ನಿಖಿಲ್ ಕುಮಾರಸ್ವಾಮಿ 
ರಾಜಕೀಯ

ಮಗನಿಗೆ ಕ್ಷೇತ್ರ ತ್ಯಾಗ ಮಾಡಿದ ಅನಿತಾ ಕುಮಾರಸ್ವಾಮಿ; ರಾಮನಗರದಿಂದ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆ

ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಪತ್ನಿ, ರಾಮನಗರ ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಪುತ್ರ ನಿಖಿಲ್ ಗಾಗಿ ಕ್ಷೇತ್ರವನ್ನು ತ್ಯಾಗ ಮಾಡಿದ್ದಾರೆ. 

ರಾಮನಗರ: ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರ ಪತ್ನಿ, ರಾಮನಗರ ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಪುತ್ರ ನಿಖಿಲ್ ಗಾಗಿ ಕ್ಷೇತ್ರವನ್ನು ತ್ಯಾಗ ಮಾಡಿದ್ದಾರೆ. 

2023ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಪ್ರತಿನಿಧಿಸುತ್ತಿರುವ ರಾಮನಗರ ಕ್ಷೇತ್ರದಿಂದ ಪುತ್ರ ನಿಖಿಲ್‌ ಸ್ಪರ್ಧಿಸಲಿದ್ದಾನೆ ಎಂದು ಸ್ವತಃ ಅನಿತಾ ಕುಮಾರಸ್ವಾಮಿ ಅವರು ಶನಿವಾರ ಘೋಷಿಸಿದ್ದಾರೆ. ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಇಂದು ರಾಮನಗರದ ಹಳೇ ಬಸ್‌ ನಿಲ್ದಾಣದಲ್ಲಿ ನಡೆದ ಜೆಡಿಎಸ್‌ ಸಭೆಯಲ್ಲಿ ಅನಿತಾ ಕುಮಾರಸ್ವಾಮಿ ಅವರು, ಮುಂದಿನ ಚುನಾವಣೆಯಲ್ಲಿ ನಿಖಿಲ್‌ ಸ್ಪರ್ಧಿಸಲಿದ್ದಾನೆ. ನಿಮ್ಮೆಲ್ಲರ ಆಶೀರ್ವಾದ ಪುತ್ರ ನಿಖಿಲ್ ಕುಮಾರಸ್ವಾಮಿ ಮೇಲೆ ಇರಲಿ ಎಂದು ಹೇಳಿ ಭಾವುಕರಾದರು. ಇನ್ನು ನಿಖಿಲ್‌ ಅಭ್ಯರ್ಥಿಯಾಗುತ್ತಾರೆಂದು ಘೋಷಿಸುತ್ತಿದ್ದಂತೆ ಕಾರ್ಯಕರ್ತರ ಹರ್ಷೋದ್ಘಾರ ಮುಗಿಲು ಮುಟ್ಟಿತು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನೀವೆಲ್ಲಾ ಸೇರಿ ನಿಖಿಲ್ ಗೆ ಬೆಂಬಲ ನೀಡಬೇಕು. ನನ್ನ ಬಗ್ಗೆ ಕೆಲವು ಅಪಪ್ರಚಾರಗಳನ್ನು ಮಾಡುತ್ತಿದ್ದರು. ಹಾಗಾಗಿ ಇವತ್ತೇ ಫೈನಲ್ ಮಾಡಬೇಕೆಂದು ಇಲ್ಲಿ ಬಂದು ಹೇಳಿದ್ದೇನೆ. ನಾನು ಕುಟುಂಬಕ್ಕೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತೇನೆ. ನಾನು ದೇವರ ಮುಂದೆ ನಿಂತಾಗ ಕೂಡ ನನ್ನ ಗಂಡ ಮತ್ತು ನನ್ನ ಮಗನಿಗೆ ಒಳ್ಳೆಯದಾಗಲಿ ಎಂದು ಕೇಳಿಕೊಳ್ಳುವುದಾಗಿ ಭಾವುಕರಾದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT