ಹೆಚ್.ಡಿ.ಕುಮಾರಸ್ನಾಮಿ 
ರಾಜಕೀಯ

ಸಿಜೆಐ ಎನ್ ವಿ ರಮಣ ಅವರ ಹೇಳಿಕೆಗೆ ನನ್ನ ಸಹಮತ ಇದೆ: ಎಚ್ ಡಿ ಕುಮಾರಸ್ವಾಮಿ

ಸಿಜೆಐ ಎನ್ ವಿ ರಮಣ ಅವರ ಹೇಳಿಕೆಗೆ ನನ್ನ ಸಹಮತ ಇದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಸಿಜೆಐ ಎನ್ ವಿ ರಮಣ ಅವರ ಹೇಳಿಕೆಗೆ ನನ್ನ ಸಹಮತ ಇದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌’ನ ಘನವೆತ್ತ ಮುಖ್ಯ ನ್ಯಾಯಮೂರ್ತಿಗಳಾದ ರಮಣ ಅವರು ಜೈಪುರದ ಸಭೆಗಳಲ್ಲಿ ಪ್ರತಿಪಕ್ಷಗಳು ಮತ್ತು ವಿಚಾರಣಾಧೀನ ಕೈದಿಗಳ ಬಗ್ಗೆ ಪ್ರಸ್ತಾಪಿಸಿರುವ ಮಹತ್ವದ ಅಂಶಗಳ ಬಗ್ಗೆ ನನ್ನ ಸಹಮತ ಇದೆ. ಅದಕ್ಕಾಗಿ ನಾನು ಮಾನ್ಯ ಮುಖ್ಯ ನ್ಯಾಯಮೂರ್ತಿಗಳನ್ನು ಅಭಿನಂದಿಸುತ್ತೇನೆ ಎಂದು ಕುಮಾರಸ್ವಾಮಿ ಭಾನುವಾರ ಸರಣಿ ಟ್ವೀಟ್ ಮಾಡಿದ್ದಾರೆ.

ಸ್ವಾತಂತ್ರ್ಯ ಭಾರತದಲ್ಲಿ ನಾವು 75 ವರ್ಷ ಸಾಗಿದ್ದೇವೆ. ಈ ಸಂದರ್ಭದಲ್ಲಿ ಮಾನ್ಯ ಮುಖ್ಯ ನ್ಯಾಯಮೂರ್ತಿಗಳು ಎಚ್ಚರಿಸಿ ಹೇಳಿರುವ ಮಾತುಗಳನ್ನು ಎಲ್ಲರೂ ಕೇಳಲೇಬೇಕು. ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ-ಪ್ರತಿಪಕ್ಷಗಳ ಜುಗುಲ್‌ʼಬಂದಿ ಇದ್ದರೆ ದೇಶಕ್ಕೆ ಶ್ರೇಯಸ್ಸು ಎಂದು ಹೆಚ್ ಡಿಕೆ ಟ್ವೀಟ್ ನಲ್ಲಿ ಅಭಿಪ್ರಾಯ ಹೊರ ಹಾಕಿದ್ದಾರೆ.

ಕ್ರಿಮಿನಲ್‌ ನ್ಯಾಯ ವ್ಯವಸ್ಥೆಯಲ್ಲಿ ವಿಚಾರಣೆಯೇ ಇಲ್ಲದೆ ದೀರ್ಘಕಾಲ ಬಂಧನದಲ್ಲಿ ಇರಿಸುವುದೂ ಒಂದು ಶಿಕ್ಷೆಯೇ ಸರಿ. ಆತುರ, ವಿವೇಚನೆ ಇಲ್ಲದ ಬಂಧನಗಳು, ಜಾಮೀನು ಪಡೆಯುವಲ್ಲಿನ ಕಷ್ಟಗಳ ಬಗ್ಗೆಯೂ ಮಾನ್ಯ ಮುಖ್ಯ ನ್ಯಾಯಮೂರ್ತಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಮಾನ್ಯ ಮುಖ್ಯ ನ್ಯಾಯಮೂರ್ತಿಗಳ ಮಾತುಗಳು ಹೊಣೆಗೇಡಿತನದ ಆಡಳಿತದ ಕಣ್ತೆರೆಸಲಿ ಎಂದು ಟ್ವೀಟ್ ನಲ್ಲಿ ಬರೆದಿದ್ದಾರೆ.

'ಸ್ವಾತಂತ್ರ್ಯ ಭಾರತದಲ್ಲಿ ನಾವು 75 ವರ್ಷ ಸಾಗಿದ್ದೇವೆ. ಈ ಸಂದರ್ಭದಲ್ಲಿ ಮಾನ್ಯ ಮುಖ್ಯ ನ್ಯಾಯಮೂರ್ತಿಗಳು ಎಚ್ಚರಿಸಿ ಹೇಳಿರುವ ಮಾತುಗಳನ್ನು ಎಲ್ಲರೂ ಕೇಳಲೇಬೇಕು. ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ-ಪ್ರತಿಪಕ್ಷಗಳ ಜುಗುಲ್‌ʼಬಂದಿ ಇದ್ದರೆ ದೇಶಕ್ಕೆ ಶ್ರೇಯಸ್ಸು. ಕ್ರಿಮಿನಲ್‌ ನ್ಯಾಯ ವ್ಯವಸ್ಥೆಯಲ್ಲಿ ವಿಚಾರಣೆಯೇ ಇಲ್ಲದೆ ದೀರ್ಘಕಾಲ ಬಂಧನದಲ್ಲಿ ಇರಿಸುವುದೂ ಒಂದು ಶಿಕ್ಷೆಯೇ ಸರಿ. ಆತುರ, ವಿವೇಚನೆ ಇಲ್ಲದ ಬಂಧನಗಳು, ಜಾಮೀನು ಪಡೆಯುವಲ್ಲಿನ ಕಷ್ಟಗಳ ಬಗ್ಗೆಯೂ ಮಾನ್ಯ ಮುಖ್ಯ ನ್ಯಾಯಮೂರ್ತಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಮಾನ್ಯ ಮುಖ್ಯ ನ್ಯಾಯಮೂರ್ತಿಗಳ ಮಾತುಗಳು ಹೊಣೆಗೇಡಿತನದ ಆಡಳಿತದ ಕಣ್ತೆರೆಸಲಿ'.

'ಸುಪ್ರೀಂ ಕೋರ್ಟ್‌'ನ ಘನವೇತ್ತ ಮುಖ್ಯ ನ್ಯಾಯಮೂರ್ತಿಗಳಾದ ರಮಣ ಅವರು ಜೈಪುರದ ಸಭೆಗಳಲ್ಲಿ ಪ್ರತಿಪಕ್ಷಗಳು ಮತ್ತು ವಿಚಾರಣಾಧೀನ ಕೈದಿಗಳ ಬಗ್ಗೆ ಪ್ರಸ್ತಾಪಿಸಿರುವ ಮಹತ್ವದ ಅಂಶಗಳ ಬಗ್ಗೆ ನನ್ನ ಸಹಮತ ಇದೆ. ಅದಕ್ಕಾಗಿ ನಾನು ಮಾನ್ಯ ಮುಖ್ಯ ನ್ಯಾಯಮೂರ್ತಿಗಳನ್ನು ಅಭಿನಂದಿಸುತ್ತೇನೆ' ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT