ವೈ ಎಸ್ ವಿ ದತ್ತ 
ರಾಜಕೀಯ

ಗಣಿತ ಮೇಷ್ಟ್ರ ಹೊಸ ರಾಜಕೀಯ "ಲೆಕ್ಕಾಚಾರ": ತೆನೆ ಇಳಿಸಿ, ಕೈ ಹಿಡಿಯಲು ಮುಂದಾದ ವೈಎಸ್ ವಿ ದತ್ತಾ 

ಚಿಕ್ಕಮಗಳೂರು ಜಿಲ್ಲೆಯ ಕಡೂರು ಕ್ಷೇತ್ರದ ಮಾಜಿ ಶಾಸಕ ವೈ ಎಸ್ ವಿ ದತ್ತ ಜೆಡಿಎಸ್ ತೊರೆದಿದ್ದಾರೆ. ತಾವು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದಾಗಿ ಸ್ವತಃ ದತ್ತ ಅವರೇ ಮಾಧ್ಯಮ ಪ್ರತಿನಿಧಿಗಳಿಗೆ ಖಚಿತಪಡಿಸಿದ್ದಾರೆ.

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು ಕ್ಷೇತ್ರದ ಮಾಜಿ ಶಾಸಕ ವೈ ಎಸ್ ವಿ ದತ್ತ ಜೆಡಿಎಸ್ ತೊರೆದಿದ್ದಾರೆ. ತಾವು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದಾಗಿ ಸ್ವತಃ ದತ್ತ ಅವರೇ ಮಾಧ್ಯಮ ಪ್ರತಿನಿಧಿಗಳಿಗೆ ಖಚಿತಪಡಿಸಿದ್ದಾರೆ.

ನನಗೆ ಈಗ 70 ವರ್ಷವಾಗಿದೆ. 2023 ನನ್ನ ಕೊನೆಯ ಚುನಾವಣೆ. ಕಡೂರು ಕ್ಷೇತ್ರದ ಜನತೆಯ ನಿರ್ಧಾರಕ್ಕೆ ನನ್ನ ರಾಜಕೀಯ ನಿವೃತ್ತಿ ವಿಚಾರವನ್ನು ಬಿಟ್ಟಿದ್ದೇನೆ. ಕ್ಷೇತ್ರದಲ್ಲಿ ಜೆಡಿಎಸ್ ಭವಿಷ್ಯ ಮಂಕಾಗಿದೆ. ಕಾರ್ಯಕರ್ತರಿಗೆ ಬೇರೆ ಕಡೆ ವ್ಯವಸ್ಥೆ ಆಗಬೇಕು, ನನ್ನ ನಂಬಿಕೊಂಡ ಬೆಂಬಲಿಗರು, ಕಾರ್ಯಕರ್ತರ ಭವಿಷ್ಯ ವಿಚಾರ ಮಾಡಬೇಕು ಎಂದರು.

ನನ್ನ ನಂಬಿ ಬಂದವರು ಅತಂತ್ರ ಆಗಬಾರದು. ಅವರಿಗೆ ನೆಲೆಕೊಡಿಸಲು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ. ನನ್ನ ಮತ್ತು ದೇವೇಗೌಡರ ರಾಜಕೀಯ 50 ವರ್ಷ ಸುದೀರ್ಘವಾದುದ್ದು. ದೇವೇಗೌಡರ ಜೊತೆ ನಾನು 20 ವರ್ಷಗಳಿಂದ ಇದ್ದೇನೆ. ನನಗೂ ಅವರಿಗೆ ತಂದೆ ಮಗನ ಸಂಬಂಧ. ನಾನು ದೇವೇಗೌಡರು ಇರುವವರೆಗೂ ಅವರ ಜೊತೆ ಇರುತ್ತೇನೆ ಎಂದು ಹೇಳಿದ್ದೆ. ಆದರೆ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಒತ್ತಾಯಿಸಿದ್ದಾರೆ. ನಾನು ದೇವೇಗೌಡರಿಗೆ ಈ ವಿಚಾರ ಹೇಳಲು ಹೋಗಿ ವಾಪಸ್ ಬಂದಿದ್ದೇನೆ. ನಮ್ಮ ಕ್ಷೇತ್ರದ ಕೋಮುವಾದಿಗಳ ಜೊತೆ ಸೆಣಸಬೇಕು ಅಂದ್ರೆ ಕಾಂಗ್ರೆಸ್ ಸೇರಬೇಕು ಎಂಬುದು ನಮ್ಮ ಕಾರ್ಯಕರ್ತರು ಮತ್ತು ಕ್ಷೇತ್ರದ ಜನರ ಒತ್ತಾಯವಾಗಿದೆ ಎಂದು ತಿಳಿಸಿದರು. 

ಕಾಂಗ್ರೆಸ್ ಪಕ್ಷ ಸೇರ್ಪಡೆ ದಿನಾಂಕ ಇನ್ನೂ ನಿರ್ಧಾರವಾಗಿಲ್ಲ. ಯಾವುದೇ ಷರತ್ತು ವಿಧಿಸದೆ ಕಾಂಗ್ರೆಸ್ ಸೇರುತ್ತಿದ್ದೇನೆ ಎಂದಿದ್ದಾರೆ. ಒಂದು ಮೂಲದ ಪ್ರಕಾರ ಅವರು ಇದೇ ಡಿಸೆಂಬರ್ 17ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಸಮಾವೇಶದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. 

ರಾಜಕೀಯ ಹೊರತುಪಡಿಸಿ ದತ್ತ ಅವರು ಪ್ರೀತಿಯ, ಮಕ್ಕಳ ಅಚ್ಚುಮೆಚ್ಚಿನ ಮೇಷ್ಟ್ರು, ಸಾಹಿತ್ಯಪ್ರಿಯ ರಾಜಕಾರಣಿ, ವಾಕ್ಪಟು ಎಂದೇ ಜನಪ್ರಿಯರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT