ಸಿದ್ದರಾಮಯ್ಯ ಅವರಿಗೆ ಹಣ ವಾಪಸ್ ನೀಡಿದ ಮಹಿಳೆ 
ರಾಜಕೀಯ

ಮುದ್ದಾಗಿ ಸಾಕಿದ ಗಿಣಿ, ಹದ್ದಾಗಿ ಕುಕ್ಕುತ್ತಿದೆ! ಚಂದಾ ಎತ್ತಿ 'ಬಂಡವಾಳ' ಹೂಡಿ ಮಾಡಿದ ಉತ್ಸವ ತಿರುಗುಬಾಣವಾಗುವುದೇ?

ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಅಲ್ಪಸಂಖ್ಯಾತರನ್ನು ಎತ್ತಿ ಕಟ್ಟಿದ್ದ ಸಿದ್ದರಾಮಯ್ಯ ಅವರಿಗೆ ಈಗ ಅದೇ ಬಾಣವಾಗಿದೆ. ಮತೀಯ ಭಾಗ್ಯಗಳೆಲ್ಲ, ಬಾಣವಾಗಿ ಸಿದ್ದರಾಮಯ್ಯ ಅವರನ್ನು ಕಾಡಲಿದೆ ಎಂದು ಬಿಜೆಪಿ ಟೀಕಿಸಿದೆ.

ಬೆಂಗಳೂರು: ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಅಲ್ಪಸಂಖ್ಯಾತರನ್ನು ಎತ್ತಿ ಕಟ್ಟಿದ್ದ ಸಿದ್ದರಾಮಯ್ಯ ಅವರಿಗೆ ಈಗ ಅದೇ ಬಾಣವಾಗಿದೆ. ಮತೀಯ ಭಾಗ್ಯಗಳೆಲ್ಲ, ಬಾಣವಾಗಿ ಸಿದ್ದರಾಮಯ್ಯ ಅವರನ್ನು ಕಾಡಲಿದೆ ಎಂದು ಬಿಜೆಪಿ ಟೀಕಿಸಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ,  ಅಲ್ಪಸಂಖ್ಯಾತ ಮಹಿಳೆ ಆಮಿಷಕ್ಕೂ ಬಗ್ಗದೆ, ನ್ಯಾಯ ಕೇಳಿದ್ದು, ಆಕೆಯ ಒಬ್ಬಾಕೆಯ ದನಿ ಅಲ್ಲ, ಅದು ಅಲ್ಪಸಂಖ್ಯಾತರ ಧ್ವನಿ. ಕಾಂಗ್ರೆಸ್ ಓಲೈಕೆ ರಾಜಕಾರಣ ಎಂದು ಲೇವಡಿ ಮಾಡಿದೆ.

ಸಿದ್ದರಾಮಯ್ಯನವರು ನೀಡಿದ ದುಡ್ಡು ಬಿಸಾಕಿದ್ದು ಕೇವಲ ಒಬ್ಬ ಮುಸ್ಲಿಂ ಮಹಿಳೆ ಎಂದು ಭಾವಿಸಬೇಕಿಲ್ಲ. ಸುಳ್ಳು, ಕಪಟ, ದುರಂಹಕಾರ, ಅಧಿಕಾರ ಮದದ ಸಂಕೇತವಾಗಿರುವ ವ್ಯಕ್ತಿಯ ವಿರುದ್ಧ ಸಮಾಜವೇ ತಿರುಗಿ ಬೀಳುತ್ತಿರುವ ಪರಿಯಿದು. ಸಿದ್ದರಾಮಯ್ಯ ಅವರೇ,  ಅಲ್ಪಸಂಖ್ಯಾತರು ತಿರುಗಿ ಬೀಳುತ್ತಿದ್ದಾರೆ. ಎಚ್ಚರಿಕೆಯ ಕರೆಗಂಟೆಯಿದು. ಮುದ್ದಾಗಿ ಸಾಕಿದ ಗಿಣಿ, ಹದ್ದಾಗಿ ಕುಕ್ಕುತ್ತಿದೆ! ಎಂದು ಬಿಜೆಪಿ ಟ್ವೀಟ್ ಮಾಡಿದೆ.

ವಿರೋಧ ಪಕ್ಷದ ನಾಯಕರೇ, ನಾಳೆ ನಿಮ್ಮ ಪಟಾಲಂ ಮಾಡುವ ಸಿದ್ದರಾಮೋತ್ಸವ ನಂತರ ಇದೇ ಸ್ಥಿತಿ ಉದ್ಭವವಾಗುವ ಲಕ್ಷಣ ದಟ್ಟವಾಗಿದೆ. ಚಂದಾ ಎತ್ತಿ 'ಬಂಡವಾಳ' ಹೂಡಿ ಮಾಡಿದ ಉತ್ಸವ ತಿರುಗುಬಾಣವಾಗುವುದೇ? ಸಿದ್ದರಾಮೋತ್ಸವದ ಆರಂಭಿಕ ಲಕ್ಷಣವೇ ಹೀಗಾದರೇ, ಅಂತ್ಯ ಹೇಗಿರಬಹುದು ಎಂದು ಬಿಜೆಪಿ ಪ್ರಶ್ನಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

SCROLL FOR NEXT