ಬೆಂಗಳೂರಿನಲ್ಲಿ ಯಶವಂತ್ ಸಿನ್ಹಾ 
ರಾಜಕೀಯ

ನೂಪುರ್ ಶರ್ಮಾಗೆ 'ಸುಪ್ರೀಂ' ಛೀಮಾರಿ: ಸಿಜೆಐಗೆ ಅಭಿನಂದನೆ ಸಲ್ಲಿಸಿದ ಯಶವಂತ್ ಸಿನ್ಹಾ

ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಅಭ್ಯರ್ಥಿಯಾಗಿರುವ ಯಶವಂತ್ ಸಿನ್ಹಾ ಅವರು ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ಪ್ರಕರಣಕ್ಕೆ  ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಅಭ್ಯರ್ಥಿಯಾಗಿರುವ ಯಶವಂತ್ ಸಿನ್ಹಾ ಅವರು ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ಪ್ರಕರಣಕ್ಕೆ  ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಇಂದು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿನ್ಹಾ, ಎರಡು ದಿನಗಳ ಹಿಂದೆ ಸುಪ್ರೀಂ ಕೋರ್ಟ್ ಬಿಜೆಪಿಯ ಮಾಜಿ ವಕ್ತಾರೆಗೆ ಛೀಮಾರಿ ಹಾಕಿದೆ. ನ್ಯಾಯಾಂಗ ಸಂವಿಧಾನಕ್ಕೆ ಉತ್ತರ ಕೊಡುತ್ತದೆ. ರಾಜಕೀಯ ಪಕ್ಷಗಳಿಗೆ ಅಲ್ಲ ಅಂತ ಹೇಳಿರುವುದು ಸ್ವಾಗತಾರ್ಹ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಆದರೆ, ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪ್ರಕಟಣೆಗಳು ಬರುತ್ತಿರುವುದು ದೇಶದ ದೌರ್ಭಾಗ್ಯ. ರಾಮಮಂದಿರ ತೀರ್ಪು ಮಂದಾಗ ಇಡೀ ದೇಶವೇ ಮೌನವಾಗಿ ಸ್ವಾಗತಿಸಿದೆ. ಈಗ ಅವರ ವಿರುದ್ಧ ತೀರ್ಪು ಬಂದಾಗ ನ್ಯಾಯಾಂಗ ನಿಂದಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡೆದುಕೊಳ್ಳುವ ಕೆಲಸ ಮಾಡುತ್ತಿದೆ. ಇಡಿ, ಸಿಬಿಐಗಳ ಮೂಲಕ ಪ್ರತಿಪಕ್ಷಗಳ ನಾಯಕರನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ. ಪ್ರತಿಪಕ್ಷಗಳ ಗೌರವಾನ್ವಿತ ನಾಯಕರನ್ನು ಅವಮಾನ ಮಾಡುವ ದೃಷ್ಟಿಯಿಂದ ಇಡಿ ವಿಚಾರಣೆಗೆ ಕರೆಯಲಾಗುತ್ತಿದೆ. ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ನಡೆದ ಬೆಳವಣಿಗೆ, ಮಧ್ಯಪ್ರದೇಶ, ಕರ್ನಾಟಕ, ರಾಜ್ಯಗಳಲ್ಲಿ ಆಗಿರುವ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದರು.

ನಾನು ಆಯ್ಕೆಯಾದರೆ ಸಂವಿಧಾನಕ್ಕೆ ಉತ್ತರದಾಯಿತ್ವ ಆಗಲಿದ್ದೇನೆ. ಸಂವಿಧಾನಕ್ಕೆ ಮಾತ್ರ ಉತ್ತರದಾಯಿತ್ವ ಆಗಲಿದ್ದೇನೆ. ಆಡಳಿತ ಪಕ್ಷದ ಅಭ್ಯರ್ಥಿಯೂ ಹಾಗೆಯೇ ಇರಬೇಕು ಎಂದು ಬಯಸುತ್ತಿದ್ದೇನೆ. ರಾಷ್ಟ್ರಪತಿ ರಬ್ಬರ್ ಸ್ಟಾಂಪ್ ಆಗಬಾರದು. ಆಡಳಿತ ಪಕ್ಷದ ಅಭ್ಯರ್ಥಿ ಇದನ್ನು ಗಮನಿಸಲಿ. ರಾಜ್ಯಗಳಲ್ಲಿ ನಡೆಯುತ್ತಿರುವ ಆಪರೇಷನ್ ಕಮಲ ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಅಗತ್ಯವಿದೆ. ಆಡಳಿತ ಪಕ್ಷದ ಅಭ್ಯರ್ಥಿ ಅದನ್ನು ಪರಿಪಾಲಿಸಲಿ ಎಂದು ತಿಳಿಸಿದರು.

ದೇಶದಲ್ಲಿ ಕೋಮು ಧೃವೀಕರಣ ಆಗುತ್ತಿರುವುದನ್ನು ತಡೆಯುವ ಕೆಲಸವಾಗಬೇಕಿದೆ. ಆಡಳಿತ ಪಕ್ಷದ ಅಭ್ಯರ್ಥಿ ಅದನ್ನು ತಡೆಯುವ ಬಗ್ಗೆ ತಮ್ಮ ನಿಲುವು ಪ್ರಕಟಿಸಲಿ ಎಂದು ಹೇಳಿದ ಅವರು, ದುರ್ದೈವ ದೇವೇಗೌಡರ ಭೇಟಿ ಮಾಡುತ್ತಿಲ್ಲ ಎಂದು ಇದೇ ವೇಳೆ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT