ಬಿ ಎಸ್ ಯಡಿಯೂರಪ್ಪ 
ರಾಜಕೀಯ

ಬಿ ಎಸ್ ಯಡಿಯೂರಪ್ಪ ಬೇಸರ ಶಮನ: ಕೊಪ್ಪಳಕ್ಕೆ ಹೊರಟ ನಾಯಕ

ಪಕ್ಷದ ನಾಯಕರ ನಡವಳಿಕೆಯಿಂದ ಬೇಸತ್ತು ಕೊಪ್ಪಳದಲ್ಲಿ ಇಂದು ಗುರುವಾರ ಬಿಜೆಪಿ ಕಾರ್ಯಕ್ರಮಕ್ಕೆ ಗೈರಾಗಲು ನಿರ್ಧರಿಸಿದ್ದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಕೊನೆಗೂ ಭಾಗವಹಿಸಲು ಕೊನೆ ಕ್ಷಣದಲ್ಲಿ ನಿರ್ಧರಿಸಿದ್ದಾರೆ. 

ಬೆಂಗಳೂರು: ಪಕ್ಷದ ನಾಯಕರ ನಡವಳಿಕೆಯಿಂದ ಬೇಸತ್ತು ಕೊಪ್ಪಳದಲ್ಲಿ ಇಂದು ಗುರುವಾರ ಬಿಜೆಪಿ ಕಾರ್ಯಕ್ರಮಕ್ಕೆ ಗೈರಾಗಲು ನಿರ್ಧರಿಸಿದ್ದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಕೊನೆಗೂ ಭಾಗವಹಿಸಲು ಕೊನೆ ಕ್ಷಣದಲ್ಲಿ ನಿರ್ಧರಿಸಿದ್ದಾರೆ. 

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಕರ್ನಾಟಕದ ವಿವಿಧ 10 ಜಿಲ್ಲಾ ಬಿಜೆಪಿ ಕಚೇರಿಗಳ ಉದ್ಘಾಟನೆಯನ್ನು ಇಂದು ನೆರವೇರಿಸಲಿದ್ದಾರೆ. ಇದರ ಅಧಿಕೃತ ಕಾರ್ಯಕ್ರಮ ಇಂದು ಕೊಪ್ಪಳದಲ್ಲಿ ನಡೆಯಲಿದೆ. ಆರಂಭದಲ್ಲಿ ಈ ಕಾರ್ಯಕ್ರಮಕ್ಕೆ ಯಡಿಯೂರಪ್ಪನವರಿಗೆ ಅಧಿಕೃತವಾಗಿ ಆಹ್ವಾನ ಹೋಗಿರಲಿಲ್ಲ. ಹೀಗಾಗಿ ಅವರು ಮುನಿಸಿಕೊಂಡಿದ್ದರು. ಇಲ್ಲದೆ ಬಿಜೆಪಿಯ ಜನಸಂಕಲ್ಪ ಯಾತ್ರೆಗೂ ಅವರನ್ನು ಕರೆಯದೆ ನಿರ್ಲಕ್ಷಿಸಲಾಗಿತ್ತು. 

ಈ ವಿಷಯ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ದಿಢೀರ್ ಎಚ್ಚೆತ್ತುಕೊಂಡ ರಾಜ್ಯ ಬಿಜೆಪಿ ನಾಯಕರು ಯಡಿಯೂರಪ್ಪನವರ ಮನೆಗೆ ಹೋಗಿ ಅವರನ್ನು ಆಹ್ವಾನಿಸಿದ್ದಾರೆ. ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ಅವರಿಗೆ ವರಿಷ್ಠರು ಸೂಚಿಸಿದರು. ಯಡಿಯೂರಪ್ಪನವರನ್ನು ಭೇಟಿ ಮಾಡಿದ ರವಿಕುಮಾರ್ ಕಾರ್ಯಕ್ರಮಕ್ಕೆ ಆಹ್ವಾನಿಸಿ ಬೇಸರ ಶಮನ ಮಾಡುವ ಪ್ರಯತ್ನ ನಡೆಸಿದರು ಎಂದು ತಿಳಿದುಬಂದಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

ದೆಹಲಿ: ಫ್ರೆಂಡ್​ಶಿಪ್ ನಿರಕಾರಿಸಿದ್ದಕ್ಕೆ 21 ವರ್ಷದ ಮಾಡೆಲ್'ನನ್ನು ಆಕೆಯ ಮನೆಗೆ ನುಗ್ಗಿ ಹತ್ಯೆಗೈದು ಜಿಮ್ ಟ್ರೇನರ್!

ಅಸಮಾಧಾನ ತಣಿಸಲು CM ಡಿಕೆಶಿ ಆಪ್ತ ಶಾಸಕ ಆಸೀಫ್ ಸೇಠ್‌ಗೆ ‘ಬುಡಾ’ ಅಧ್ಯಕ್ಷ ಪಟ್ಟ

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!