ರಾಹುಲ್ ಗಾಂಧಿ 
ರಾಜಕೀಯ

ಮಹಾತ್ಮ ಗಾಂಧಿ ಮಹಾನ್ ವ್ಯಕ್ತಿ,  ನನ್ನನ್ನು ಅವರ ಜೊತೆಗೆ ಹೋಲಿಕೆ ಮಾಡಬೇಡಿ: ಕಾಂಗ್ರೆಸ್ ನಾಯಕರಿಗೆ ರಾಹುಲ್ ಖಡಕ್ ಸೂಚನೆ

ರಾಜಸ್ಥಾನದಲ್ಲಿ ಭಾರತ್ ಜೋಡೋ ಯಾತ್ರೆಯನ್ನು ನಡೆಸುತ್ತಿರುವ ಸಂಸದ ರಾಹುಲ್ ಗಾಂಧಿ, ತಮ್ಮ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರಿಗೆ ಮಹತ್ವದ ಸಂದೇಶವನ್ನು ನೀಡಿದ್ದಾರೆ. ತಮ್ಮನ್ನು ಮಹಾತ್ಮ ಗಾಂಧಿಗೆ ಹೋಲಿಸಬಾರದು ಎಂದು ಖಡಕ್ ಸೂಚನೆ ನೀಡಿದ್ದಾರೆ.

ಜೈಪುರ: ರಾಜಸ್ಥಾನದಲ್ಲಿ ಭಾರತ್ ಜೋಡೋ ಯಾತ್ರೆಯನ್ನು ನಡೆಸುತ್ತಿರುವ ಸಂಸದ ರಾಹುಲ್ ಗಾಂಧಿ, ತಮ್ಮ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರಿಗೆ ಮಹತ್ವದ ಸಂದೇಶವನ್ನು ನೀಡಿದ್ದಾರೆ. ತಮ್ಮನ್ನು ಮಹಾತ್ಮ ಗಾಂಧಿಗೆ ಹೋಲಿಸಬಾರದು ಎಂದು ಖಡಕ್ ಸೂಚನೆ ನೀಡಿದ್ದಾರೆ.

ಭಾರತ್ ಜೋಡೋ ಯಾತ್ರೆಯು ಪ್ರಸ್ತುತ ರಾಜಸ್ಥಾನದ ಮೂಲಕ ಹಾದುಹೋಗುತ್ತಿದ್ದು ಇನ್ನು ಮುಂದೆ ಸಹಾನುಭೂತಿ ಅಥವಾ ಹಿಂದಿನ ಸಮ್ಮಾನಗಳನ್ನು ಆಧರಿಸಿ ತಾನು ವಿಶ್ರಾಂತಿ ಪಡೆಯುವುದಿಲ್ಲ ರಾಹುಲ್ ಹೇಳಿದ್ದಾರೆ.

ಇದೇ ವೇಳೆ ತನ್ನನ್ನು ಮಹಾತ್ಮ ಗಾಂಧಿಗೆ ಹೋಲಿಸಬೇಡಿ ಎಂದು ಅವರು ಹೇಳಿದ್ದಾರೆ. ಇದು ಸಂಪೂರ್ಣವಾಗಿ ತಪ್ಪು, ನಾವು ಒಂದೇ ರೀತಿಯಲ್ಲಿ ಇಲ್ಲ. ಹೋಲಿಕೆ ಮಾಡಬಾರದು. ಅವರು ಒಬ್ಬ ಮಹಾನ್ ವ್ಯಕ್ತಿ, ಅವರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಲು ತಮ್ಮ ಜೀವನವನ್ನು ಮುಡಿಪಾಗಿಟ್ಟರು, 10-12 ವರ್ಷಗಳ ಕಾಲ ಜೈಲಿನಲ್ಲಿ ಇದ್ದರು, ಅವರ ಜಾಗವನ್ನು ತುಂಬಲು ಯಾರಿಂದಲೂ ಸಾಧ್ಯವಿಲ್ಲ.

ಯಾರಿಗೂ ಅವರಂತೆ ಆಗಲು ಸಾಧ್ಯವಿಲ್ಲ. ನನ್ನ ಹೆಸರನ್ನು ಅವರ ಜೊತೆಗೆ ಹೋಲಿಸಬಾರದು ಎಂದಿದ್ದಾರೆ ರಾಹುಲ್. ರಾಜೀವ್ ಗಾಂಧಿ ಮತ್ತು ಇಂದಿರಾಗಾಂಧಿ ಏನು ಮಾಡಿದರು, ಅವರು ಹುತಾತ್ಮರಾದರು. ಅವರು ಚೆನ್ನಾಗಿ ಕೆಲಸ ಮಾಡಿದ್ದರು. ಆದರೆ ಕಾಂಗ್ರೆಸ್ ಪ್ರತಿ ಸಭೆಯಲ್ಲೂ ಅದರ ಬಗ್ಗೆ ತಲೆಕೆಡಿಸಿಕೊಳ್ಳಬಾರದು.

ಇಂದಿರಾಗಾಂಧಿ, ರಾಜೀವ್ ಗಾಂಧಿ, ಸರ್ದಾರ್ ವಲ್ಲಭಭಾಯ್ ಪಟೇಲ್, ಜವಾಹರಲಾಲ್ ನೆಹರು, ಮಹಾತ್ಮ ಗಾಂಧಿ, ಅವರು ಎಲ್ಲವನ್ನೂ ಮಾಡಿದರು. ಅವರು ತಮ್ಮ ಪಾಲನ್ನು ಮಾಡಿದ್ದಾರೆ. ನಾವು ಏನು ಮಾಡಲಿದ್ದೇವೆ ಎಂಬುದರ ಮೇಲೆ ನಾವು ಗಮನಹರಿಸಬೇಕು. ನಾವು ಜನರಿಗೆ ಏನು ಮಾಡುತ್ತಿದ್ದೇವೆ ಎಂಬುದರ ಕುರಿತು ಯೋಚಿಸುವುದು ಉತ್ತಮ ಎಂದು ರಾಹುಲ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT