ದ್ರೌಪದಿ ಮುರ್ಮು 
ರಾಜಕೀಯ

ರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಬೆಂಗಳೂರಿಗೆ ಆಗಮನ

ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ  ದ್ರೌಪದಿ ಮುರ್ಮು ಅವರು ಭಾನುವಾರ ಬೆಂಗಳೂರಿಗೆ ಆಗಮಿಸಿದರು.

ಬೆಂಗಳೂರು: ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ  ದ್ರೌಪದಿ ಮುರ್ಮು ಅವರು ಭಾನುವಾರ ಬೆಂಗಳೂರಿಗೆ ಆಗಮಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದ್ರೌಪದಿ ಮುರ್ಮು ಅವರನ್ನು ಆತ್ಮೀಯವಾಗಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮತ್ತು ನಗರಾಭಿವೃದ್ಧಿ ಸಚಿ ಬಸವರಾಜ್ ಬೈರತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ವಿರೋಧ ಪಕ್ಷಗಳ ಅಭ್ಯರ್ಥಿಯಾಗಿರುವ ಯಶವಂತ್ ಸಿನ್ಹಾ ಅವರು, ಕೆಲವು ದಿನಗಳ ಹಿಂದೆ ಬೆಂಗಳೂರಿಗೆ ಆಗಮಿಸಿ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಬೆಂಬಲಿಸುವಂತೆ ಮನವಿ ಮಾಡಿದ್ದರು.

ರಾಷ್ಟ್ರಪತಿ ಹುದ್ದೆಗೆ ಜುಲೈ 18 ರಂದು ಚುನಾವಣೆ ನಡೆಯಲಿದ್ದು, ಜುಲೈ 21 ರಂದು ಫಲಿತಾಂಶ ಹೊರಬೀಳಲಿದೆ. ಈ ಹಿನ್ನೆಲೆಯಲ್ಲಿ ದ್ರೌಪದಿ ಮುರ್ಮು ಅವರು ತಮ್ಮನ್ನು ಬೆಂಬಲಿಸುವಂತೆ ಕೋರಿ ರಾಜ್ಯ ಬಿಜೆಪಿ ಹಾಗೂ ಜೆಡಿಎಸ್ ನಾಯಕರಲ್ಲಿ ಮನವಿ ಮಾಡಲು ಬೆಂಗಳೂರಿಗೆ ಭೇಟಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅಧಿಕಾರ ಹಂಚಿಕೆ ಬಗ್ಗೆ ಯಾರೂ ಮಾತನಾಡಬೇಡಿ, ಸಾರ್ವಜನಿಕ ಹೇಳಿಕೆ ಕೊಡಬೇಡಿ': ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಬುದ್ದಿಮಾತು

'ನೀವು ಶಾಶ್ವತ ವಿಪತ್ತು ನಿಧಿ ಏಕೆ ರಚಿಸಿಲ್ಲ': ಸಿಎಂ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನೆ

ಬೆಂಗಳೂರಿನಲ್ಲಿ ಭಯಾನಕ ರೋಡ್ ರೇಜ್: ಬೈಕ್ ಸವಾರನ ಬೆನ್ನಟ್ಟಿ ಲಾರಿ ಗುದ್ದಿಸಿ ಹತ್ಯೆಗೆ ಯತ್ನಿಸಿದ ಚಾಲಕ!

ರೈಲಿನಲ್ಲಿ ನಿದ್ದೆಗೆ ಜಾರಿದ ವ್ಯಾಪಾರಿ; 5.53 ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ!

ಜೈಪುರ-ಬಿಕಾನೇರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್-ಟ್ರಕ್ ಮುಖಾಮುಖಿ ಡಿಕ್ಕಿ: ನಾಲ್ವರು ಸಾವು, 27 ಜನರಿಗೆ ಗಾಯ

SCROLL FOR NEXT