ದ್ರೌಪದಿ ಮುರ್ಮು 
ರಾಜಕೀಯ

ಭಾನುವಾರ ಬೆಂಗಳೂರಿಗೆ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಆಗಮನ: ಶಾಸಕರು- ಸಂಸದರ ಬೆಂಬಲ ಕೋರಿಕೆ

ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಕರ್ನಾಟಕದ ಬಿಜೆಪಿ ಶಾಸಕರು ಮತ್ತು ಸಂಸದರ ಬೆಂಬಲ ಪಡೆಯಲು ಭಾನುವಾರ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.

ಬೆಂಗಳೂರು: ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಕರ್ನಾಟಕದ ಬಿಜೆಪಿ ಶಾಸಕರು ಮತ್ತು ಸಂಸದರ ಬೆಂಬಲ ಪಡೆಯಲು ಭಾನುವಾರ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.

ಆದಿವಾಸಿ ಮಹಿಳೆ ಮುರ್ಮು ಅವರು ಈಗಾಗಲೇ ರಾಜ್ಯಪಾಲರಾಗಿ, ಸಚಿವರಾಗಿ, ಕಾಲೇಜು ಉಪನ್ಯಾಸಕರಾಗಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದು, ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಅವರ ಗೆಲುವು ನಿಶ್ಚಿತ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹೇಳಿದ್ದಾರೆ.

ಪ್ರತಿಪಕ್ಷಗಳ ಅಧ್ಯಕ್ಷೀಯ ಅಭ್ಯರ್ಥಿ ಯಶವಂತ್ ಸಿನ್ಹಾ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿ ಟಿ ರವಿ, ಮುರ್ಮು ಅವರು ರಬ್ಬರ್ ಸ್ಟಾಂಪ್ ಅಧ್ಯಕ್ಷರಾಗುವುದಿಲ್ಲ ಎಂದು ಹೇಳಿದರು. 

ಮುರ್ಮು ಭಾನುವಾರ ಬಿಜೆಪಿ ಶಾಸಕರು ಮತ್ತು ಸಂಸದರನ್ನು ಭೇಟಿ ಮಾಡಲಿದ್ದಾರೆ. ಜನತಾ ದಳ (ಜಾತ್ಯತೀತ) ನಾಯಕರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ಆದರೆ, ಜೆಡಿಎಸ್ ನಾಯಕರ ಜತೆಗಿನ ಸಭೆ ಇನ್ನೂ ಖಚಿತವಾಗಿಲ್ಲ. ಜೆಡಿಎಸ್ ಎನ್‌ಡಿಎ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಹೇಳಿತ್ತು.    

ಸರ್ಕಾರವು ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂಬ ಯಶ್ವಂತ್ ಸಿನ್ಹಾ ಆರೋಪಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ನಾಯಕ ರವಿ, ಜಾರಿ ನಿರ್ದೇಶನಾಲಯ (ಇಡಿ) ಅಥವಾ ಆದಾಯ ತೆರಿಗೆ ಇಲಾಖೆ ಪ್ರಾಮಾಣಿಕರಿಗೆ ಏನೂ ಮಾಡಲು ಸಾಧ್ಯವಿಲ್ಲ, ಆದರೆ ಭ್ರಷ್ಟರು ಅವರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT