ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಿಯಾಂಕ್ ಖರ್ಗೆ 
ರಾಜಕೀಯ

ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಕುಟುಂಬದಿಂದ ಭೂಮಿ ದುರ್ಬಳಕೆ: ಮಣಿಕಂಠ ರಾಠೋಡ್

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಸಾಲು ಸಾಲು ಆರೋಪಗಳನ್ನ ಮಾಡುತ್ತಿರುವ ಬಿಜೆಪಿ ಮುಖಂಡ ಮಣಿಕಂಠ್ ರಾಠೋಡ್ ಇದೀಗ ಖರ್ಗೆ ಕುಟುಂಬದ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.

ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಸಾಲು ಸಾಲು ಆರೋಪಗಳನ್ನ ಮಾಡುತ್ತಿರುವ ಬಿಜೆಪಿ ಮುಖಂಡ ಮಣಿಕಂಠ್ ರಾಠೋಡ್ ಇದೀಗ ಖರ್ಗೆ ಕುಟುಂಬದ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಅಳಿಯ ರಾಧಾಕೃಷ್ಣ ಹಾಗೂ ಖರ್ಗೆ ಅವರ ಪುತ್ರ ಪ್ರಿಯಾಂಕ್ ಅವರು ನಡೆಸುತ್ತಿರುವ ಕರ್ನಾಟಕ ಪೀಪಲ್ಸ್ ಎಜುಕೇಶನ್ ಸೊಸೈಟಿಯು ಜಿಲ್ಲಾಡಳಿತದಿಂದ ಕಲ್ಯಾಣ ಮಂಟಪ ನಿರ್ಮಿಸಲು ಉಚಿತವಾಗಿ ಭೂಮಿ ಪಡೆದು ಇದೀಗ ಸೊಸೈಟಿ ಕಚೇರಿ ನಡೆಸುತ್ತಿದೆ. ಇದರ ವಿರುದ್ಧ ಕಾನೂನು ಹೋರಾಟ ಆರಂಭಿಸಿದ್ದೇನೆ’ ಎಂದು ಮಣಿಕಂಠ ರಾಠೋಡ್ ತಿಳಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಣಿಕಂಠ, ‘ಜೇವರ್ಗಿ ಶಾಸಕ ಅಜಯ್ ಸಿಂಗ್ ಅವರು ತಮ್ಮದೇ ಕುಟುಂಬದಿಂದ ಹಣ ಖರ್ಚು ಮಾಡಿ ಕ್ಷೇತ್ರದ ಜನರಿಗೆ ಉಚಿತವಾಗಿ ಕಲ್ಯಾಣ ಮಂಟಪ ನಿರ್ಮಿಸಿದ್ದಾರೆ. ಆದರೆ, ಖರ್ಗೆ ಕುಟುಂಬದವರು ಸರ್ಕಾರವೇ ಕಲ್ಯಾಣ ಮಂಟಪಕ್ಕೆಂದು ಉಚಿತವಾಗಿ ನೀಡಿದ ಭೂಮಿಯಲ್ಲಿ ಸೊಸೈಟಿ ಕಚೇರಿ ನಡೆಸುವುದು ಎಷ್ಟು ಸರಿ’ ಎಂದು ಪ್ರಶ್ನಿಸಿದರು.

1981 ರಲ್ಲಿ ದಲಿತ ಮದುವೆ ಸಭೆ ಸಮಾರಂಭಗಳಿಗಾಗಿ ಕಲಬುರಗಿ ಜಿಲ್ಲಾಡಳಿತ ಕಲ್ಯಾಣ ಮಂಟಪ ನಿರ್ಮಾಣ ಮಾಡಲು ಡಾ ಅಂಬೇಡ್ಕರ್ ಸ್ಮಾರಕ ಸಮಿತಿಗೆ 36 ಸಾವಿರ ಚದರ ಅಡಿ ಭೂಮಿಯನ್ನ ನೀಡಿತ್ತು. ಜಿಲ್ಲಾಧಿಕಾರಿ ಅವರು ನಿವೇಶನ ಹಂಚಿಕೆ ಸಂದರ್ಭದಲ್ಲಿ ವಿಧಿಸಿದ ನಿಯಮಗಳನ್ನು ಉಲ್ಲಂಘಿಸಿದ್ದಕ್ಕೆ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದೇನೆ’ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಖೈಬರ್ ಪಖ್ತುಂಖ್ವಾದಲ್ಲಿ "ಶಾಂತಿ ರ‍್ಯಾಲಿ"ಯಲ್ಲಿ ಆತ್ಮಹತ್ಯಾ ಬಾಂಬ್ ದಾಳಿ; 13 ಸಾವು

ರಸ್ತೆಗೆ ತಂದು ರಾಮಲಲ್ಲಾನಿಗೆ ಅಪಮಾನ: ಸಂಸದ ಪಪ್ಪು ಯಾದವ್ ಹತ್ಯೆಗೆ ಯತ್ನ ಆರೋಪ, Video!

ದೆಹಲಿ: ವೀಸಾ ನಿಯಮಗಳನ್ನು ಉಲ್ಲಂಘನೆ; 6 ​​ಬಾಂಗ್ಲಾದೇಶಿ ಪ್ರಜೆಗಳ ಬಂಧನ

ಹಿಂದೂರಾಷ್ಟ್ರವಾಗಿ ನೇಪಾಳ ಘೋಷಣೆಗೆ ಆಗ್ರಹ: ಪ್ರತಿಭಟನಾ ನಿರತ ಹಿಂದೂ ಸಾಮ್ರಾಟ್ ಸೇನಾ ಜೊತೆ ಸರ್ಕಾರದ ಮಾತುಕತೆ; 19 ಅಂಶಗಳ ಒಪ್ಪಂದ

ಇದು ಅತ್ಯಗತ್ಯ: ಭಾರತದಲ್ಲಿ UCC ಅನುಷ್ಠಾನಕ್ಕೆ ತಸ್ಲೀಮಾ ನಸ್ರೀನ್ ಬೆಂಬಲ