ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

'ಹೆಲಿಕಾಪ್ಟರ್‌ನಲ್ಲಿ ಬೇಕಾದರೂ ಬರಲಿ, ರಾಕೆಟ್‌ನಲ್ಲಿ ಬರಲಿ ನನಗೇನು? ಪಂಚರತ್ನ ಯಾತ್ರೆ ಸುನಾಮಿ ತಡೆಯಲು ಅಮಿತ್‌ ಶಾ ಕರೆಸುತ್ತಿದ್ದಾರೆ'

ರಾಜ್ಯದಲ್ಲಿ ಪಂಚರತ್ನಯಾತ್ರೆಗೆ ಅಭೂತಪೂರ್ವ ಬೆಂಬಲ ದೊರಕಿದ್ದು, ಪಂಚರತ್ನ ರಥಯಾತ್ರೆಯ ಸುನಾಮಿ ಅಲೆ ತಡೆಯಲು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಬಿಜೆಪಿಯವರು ಕರೆಸುತ್ತಿದ್ದಾರೆ.

ತುಮಕೂರು: ರಾಜ್ಯದಲ್ಲಿ ಪಂಚರತ್ನಯಾತ್ರೆಗೆ ಅಭೂತಪೂರ್ವ ಬೆಂಬಲ ದೊರಕಿದ್ದು, ಪಂಚರತ್ನ ರಥಯಾತ್ರೆಯ ಸುನಾಮಿ ಅಲೆ ತಡೆಯಲು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಬಿಜೆಪಿಯವರು ಕರೆಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಪಂಚರತ್ನ ರಥಯಾತ್ರೆಯಲ್ಲಿ ಮಾತನಾಡಿದ ಅವರು, ಅಮಿತ್  ಶಾ ಹೆಲಿಕಾಪ್ಟರ್‌ನಲ್ಲಿ ಬೇಕಾದರೂ ಬರಲಿ, ರಾಕೆಟ್‌ನಲ್ಲಿ ಬೇಕಾದರೂ ಬರಲಿ ನನಗೇನು?. ರೈತರಿಗೆ ಹೆದರಿ ಅವರು ಕರ್ನಾಟಕಕ್ಕೆ ಬರುತ್ತಿದ್ದಾರೆ. ಬಿಜೆಪಿಯವರು ದೇಶವನ್ನು ಕಾಂಗ್ರೆಸ್‌ ಮುಕ್ತ ಮಾಡುತ್ತೇವೆ, ಮಂಡ್ಯವನ್ನು ಜೆಡಿಎಸ್‌ ಮುಕ್ತ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಮುಕ್ತ ಮಾಡುವುದಕ್ಕೆ ಇವರೇನು ದೊಡ್ಡ ಬ್ರಹ್ಮನಾ ಎಂದು ಪ್ರಶ್ನಿಸಿದರು.

ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್‌ ಜಾಲತಾಣದ ವಿಭಾಗದಿಂದ 1 ರು.ಮುಖಬೆಲೆಯ 15 ಸಾವಿರ ಕಾಯಿನ್‌ ಹಾರ ಹಾಕಿ ಸ್ವಾಗತ ಕೋರಲಾಯಿತು. ಬಳಿಕ, ಹೆಬ್ಬೂರಿನಲ್ಲಿ ಕ್ರೇನ್‌ ಬಳಸಿ ಮಣ್ಣಿನ ಹಾರ, ನೇಗಿಲ ಹಾರ ಹಾಕಿ ಸ್ವಾಗತಿಸಲಾಯಿತು.

ರಾಷ್ಟ್ರೀಯ ಪಕ್ಷಗಳು ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿದ್ದು,ರಾಜ್ಯದ ಅಭಿವೃದ್ಧಿಗೆ ಪ್ರಾದೇಶಿಕ ಪಕ್ಷಗಳು ಅನಿವಾರ್ಯವಾಗಿವೆ , ಪಂಚರತ್ನ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ರಾಜ್ಯವನ್ನು ಅಭಿವೃದ್ಧಿಪಡಿಸಬೇಕೆಂಬ ಉದ್ದೇಶದಿಂದ ಜೆಡಿಎಸ್ ಈ ಯಾತ್ರೆಯನ್ನು ಆರಂಭಿಲಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video-ಶಾಸಕ ಜನಾರ್ದನ ರೆಡ್ಡಿ ಮನೆ ಮುಂದೆ ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಬಳ್ಳಾರಿಯಲ್ಲಿ ಪರಿಸ್ಥಿತಿ ಉದ್ವಿಗ್ನ, ಸೆಕ್ಷನ್ 144 ಜಾರಿ

Switzerlandನಲ್ಲಿ ಗೋವಾ ಪಬ್ ರೀತಿ ದುರಂತ: ಕ್ರಾನ್ಸ್-ಮಾಂಟಾನಾ ಸ್ಕೀ ರೆಸಾರ್ಟ್‌ನಲ್ಲಿ ಭಾರೀ ಅಗ್ನಿ ಅವಘಡ; 40 ಮಂದಿ ದುರ್ಮರಣ, 115 ಮಂದಿಗೆ ಗಾಯ

ವಾಣಿಜ್ಯ ಬಳಕೆ ಸಿಲಿಂಡರ್ ದರ 111 ರೂ.ಹೆಚ್ಚಳ: ಸಾಮಾನ್ಯ ಜನರಿಗೆ ನೇರ ಹೊಡೆತ; ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ

ಬ್ಯಾನರ್‌ ವಿಚಾರಕ್ಕೆ ಜನಾರ್ದನ ರೆಡ್ಡಿ ಮನೆ ಮುಂದೆ ಗಲಾಟೆ, ಫೈರಿಂಗ್; ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು

ಕುರ್ಚಿ ಕದನಕ್ಕೆ ಬಿಗ್ ಟ್ವಿಸ್ಟ್‌; ಈ ಬಾರಿಯೂ ನಾನೇ ಬಜೆಟ್ ಮಂಡಿಸುತ್ತೇನೆ, ಸಿದ್ಧತೆ ಆರಂಭ: CM ಸಿದ್ದರಾಮಯ್ಯ

SCROLL FOR NEXT