ನರೇಂದ್ರ ಮೋದಿ (ಸಂಗ್ರಹ ಚಿತ್ರ) 
ರಾಜಕೀಯ

ಮೈಸೂರಿನಲ್ಲಿ ಯೋಗಾಸನ, ಹೈದರಾಬಾದ್‌ನಲ್ಲಿ ಮಂಥನ: ಗೌರಿಶಂಕರದಷ್ಟು ಎತ್ತರ ಬಿಜೆಪಿ ಕುಟುಂಬ 'ಪರಿವಾರ ಪರ್ವತ'!

ನಾನು ಲಕ್ಕಿಡಿಪ್‌ ಸಿಎಂ, ಏನೀಗ? ಈಗ ಪಟ್ಟದಲ್ಲಿ ಕೂತಿರುವ ನಿಮ್ಮ ಸಿಎಂ ಅವರೇನು ಚುನಾವಣೆಯಲ್ಲಿ ಜನಾದೇಶ ಪಡೆದ ಘೋಷಿತ ಮುಖ್ಯಮಂತ್ರಿಯಾ?

ಬೆಂಗಳೂರು: ನಾನು ಲಕ್ಕಿಡಿಪ್‌ ಸಿಎಂ, ಏನೀಗ? ಈಗ ಪಟ್ಟದಲ್ಲಿ ಕೂತಿರುವ ನಿಮ್ಮ ಸಿಎಂ ಅವರೇನು ಚುನಾವಣೆಯಲ್ಲಿ ಜನಾದೇಶ ಪಡೆದ ಘೋಷಿತ ಮುಖ್ಯಮಂತ್ರಿಯಾ? ಅವರೂ ಲಕ್ಕಿಡಿಪ್ಪು ಎಂಬುದನ್ನು ಮರೆತರೆ ಹೇಗೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಗಳನ್ನು ಮಾಡಿ ಬಿಜೆಪಿ ಹಾಗೂ ಕುಟುಂಬ ರಾಜಕಾರಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರದ ನೆರಳೂ ಕಾಣದೆ ಬೆಂಗೆಟ್ಟಿದ್ದ ಬಿಜೆಪಿಗೆ ರಾಜ್ಯದಲ್ಲಿ ಕುರ್ಚಿರುಚಿ ತೋರಿಸಿದ ಅಂದಿನ 20:20 ಸರಕಾರದ ಡಿಸಿಎಂ ಆಗಿದ್ದ ನಿಮ್ಮವರನ್ನೇ ಕೇಳಿ. ನಿಮ್ಮಲ್ಲೆಷ್ಟು ಲಕ್ಕಿಡಿಪ್‌ʼಗಳಿದ್ದಾರೆ ಎಂಬುದನ್ನು ಅವರೇ ಹೇಳುತ್ತಾರೆ, ಸತ್ಯ ಸಾಕ್ಷಾತ್ಕಾರ ಮಾಡಿಸುತ್ತಾರೆ ಎಂದಿದ್ದಾರೆ.

ಲಕ್ಕಡಿಪ್‌ ಸಿಎಂ ಎಂದರೆ ಅಪಮಾನವೇನೂ ಅಲ್ಲ ನನಗೆ. ಆಕಸ್ಮಿಕ ಮುಖ್ಯಮಂತ್ರಿ ಎಂದು ಅನೇಕ ಸಲ ಹೇಳಿದ್ದೇನೆ. ಆದರೆ, ʼಆಪರೇಷನ್‌ ಕಮಲದ ಸಿಎಂʼ ಎನ್ನುವುದಕ್ಕಿಂತಾ ಕೀಳಾ ಅದು? ಯಾವುದು ಮೇಲು? ಯಾವುದು ಕೀಳು? ಸ್ವಲ್ಪ ಹೇಳಿ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿಯಲ್ಲಿ ಸಕ್ರಿಯವಾಗಿರುವ 16 ಮನೆತನಗಳ ಪಟ್ಟಿ ನೀಡುವ ಮೂಲಕ ಕೇಸರಿ ಪಕ್ಷವನ್ನು ‘ಪರಿವಾರ ಪರ್ವತʼ ಎಂದು ಎಚ್‌ಡಿಕೆ ವ್ಯಾಖ್ಯಾನಿಸಿದ್ದಾರೆ. ‘ಲಕ್ಕಿಡಿಪ್‌ ಸಿಎಂ ಎಂದರೆ ಅಪಮಾನವೇನೂ ಅಲ್ಲ ನನಗೆ. ಆಕಸ್ಮಿಕ ಮುಖ್ಯಮಂತ್ರಿ ಎಂದು ಅನೇಕ ಸಲ ಹೇಳಿದ್ದೇನೆ. ಆದರೆ, ‘ಆಪರೇಷನ್‌ ಕಮಲದ ಸಿಎಂʼ ಎನ್ನುವುದಕ್ಕಿಂತಾ ಕೀಳಾ ಅದು? ಯಾವುದು ಮೇಲು? ಯಾವುದು ಕೀಳು? ಸ್ವಲ್ಪ ಹೇಳಿ?’ ಎಂದು ಕೇಳಿದ್ದಾರೆ.

‘ಇನ್ನು, ಜಗತ್ತಿನ ಅಂಕುಡೊಂಕಿನ ಮಾತು ಹಾಗಿರಲಿ. ಪ್ರಧಾನಮಂತ್ರಿ ಸಂಚರಿಸಿದ ರಸ್ತೆಯನ್ನೇ ನೋಡಿದರೆ ಸಾಕು, ಅರಿವಾಗುತ್ತದೆ ನಿಮ್ಮ ಅಂಕೆಷ್ಟು, ಡೊಂಕೆಷ್ಟು? ಮಿಷನ್‌ ದಕ್ಷಿಣ ಮೂಲ ತಾತ್ಪರ್ಯ ಏನು? ಮೈಸೂರಿನಲ್ಲಿ ಯೋಗಾಸನ, ಹೈದರಾಬಾದ್‌ನಲ್ಲಿ ಮಂಥನ. ಅದರ ಮರ್ಮ ಅರಿಯದವರು ಯಾರೂ ಇಲ್ಲ’ ಎಂದು ವಾಗ್ದಾಳಿ ನಡೆಸಿದ್ದಾರೆ.

‘ಕರ್ನಾಟಕದಲ್ಲಿ ನೀವು ಅಧಿಕಾರಕ್ಕೆ ಬಂದಿದ್ದೇ ಜೆಡಿಎಸ್‌ ಕೃಪೆಯಿಂದ. ಸ್ವಪಕ್ಷವನ್ನೇ ಒಡೆದು ನನ್ನ ಜತೆ ಬರಲು ರೆಡಿ ಇದ್ದ ಆ ನಿಮ್ಮ ನಾಯಕರನ್ನು ನಾನೇ ತಡೆಯದೇ ಇದ್ದಿದ್ದರೆ, ನೀವು ಮತ್ತು ನಿಮ್ಮ ಪಕ್ಷ ಆವತ್ತೇ ನಡುನೀರಿನಲ್ಲಿ ಮುಳುಗಿಹೋಗುತ್ತಿದ್ದಿರಿ. ಅನುಮಾನ ಇದ್ದರೆ ಒಮ್ಮೆ ಅವರನ್ನೇ ಕೇಳಿ. ನನ್ನ ನಡುಕದ ಬಗ್ಗೆ ಆಮೇಲೆ ಮಾತನಾಡಿ’ ಎಂದು ಟೀಕಿಸಿದ್ದಾರೆ.

‘ಕುಟುಂಬ ರಾಜಕಾರಣದ ಕೊಂಡಿಗಳ ಬಗ್ಗೆ ಹೇಳಿದ್ದೀರಿ. ಈಗಾಗಲೇ ಪಟ್ಟಿ ಕೊಟ್ಟಿದ್ದೇನೆ. ಇದು ಮತ್ತೆ ನಿಮ್ಮ ಅವಗಾಹನೆಗೆ...
1.ಯಡಿಯೂರಪ್ಪ & ಸನ್ಸ್‌
2.ರವಿ ಸುಬ್ರಹ್ಮಣ್ಯ-ತೇಜಸ್ವಿಸೂರ್ಯ
3.ಅಶೋಕ್-ರವಿ
4.ವಿ.ಸೋಮಣ್ಣ-ಅರುಣ್‌ ಸೋಮಣ್ಣ
5.ಅರವಿಂದ ಲಿಂಬಾವಳಿ-ರಘು
6.ಎಸ್.ಆರ್.ವಿಶ್ವನಾಥ್-ವಾಣಿ ವಿಶ್ವನಾಥ್‌
7.ಜಗದೀಶ ಶೆಟ್ಟರ್-ಪ್ರದೀಪ್‌ ಶೆಟ್ಟರ್‌
8.ಮುರುಗೇಶ ನಿರಾಣಿ-ಹನುಮಂತ ನಿರಾಣಿ
9.ಜಿ.ಎಸ್.ಬಸವರಾಜು-ಜ್ಯೋತಿ ಗಣೇಶ್
10.ಜಾರಕಿಹೊಳಿ ಕುಟುಂಬ
11.ಕತ್ತಿ ಕುಟುಂಬ
12.ಜೊಲ್ಲೆ ಕುಟುಂಬ
13.ಅಂಗಡಿ ಕುಟುಂಬ
14.ಉದಾಸಿ ಕುಟುಂಬ
15.ಶ್ರೀರಾಮುಲು ಕುಟುಂಬ
16.ರೆಡ್ಡಿ ಬ್ರದರ್ಸ್‌’ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

‘ನಿಮ್ಮ ಪರಿವಾರ ಪುರಾಣ ಇನ್ನೂ ಇದೆ. 'ಬಿಜೆಪಿ ಕುಟುಂಬ ಕೊಂಡಿಗಳ ಆಡಂಬೋಲ' ಎನ್ನುವುದೂ ಗೊತ್ತಿದೆ. ರಾಷ್ಟ್ರವ್ಯಾಪಿ ವ್ಯಾಪಿಸಿರುವ ಕಮಲದ ಕುಟುಂಬವ್ಯಾಧಿ ಕೊಂಡಿಗಳನ್ನು ಬಿಚ್ಚಬೇಕೆ? ನೀವು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಗೌರಿಶಂಕರದಷ್ಟು ಎತ್ತರ ಕಾಣುವ ‘ಬಿಜೆಪಿ ಪರಿವಾರ ಪರ್ವತʼಗಳ ಬಗ್ಗೆ ಹೇಳಬೇಕಾದರೆ 'ಪರಿವಾರಕೋಟಿ'ಯನ್ನೇ ಬರೆಯಬಹುದು’ ಎಂದು ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

SCROLL FOR NEXT