳನ್ನು ಕಂಡಿದ್ದಾರೆ. ಇನ್ನು ನಮ್ಮಂಥ ಸಾಮಾನ್ಯ ಮನುಷ್ಯರು ಯಾವ ಲೆಕ್ಕ. ಜನಾರ್ದನ ರೆಡ್ಡಿಗೆ 14 ವರ್ಷ ವನವಾಸವಿದೆ, ಅನೇಕ ಕಷ್ಟಗಳನ್ನು ಎದುರಿಸಿರುವ ಅವರು ಈಗ ಬಳ್ಳಾರಿಯಿಂದ ಹತ್ತಿರ ಎನ್ನುವ ಕಾರಣಕ್ಕೆ ಗಂಗಾವತಿಯಲ್ಲಿ ಮನೆ ಮಾಡಿದ್ದಾರೆ ಎಂದಿದ್ದಾರೆ.

ರಾಜಕೀಯ ಕುರಿತು ಜನಾರ್ದನ ರೆಡ್ಡಿ ಮುಂದಿನ ವಾರ ವಿವರಿಸಲಿದ್ದಾರೆ, 14 ವರ್ಷದ ನಂತರ ಈಗ ಜನಸೇವೆ ಮಾಡಬೇಕೆಂದಿದ್ದಾರೆ. ಸಿಂಧನೂರಿನಿಂದ ಸ್ಪರ್ಧೆಯ ಬಗ್ಗೆ ಜನಾರ್ದನ ರೆಡ್ಡಿ ಹೊಸ ಮನೆಗೆ ಬಂದ ಬಳಿಕ ತಿಳಿಸಲಿದ್ದಾರೆ ಎಂದರು. 

ಜನಾರ್ದನ ರೆಡ್ಡಿ ಆಪ್ತ ಮೂಲಗಳಿಂದ ಸಿಕ್ಕಿರುವ ಮಾಹಿತಿ ಪ್ರಕಾರ ಅವರು ಹೊಸ ಪಕ್ಷ ಕಟ್ಟುವ ಕಾರ್ಯವನ್ನು ಭರದಿಂದ ನಡೆಸುತ್ತಿದ್ದು ದೆಹಲಿಯಲ್ಲಿ ಚುನಾವಣಾ ಆಯೋಗದ ಪ್ರಕ್ರಿಯೆ ಕೆಲಸದಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT