ರಾಜಕೀಯ

ವಿದೇಶ ಪ್ರವಾಸದಿಂದ ಯಡಿಯೂರಪ್ಪ ವಾಪಸ್: ಸಿಎಂ ಬೊಮ್ಮಾಯಿ ಭೇಟಿ, ಚರ್ಚೆ

Lingaraj Badiger

ಬೆಂಗಳೂರು: ಕುಟುಂಬ ಸಮೇತರಾಗಿ ವಿದೇಶ ಪ್ರವಾಸ ಕೈಗೊಂಡಿದ್ದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಗುರುವಾರ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿಗೆ ವಾಪಸ್ಸಾದ ಯಡಿಯೂರಪ್ಪ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ರಾಜಕೀಯ ಹಾಗೂ ಇತ್ತೀಚಿನ ಬೆಳವಣಿಗೆಗಳ ಕುರಿತು ಉಭಯ ನಾಯಕರು ಚರ್ಚೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಶಾಸಕ ರಾಜುಗೌಡ, ಮಾಜಿ ಶಾಸಕ ಹರೀಶ್ ಉಪಸ್ಥಿತರಿದ್ದರು.

ಯಡಿಯೂರಪ್ಪ ಅವರು ಮುಖ್ಯಮಂತ್ರಿ ಹುದ್ದೆಗೆ ರಾಜಿನಾಮೆ ನೀಡಿದ ನಂತರ ಕಳೆದ 10 ತಿಂಗಳಲ್ಲಿ ಹಲವು ಬಾರಿ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಜುಲೈ 2021 ರಂದು ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ ನಂತರ ಯುರೋಪಿಯನ್ ದೇಶಗಳು ಸೇರಿದಂತೆ ನಾಲ್ಕು ರಾಷ್ಟ್ರಗಳಲ್ಲಿ ಪ್ರವಾಸ ಮಾಡಿದ್ದಾರೆ.

SCROLL FOR NEXT