ಉಮೇಶ್ ಕತ್ತಿ 
ರಾಜಕೀಯ

ಅಭಿವೃದ್ಧಿ ದೃಷ್ಟಿಯಿಂದ ಆರೂವರೆ ಕೋಟಿ ಜನಸಂಖ್ಯೆ ಇರುವ ಕರ್ನಾಟಕವನ್ನು ಎರಡು ರಾಜ್ಯಗಳಾಗಿ ವಿಭಜಿಸಲಿ: ಉಮೇಶ್ ಕತ್ತಿ

ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಇದೀಗ ಮತ್ತೆ ಪ್ರತೇಕ ರಾಜ್ಯದ ಧ್ವನಿ ಎತ್ತಿದ್ದು, ಅಭಿವೃದ್ಧಿ ವಿಚಾರವಾಗಿ ಪ್ರತ್ಯೇಕ ರಾಜ್ಯವಾಗಬೇಕು ಎಂದು ಪುನರುಚ್ಚಾರ ಮಾಡಿದ್ದಾರೆ.

ಬೆಂಗಳೂರು: ಪ್ರತ್ಯೇಕ ಉತ್ತರ ಕರ್ನಾಟಕ ಕೂಗು ಸಚಿವ ಉಮೇಶ್ ಕತ್ತಿ ಬಾಯಲ್ಲಿ ಪದೇ ಪದೇ ಕೇಳಿ ಬರುತ್ತಿದೆ. ರಾಜ್ಯಾದ್ಯಂತ ಈ ಬಗ್ಗೆ ವ್ಯಾಪಕ ಟೀಕೆ ಕೂಡ ವ್ಯಕ್ತವಾಗಿದೆ. ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಇದೀಗ ಮತ್ತೆ ಪ್ರತೇಕ ರಾಜ್ಯದ ಧ್ವನಿ ಎತ್ತಿದ್ದು, ಅಭಿವೃದ್ಧಿ ವಿಚಾರವಾಗಿ ಪ್ರತ್ಯೇಕ ರಾಜ್ಯವಾಗಬೇಕು ಎಂದು ಪುನರುಚ್ಚಾರ ಮಾಡಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಉಮೇಶ್ ಕತ್ತಿ, ದೇಶದಲ್ಲಿ 30 ರಾಜ್ಯಗಳಿವೆ. ಈ ಪೈಕಿ 50 ರಾಜ್ಯಗಳನ್ನಾಗಿ ಮಾಡಬೇಕು ಎನ್ನುವ ಚರ್ಚೆ ಆಗ್ತಿದೆ. ಉತ್ತರ ಪ್ರದೇಶದಲ್ಲಿ 21 ಕೋಟಿ ಜನಸಂಖ್ಯೆ ಇದ್ದು 4 ರಾಜ್ಯವಾಗಬೇಕು. ಮಹಾರಾಷ್ಟ್ರದಲ್ಲಿ 11 ಕೋಟಿ ಜನಸಂಖ್ಯೆ ಇದ್ದು ಅದನ್ನು 3 ರಾಜ್ಯ ಮಾಡಬೇಕು.

ಅದರಂತೆ ಕರ್ನಾಟಕ ಆರೂವರೆ ಕೋಟಿ ಜನಸಂಖ್ಯೆ ಇದೆ. ಈ ಹಿನ್ನೆಲೆ ಎರಡು ರಾಜ್ಯಗಳಾಗಿ ವಿಂಗಡಣೆ ಆಗಬೇಕು ಎಂದರು. ನಾನು 9 ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಆ ಭಾಗದ ಅಭಿವೃದ್ಧಿ ದೃಷ್ಟಿಯಿಂದ ಪ್ರತ್ಯೇಕ ರಾಜ್ಯವಾಗಬೇಕು. ಮುಂದೆಯೂ ಬಿಜೆಪಿಯಲ್ಲಿಯೇ ಇರುತ್ತೇನೆ. ಬಿಜೆಪಿಯಲ್ಲಿದ್ದು ಮುಖ್ಯಮಂತ್ರಿ ಆಗುವ ಅರ್ಹತೆ ನನಗಿದೆ. ಪ್ರತ್ಯೇಕ ರಾಜ್ಯವಾದರೂ ನಾವು ಕನ್ನಡಿಗರೇ. ಕರ್ನಾಟಕ ಎರಡು ಭಾಗ ಆಗಬೇಕು, ನಾವು ಕೂಡಾ ಕನ್ನಡ ಭಾಷೆಯನ್ನೇ ಮಾತನಾಡುತ್ತೇವೆ. ನಾವು ಅಚಲ ಕನ್ನಡಿಗರು ಎಂದು ಸಚಿವ ಉಮೇಶ್ ಕತ್ತಿ ಹೇಳಿದರು.

ಮುಖ್ಯಮಂತ್ರಿಯಾಗಲು ಮಾತ್ರ ಉತ್ತರ ಕರ್ನಾಟಕ ಭಾಗಕ್ಕೆ ಪ್ರತ್ಯೇಕ ರಾಜ್ಯದ ಬೇಡಿಕೆ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ವಿಧಾನಸಭೆಯಲ್ಲಿರುವ 224 ಶಾಸಕರ ಪೈಕಿ ನಾನೇ ಹಿರಿಯ. ನಾನು ಮುಖ್ಯಮಂತ್ರಿಯಾದರೆ ಅವಿಭಜಿತ ಕರ್ನಾಟಕಕ್ಕೆ ಮುಖ್ಯಮಂತ್ರಿಯಾಗಬೇಕು ಎಂಬುದು ನನ್ನ ಆಸೆ ಎಂದಿದ್ದಾರೆ.

ಪ್ರತ್ಯೇಕ ರಾಜ್ಯ ಹೇಳಿಕೆಗೆ ಕಾಂಗ್ರೆಸ್ ಟೀಕಿಸಿದ ವಿಚಾರ ಕುರಿತು ಪ್ರತಿಕ್ರಿಯಿಸಿದ ಉಮೇಶ್ ಕತ್ತಿ, ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡಲಿ. ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.

ರಾಜ್ಯದ ಅಭಿವೃದ್ಧಿ ಬಗ್ಗೆ ಅವರಿಗೆ ಚಿಂತನೆ ಇಲ್ಲ. ಹಿಂದೆ ಪಾದಯಾತ್ರೆ ಮಾಡಿ ಆಲಮಟ್ಟಿ ಅಭಿವೃದ್ಧಿ ಮಾಡ್ತಿವಿ ಅಂದ್ರು, ಮಾಡಿದ್ರಾ.? ಕಾಂಗ್ರೆಸ್ ಅವಧಿಯಲ್ಲೇ ಉತ್ತರ ಕರ್ನಾಟಕ ಅಭಿವೃದ್ಧಿ ಆಗಿಲ್ಲ. ಸುಮ್ಮನೆ ಇಲ್ಲಸಲ್ಲದ ಮಾತುಗಳನ್ನು ಆಡಿದ್ರೆ ನಾವೂ ಕೂಡಾ ತಿರುಗೇಟು ನೀಡ್ತೇವೆ. ಪ್ರತ್ಯೇಕ ರಾಜ್ಯವನ್ನ ಜನ ಬಯಸಿದ್ದಾರೆ. ಜನರ ಮನವಿಗೆ ಸ್ಪಂದಿಸುವ ಕೆಲಸವನ್ನ ನಾವು ಮಾಡಬೇಕು ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT