ಕಾಂಗ್ರೆಸ್ ಗೆ ಸೇರ್ಪಡೆಯಾದ ಮಾಜಿ ಶಾಸಕ ವಿಎಸ್ ಪಾಟೀಲ್ 
ರಾಜಕೀಯ

ಬೆಂಗಳೂರು: ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕ ವಿ.ಎಸ್ ಪಾಟೀಲ್

ಬಿಜೆಪಿ ಮಾಜಿ ಶಾಸಕ ವಿ.ಎಸ್.ಪಾಟೀಲ್ ಬೆಂಗಳೂರಿನಲ್ಲಿ ಗುರುವಾರ ಕಾಂಗ್ರೆಸ್  ಪಕ್ಷ  ಸೇರ್ಪಡೆಗೊಂಡಿದ್ದಾರೆ.

ಬೆಂಗಳೂರು: ಬಿಜೆಪಿ ಮಾಜಿ ಶಾಸಕ ವಿ.ಎಸ್.ಪಾಟೀಲ್ ಬೆಂಗಳೂರಿನಲ್ಲಿ ಗುರುವಾರ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ವಿರುದ್ಧ ಯಲ್ಲಾಪುರ ವಿಧಾನಸಭಾ ಕ್ಷೇತ್ರದಿಂದ ಕಣಕ್ಕೆ ಇಳಿಯುವುದು ಬಹುತೇಕ ಅಂತಿಮಗೊಂಡಿದೆ.

ಗುರುವಾರ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹಾಗೂ ಹಿರಿಯ ಮುಖಂಡ ಆರ್.ವಿ. ದೇಶಪಾಂಡೆ ಅವರು ಪಕ್ಷದ ಧ್ವಜ ನೀಡುವ ಮೂಲಕ ವಿ.ಎಸ್. ಪಾಟೀಲ್ ಹಾಗೂ ಶ್ರೀನಿವಾಸ್ ಭಟ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

ಈ ಸಂಧರ್ಭದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ವಿ.ಎಸ್. ಪಾಟೀಲ್ ಅವರು ನಮ್ಮ ಜತೆ ವಿಧಾನಸಭೆಯಲ್ಲಿ ಕೆಲಸ ಮಾಡಿದ್ದಾರೆ. ಅಬ್ದುಲ್ ಕಲಾಂ ಅವರು ರಾಷ್ಟ್ರಪತಿ ಆಗಿದ್ದ ಸಂದರ್ಭದಲ್ಲಿ ಇವರಿಗೆ ಅತ್ಯುತ್ತಮ ಶಾಸಕ ಎಂಬ ಪ್ರಶಸ್ತಿ ನೀಡಿ, ಗೌರವಿಸಿದ್ದರು. ಅವರ ತಂದೆ ಕೂಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಇವರು ಕೂಡ ಪಕ್ಷದ ವಿವಿಧ ಸಂಘಟನೆಗಳಲ್ಲಿ ಕೆಲಸ ಮಾಡಿದ್ದರು. ಮಧ್ಯೆ ಬಿಜೆಪಿ ಸೇರಿ, ಸ್ಪರ್ಧಿಸಿದ್ದರು.

ಆಪರೇಷನ್ ಕಮಲದಲ್ಲಿ ನಮ್ಮ ಶಾಸಕರು ಹೋದ ನಂತರ ಆಯಾ ಕ್ಷೇತ್ರದ ಬಹುತೇಕ ಬಿಜೆಪಿ ನಾಯಕರು ನಮ್ಮ ಪಕ್ಷಕ್ಕೆ ಒಬ್ಬೊಬ್ಬರಾಗಿ ಬರುತ್ತಿದ್ದಾರೆ. ಇತ್ತೀಚೆಗೆ ಹಿರೇಕೆರೂರು ನಾಯಕರು ಸೇರ್ಪಡೆಯಾಗಿದ್ದಾರೆ. ಬಿಜೆಪಿಯ ರಾಜ್ಯ ಕಾರ್ಯಕಾರಣಿ ಸಮಿತಿಯಲ್ಲಿ ಕೆಲಸ ಮಾಡಿದ್ದಾರೆ. ಸಹಕಾರ ಸಂಘಗಳಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. 2013 ಹಾಗೂ 2018 ರಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ: 6 ಅಂತಸ್ತಿನ ಕಟ್ಟಡ ಕುಸಿತ; ಓರ್ವ ಸಾವು, ಹಲವರು ಸಿಲುಕಿರುವ ಶಂಕೆ

ಹಿಂದೂ ದೇವತೆಗಳಿಗೆ ಅಪಮಾನ: ನಿಶು ಆಜಾದ್ ವಿರುದ್ಧ ದೂರು ದಾಖಲಿಸಿದ ಸುಪ್ರೀಂ ಕೋರ್ಟ್ ವಕೀಲ!

ಕೊಪ್ಪಳ: ಕೆಲಸದಿಂದ ತಪ್ಪಿಸಿಕೊಳ್ಳಲು ಭಾರಿ ಪ್ಲಾನ್; AI ನಲ್ಲಿ ಹುಲಿ ಸೃಷ್ಟಿಸಿ ಅರಣ್ಯ ಇಲಾಖೆ ಸಿಬ್ಬಂದಿಗೆ ಸಿಕ್ಕಿಬಿದ್ದ ಮೈಗಳ್ಳ!

ನೇಪಾಳದಲ್ಲಿ ಮತ್ತೆ ಪ್ರವಾಹ ಆತಂಕ; ಬುಧಿಗಂಡಕಿ ನದಿ ತೀರದಲ್ಲಿ ಹೈ ಅಲರ್ಟ್, ಆಗಿದ್ದೇನು?

ಉಡುಪಿ: ವಿಟ್ಲಪಿಂಡಿ ಉತ್ಸವದ ವೇಳೆ ಸ್ವಾಮೀಜಿಗಳ ಕೈಯಿಂದ ಜಾರಿದ ಶ್ರೀಕೃಷ್ಣನ ಉತ್ಸವ ಮೂರ್ತಿ, ಭಕ್ತರಲ್ಲಿ ಹೆಚ್ಚಿದ ಆತಂಕ!