ಸಿಎಂ ಬೊಮ್ಮಾಯಿ ಮತ್ತು ಬಿ ಎಸ್ ಯಡಿಯೂರಪ್ಪ 
ರಾಜಕೀಯ

ಕರ್ನಾಟಕ ಬಿಜೆಪಿಯಲ್ಲಿ ಯಡಿಯೂರಪ್ಪನವರು ಸರ್ವೋಚ್ಛ ನಾಯಕ, ನಮ್ಮದು ತಂದೆ-ಮಗನ ಸಂಬಂಧ: ಬಸವರಾಜ ಬೊಮ್ಮಾಯಿ

ನ್ನ ಮತ್ತು ಬಿ ಎಸ್ ಯಡಿಯೂರಪ್ಪನವರ ಮಧ್ಯೆ ತಂದೆ-ಮಗನ ಸಂಬಂಧವಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಅದರಲ್ಲಿ ಅಪಸ್ವರ ಬರಲು ಸಾಧ್ಯವಿಲ್ಲ, ಅವರು ಸರ್ವೋಚ್ಛ ನಾಯಕರು, ಅವರ ಮಾರ್ಗದರ್ಶನದಲ್ಲಿಯೇ ನಮ್ಮ ಪಕ್ಷದ ಕೆಲಸ-ಕಾರ್ಯಗಳು, ಕಾರ್ಯಕ್ರಮಗಳು ನಡೆಯುತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕೊಪ್ಪಳ: ನನ್ನ ಮತ್ತು ಬಿ ಎಸ್ ಯಡಿಯೂರಪ್ಪನವರ ಮಧ್ಯೆ ತಂದೆ-ಮಗನ ಸಂಬಂಧವಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಅದರಲ್ಲಿ ಅಪಸ್ವರ ಬರಲು ಸಾಧ್ಯವಿಲ್ಲ, ಅವರು ಸರ್ವೋಚ್ಛ ನಾಯಕರು, ಅವರ ಮಾರ್ಗದರ್ಶನದಲ್ಲಿಯೇ ನಮ್ಮ ಪಕ್ಷದ ಕೆಲಸ-ಕಾರ್ಯಗಳು, ಕಾರ್ಯಕ್ರಮಗಳು ನಡೆಯುತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಕೊಪ್ಪಳದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ತಮ್ಮ ಮತ್ತು ಯಡಿಯೂರಪ್ಪನವರ ಸಂಬಂಧ ಹಳಸಿದೆ ಎಂಬ ಸುದ್ದಿ ಶುದ್ಧ ಸುಳ್ಳು, ಹಾಗೇನಾದರೂ ಯಾರಾದರೂ ಅಂದುಕೊಂಡಿದ್ದರೆ ಅವರಿಗೆ ಭ್ರಮನಿರಸನವಾಗಲಿದೆ. ಈ ರೀತಿ ರಾಜ್ಯದ ಜನತೆಯನ್ನು ತಪ್ಪುದಾರಿಗೆಳೆಯುವ ಸುಳ್ಳು ಸುದ್ದಿಯನ್ನು ಹರಡಿಸಲು ಗೊಂದಲ ಸೃಷ್ಟಿಸಲು ಕಾಂಗ್ರೆಸ್‌ ಏನಾದರೂ ಯೋಜನೆ ಮಾಡಿದ್ದರೆ ಮುಂಬರುವ ಚುನಾವಣೆಯಲ್ಲಿ ರಾಜ್ಯದ ಜನತೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಆದರೆ ಇಂದು ಕೊಪ್ಪಳ ಕಾರ್ಯಕ್ರಮಕ್ಕೆ ಒಲ್ಲದ ಮನಸ್ಸಿನಿಂದ ಯಡಿಯೂರಪ್ಪನವರು ಹೋಗಿದ್ದಾರೆಯೇ ಎಂಬ ಅನುಮಾನ ಕಾಡುತ್ತಿದೆ. ಕಾರ್ಯಕ್ರಮ ನಡೆಯುವ ಮುನ್ನವಾಗಲಿ, ವೇದಿಕೆಯಾಗಲಿ ಯಡಿಯೂರಪ್ಪನವರು ಸಿಟ್ಟು, ಬೇಸರದಲ್ಲಿರುವಂತೆಯೇ ಕಂಡುಬಂತು. ಗಂಭೀರವಾಗಿ ಯಾರ ಜೊತೆ ಮಾತನಾಡದೆ ಮೌನಕ್ಕೆ ಶರಣಾಗಿದ್ದರು. ಕಾರ್ಯಕ್ರಮ ವೇದಿಕೆಗೆ ಕಾರಿನಲ್ಲಿ ಮುಂದೆ ಯಡಿಯೂರಪ್ಪ, ಹಿಂದಿನ ಸೀಟಿನಲ್ಲಿ ಬೊಮ್ಮಾಯಿ, ನಳಿನ್ ಕುಮಾರ್ ಕಟೀಲ್ ಕುಳಿತು ಒಟ್ಟಿಗೆ ಹೋದರೂ ಯಡಿಯೂರಪ್ಪನವರು ಏನೂ ಮಾತನಾಡದೇ ಮೌನವಾಗಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT