ಕಾರ್ಯಕಾರಿಣಿ ಹಿನ್ನೆಲೆಯಲ್ಲಿ ಹಾಕಿದ ಬ್ಯಾನರ್ 
ರಾಜಕೀಯ

ಇಂದಿನಿಂದ ಎರಡು ದಿನ ಹೈದರಾಬಾದ್ ನಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ: ರಾಜ್ಯದ ನಾಯಕರು ಭಾಗಿ

ಆಂಧ್ರ ಪ್ರದೇಶದ ಹೈದರಾಬಾದ್ ನಲ್ಲಿ ಇಂದು ಶನಿವಾರ ಮತ್ತು ನಾಳೆ ಭಾನುವಾರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯುತ್ತಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್​ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಸೇರಿದಂತೆ ಹಲವು ನಾಯಕರು ಭಾಗಿಯಾಗುತ್ತಾರೆ.

ಹೈದರಾಬಾದ್: ಆಂಧ್ರ ಪ್ರದೇಶದ ಹೈದರಾಬಾದ್ ನಲ್ಲಿ ಇಂದು ಶನಿವಾರ ಮತ್ತು ನಾಳೆ ಭಾನುವಾರ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯುತ್ತಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್​ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಸೇರಿದಂತೆ ಹಲವು ನಾಯಕರು ಭಾಗಿಯಾಗುತ್ತಾರೆ.

ಈಗಾಗಲೇ ಜೆ ಪಿ ನಡ್ಡಾ ಹೈದರಾಬಾದ್ ಗೆ ಬಂದಿದ್ದಾರೆ. ಇಂದು ಸಂಜೆ ವೇಳೆಗೆ ಪ್ರಧಾನಿ ಮೋದಿ ಹೈದರಾಬಾದ್​ಗೆ ಆಗಮಿಸಲಿದ್ದಾರೆ. ಎರಡು ದಿನಗಳ ಕಾರ್ಯಕಾರಿಣಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ‌ ಭಾಗವಹಿಸುತ್ತಿದ್ದು ಇಂದು ಬೆಳಗ್ಗೆ ಹೈದರಾಬಾದ್ ಗೆ ತೆರಳಿದ್ದಾರೆ.

ಬಿಜೆಪಿ ‌ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಡಿ.ಕೆ. ಅರುಣಾ, ಸಿ.ಟಿ. ರವಿ, ನಳೀನ್ ಕುಮಾರ್ ಕಟೀಲ್, ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂಗಳಾದ ಕೆ.ಎಸ್. ಈಶ್ವರಪ್ಪ, ಆರ್‌. ಅಶೋಕ್, ಲಕ್ಷ್ಮಣ ಸವದಿ, ಗೋವಿಂದ ಕಾರಜೋಳ, ಡಾ. ಅಶ್ವಥ್ ನಾರಾಯಣ ಮತ್ತು ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಭಾಗಿಯಾಗುತ್ತಾರೆ. 

ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಕುಟುಂಬಸ್ಥರೊಂದಿಗೆ ವಿದೇಶ ಪ್ರವಾಸದಲ್ಲಿರುವುದರಿಂದ ಅವರು ಕಾರ್ಯಕಾರಿಣಿಗೆ ಗೈರಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT