ದ್ರೌಪದಿ ಮುರ್ಮು 
ರಾಜಕೀಯ

ರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಬೆಂಗಳೂರಿಗೆ ಆಗಮನ

ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ  ದ್ರೌಪದಿ ಮುರ್ಮು ಅವರು ಭಾನುವಾರ ಬೆಂಗಳೂರಿಗೆ ಆಗಮಿಸಿದರು.

ಬೆಂಗಳೂರು: ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ  ದ್ರೌಪದಿ ಮುರ್ಮು ಅವರು ಭಾನುವಾರ ಬೆಂಗಳೂರಿಗೆ ಆಗಮಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದ್ರೌಪದಿ ಮುರ್ಮು ಅವರನ್ನು ಆತ್ಮೀಯವಾಗಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ನಗರಾಭಿವೃದ್ಧಿ ಸಚಿ ಬಸವರಾಜ್ ಬೈರತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಿರೋಧ ಪಕ್ಷಗಳ ಅಭ್ಯರ್ಥಿಯಾಗಿರುವ ಯಶವಂತ್ ಸಿನ್ಹಾ ಅವರು, ಕೆಲವು ದಿನಗಳ ಹಿಂದೆ ಬೆಂಗಳೂರಿಗೆ ಆಗಮಿಸಿ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಬೆಂಬಲಿಸುವಂತೆ ಮನವಿ ಮಾಡಿದ್ದರು.

ರಾಷ್ಟ್ರಪತಿ ಹುದ್ದೆಗೆ ಜುಲೈ 18 ರಂದು ಚುನಾವಣೆ ನಡೆಯಲಿದ್ದು, ಜುಲೈ 21 ರಂದು ಫಲಿತಾಂಶ ಹೊರಬೀಳಲಿದೆ. ಈ ಹಿನ್ನೆಲೆಯಲ್ಲಿ ದ್ರೌಪದಿ ಮುರ್ಮು ಅವರು ತಮ್ಮನ್ನು ಬೆಂಬಲಿಸುವಂತೆ ಕೋರಿ ರಾಜ್ಯ ಬಿಜೆಪಿ ಹಾಗೂ ಜೆಡಿಎಸ್ ನಾಯಕರಲ್ಲಿ ಮನವಿ ಮಾಡಲು ಬೆಂಗಳೂರಿಗೆ ಭೇಟಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ