ಸಿದ್ದರಾಮಯ್ಯ ಮತ್ತು ಸಿ ಟಿ ರವಿ 
ರಾಜಕೀಯ

ನನ್ನ ಧರ್ಮದ ಮೇಲೆ ಗೌರವವಿದೆ, ನನಗೆ ಹೆಸರಿಡಲು ಸಿ.ಟಿ. ರವಿ ಯಾವನು: ಸಿದ್ದರಾಮಯ್ಯ ಸಿಡಿ ಮಿಡಿ

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ನನ್ನನ್ನು ಸಿದ್ರಾಮುಲ್ಲಾಖಾನ್ ಎನ್ನುತ್ತಾನೆ. ನಾನು ಹಿಂದು. ತಂದೆ–ತಾಯಿ ನನಗೆ ಸಿದ್ದರಾಮಯ್ಯ ಎಂದು ಹೆಸರಿಟ್ಟಿದ್ದಾರೆ. ನನಗೆ ಹೆಸರಿಡಲು ಇವನ್ಯಾವನು’

ಕಲಬುರಗಿ: ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ನನ್ನನ್ನು ಸಿದ್ರಾಮುಲ್ಲಾಖಾನ್ ಎನ್ನುತ್ತಾನೆ. ನಾನು ಹಿಂದು. ತಂದೆ–ತಾಯಿ ನನಗೆ ಸಿದ್ದರಾಮಯ್ಯ ಎಂದು ಹೆಸರಿಟ್ಟಿದ್ದಾರೆ. ನನಗೆ ಹೆಸರಿಡಲು ಇವನ್ಯಾವನು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹರಿಹಾಯ್ದರು.

ಭಾನುವಾರ ಜಿಲ್ಲೆಯ ಅಫಜಲಪುರ ಪಟ್ಟಣದಲ್ಲಿ ಭಾನುವಾರ ಶಾಸಕ ಎಂ.ವೈ. ಪಾಟೀಲ ಆಯೋಜಿಸಿದ್ದ ಸಾಮೂಹಿಕ ವಿವಾಹ ಮಹೋತ್ಸವಕ್ಕೆ ಚಾಲನೆ ನೀಡಿ  ಮಾತನಾಡಿದ ಅವರು, ನನ್ನ ತಂದೆ-ತಾಯಿ ಕುರುಬರು. ನಾನೂ ಒಬ್ಬ ಕುರುಬ. ನನಗೆ ನನ್ನ ಧರ್ಮದ ಮೇಲೆ ಅಪಾರ ಗೌರವ ಇದೆ. ಆದರೆ ಅದನ್ನು ತೋರಿಕೆಗಾಗಿ ಹೇಳಿಕೊಳ್ಳುವ ಅಗತ್ಯ ಇಲ್ಲ. ಆದರೆ, ಸಿ.ಟಿ.ರವಿ ನನಗೆ ಸಿದ್ರಾಮುಲ್ಲಾ ಖಾನ್‌ ಎಂದು ಹೊಸ ನಾಮಕರಣ ಮಾಡುತ್ತಿದ್ದಾನೆ. ಇವನ್ಯಾರು ನನಗೆ ಹೀಗೆಲ್ಲಾ ಕರೆಯೋಕೆ? ಅವನೊಬ್ಬ ಮತಾಂಧ ಎಂದು ಕಿಡಿಕಾರಿದ್ದಾರೆ.

‘ನಮ್ಮ ಪ್ರಾಣ ಪಕ್ಷಿ ಹಾರಿ ಹೋಗುವಾಗ ವೈದ್ಯರಲ್ಲಿ ನಾವು ಬೇಡುವುದು ನಮ್ಮ ಪ್ರಾಣ ಉಳಿಸಿ ಎಂದೇ ಹೊರತು, ನಮ್ಮ ಜಾತಿಯವರದ್ದೇ ರಕ್ತ ಕೊಡಿ ಎಂದು ಕೇಳುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಜನರೇ ಪ್ರಭುಗಳು ಅವರ ತೀರ್ಪು ಅಂತಿಮ’ ಎಂದರು.

ಮೊದಲು ನನ್ನ ಕಾಯಿಲೆ ವಾಸಿಯಾಗಲಿ ಅಂತ ಹೇಳುತ್ತೇವೆ. ಎಲ್ಲರ ಮೈಯಲ್ಲೂ ಹರಿಯುವುದು ಒಂದೇ ರಕ್ತ ಎಂದರು. ನಾನು ಬಿಜೆಪಿಗರ ಆರೋಪಗಳಿಗೆ ಉತ್ತರ ಕೊಡುವ ಅವಶ್ಯಕತೆ ಇಲ್ಲ. ಜನರೇ ಅವರಿಗೆ ಈ ಬಾರಿ ಪಾಠ ಕಲಿಸುತ್ತಾರೆ. ನಮ್ಮ ಸಂವಿಧಾನದಲ್ಲಿ ಸರ್ವಧರ್ಮ ಸಮಾನತೆ ಇದೆ. ಅದನ್ನೇ ನಮ್ಮ ಕಾಂಗ್ರೆಸ್‌ ಪಕ್ಷದವರು ಅಳವಡಿಸಿಕೊಂಡಿದ್ದೇವೆ. ಸರ್ವಜನಾಂಗದ ಶಾಂತಿಯ ತೋಟ ಎಂಬುದನ್ನು ಸಾಬೀತುಪಡಿಸಲು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

SCROLL FOR NEXT