ಸಿ.ಟಿ ರವಿ 
ರಾಜಕೀಯ

2023ರಲ್ಲಿ ಬಿಜೆಪಿ ಬಹುಮತ ಪಡೆಯಲು 'ಹಳೆ ಮೈಸೂರು' ಭಾಗಕ್ಕೆ ವಿಶೇಷ ಗಮನ: ಸಿ.ಟಿ.ರವಿ

2023ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಬಹುಮತ ಪಡೆಯಲು ‘ಹಳೆ ಮೈಸೂರು’ ಭಾಗದ ಮೇಲೆ ವಿಶೇಷ ಗಮನ ಹರಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರು ಬುಧವಾರ ಹೇಳಿದ್ದಾರೆ.

ಬೆಳಗಾವಿ: 2023ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಬಹುಮತ ಪಡೆಯಲು ‘ಹಳೆ ಮೈಸೂರು’ ಭಾಗದ ಮೇಲೆ ವಿಶೇಷ ಗಮನ ಹರಿಸಲಾಗುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರು ಬುಧವಾರ ಹೇಳಿದ್ದಾರೆ.

ಒಕ್ಕಲಿಗ ಪ್ರಾಬಲ್ಯವಿರುವ ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಅಭಿವೃದ್ಧಿ ಮತ್ತು ಹಿಂದುತ್ವವನ್ನೇ ಅಜೆಂಡಾವಾಗಿಟ್ಟುಕೊಂಡು ಜನರ ಮುಂದೆ ಹೋಗಲಿದೆ ಎಂದು ಸಿಟಿ ರವಿ ತಿಳಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಿಸೆಂಬರ್ 30 ರಂದು ಮಂಡ್ಯ ಮತ್ತು ಡಿಸೆಂಬರ್ 31 ರಂದು ದೇವನಹಳ್ಳಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

ಅಮಿತ್ ಶಾ ಅವರು ಒಬ್ಬ ಉತ್ತಮ ಆಟಗಾರನಂತೆ ಯಾವುದೇ ಪಿಚ್‌ನಲ್ಲೂ ಉತ್ತಮ ಪ್ರದರ್ಶನ ನೀಡಬಲ್ಲರು. ಹೀಗಾಗಿ ನಾವು ಹಳೆ ಮೈಸೂರು ಭಾಗದ ಮೇಲೆ ಹೆಚ್ಚು ಗಮನ ಹರಿಸಿದ್ದೇವೆ. ಈ ಭಾಗದ ಜನರ ವಿಶ್ವಾಸವನ್ನು ಗಳಿಸದೆ ಪಕ್ಷ ಬಹುಮತ ಪಡೆಯಲು ಸಾಧ್ಯವಿಲ್ಲ ಎಂಬುದನ್ನು 2008 ಮತ್ತು 2018 ರ ಚುನಾವಣೆಯಿಂದ ನಾವು ಅರಿತುಕೊಂಡಿದ್ದೇವೆ. ಹೀಗಾಗಿ ಹಳೆ ಮೈಸೂರು ಭಾಗದತ್ತ ವಿಶೇಷ ಗಮನ ಹರಿಸುತ್ತೇವೆ ಎಂದು ರವಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುವ ನಿಟ್ಟಿನಲ್ಲಿ ಕೆಲಸ ಮಾಡಲಿದೆ ಎಂದು ಸಿಟಿ ರವಿ ಹೇಳಿದ್ದಾರೆ.

ಒಕ್ಕಲಿಗ ಪ್ರಾಬಲ್ಯದ ಹಳೆ ಮೈಸೂರು ಜೆಡಿಎಸ್‌ನ ಭದ್ರಕೋಟೆ ಎಂದೇ ಪರಿಗಣಿಸಲ್ಪಟ್ಟಿದೆ. ಇಲ್ಲಿ ಕಾಂಗ್ರೆಸ್ ಕೂಡ ಪ್ರಬಲವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT