ಹೆಚ್.ಡಿ.ಕುಮಾರಸ್ನಾಮಿ 
ರಾಜಕೀಯ

ಸಿಜೆಐ ಎನ್ ವಿ ರಮಣ ಅವರ ಹೇಳಿಕೆಗೆ ನನ್ನ ಸಹಮತ ಇದೆ: ಎಚ್ ಡಿ ಕುಮಾರಸ್ವಾಮಿ

ಸಿಜೆಐ ಎನ್ ವಿ ರಮಣ ಅವರ ಹೇಳಿಕೆಗೆ ನನ್ನ ಸಹಮತ ಇದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ಸಿಜೆಐ ಎನ್ ವಿ ರಮಣ ಅವರ ಹೇಳಿಕೆಗೆ ನನ್ನ ಸಹಮತ ಇದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸುಪ್ರೀಂ ಕೋರ್ಟ್‌’ನ ಘನವೆತ್ತ ಮುಖ್ಯ ನ್ಯಾಯಮೂರ್ತಿಗಳಾದ ರಮಣ ಅವರು ಜೈಪುರದ ಸಭೆಗಳಲ್ಲಿ ಪ್ರತಿಪಕ್ಷಗಳು ಮತ್ತು ವಿಚಾರಣಾಧೀನ ಕೈದಿಗಳ ಬಗ್ಗೆ ಪ್ರಸ್ತಾಪಿಸಿರುವ ಮಹತ್ವದ ಅಂಶಗಳ ಬಗ್ಗೆ ನನ್ನ ಸಹಮತ ಇದೆ. ಅದಕ್ಕಾಗಿ ನಾನು ಮಾನ್ಯ ಮುಖ್ಯ ನ್ಯಾಯಮೂರ್ತಿಗಳನ್ನು ಅಭಿನಂದಿಸುತ್ತೇನೆ ಎಂದು ಕುಮಾರಸ್ವಾಮಿ ಭಾನುವಾರ ಸರಣಿ ಟ್ವೀಟ್ ಮಾಡಿದ್ದಾರೆ.

ಸ್ವಾತಂತ್ರ್ಯ ಭಾರತದಲ್ಲಿ ನಾವು 75 ವರ್ಷ ಸಾಗಿದ್ದೇವೆ. ಈ ಸಂದರ್ಭದಲ್ಲಿ ಮಾನ್ಯ ಮುಖ್ಯ ನ್ಯಾಯಮೂರ್ತಿಗಳು ಎಚ್ಚರಿಸಿ ಹೇಳಿರುವ ಮಾತುಗಳನ್ನು ಎಲ್ಲರೂ ಕೇಳಲೇಬೇಕು. ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ-ಪ್ರತಿಪಕ್ಷಗಳ ಜುಗುಲ್‌ʼಬಂದಿ ಇದ್ದರೆ ದೇಶಕ್ಕೆ ಶ್ರೇಯಸ್ಸು ಎಂದು ಹೆಚ್ ಡಿಕೆ ಟ್ವೀಟ್ ನಲ್ಲಿ ಅಭಿಪ್ರಾಯ ಹೊರ ಹಾಕಿದ್ದಾರೆ.

ಕ್ರಿಮಿನಲ್‌ ನ್ಯಾಯ ವ್ಯವಸ್ಥೆಯಲ್ಲಿ ವಿಚಾರಣೆಯೇ ಇಲ್ಲದೆ ದೀರ್ಘಕಾಲ ಬಂಧನದಲ್ಲಿ ಇರಿಸುವುದೂ ಒಂದು ಶಿಕ್ಷೆಯೇ ಸರಿ. ಆತುರ, ವಿವೇಚನೆ ಇಲ್ಲದ ಬಂಧನಗಳು, ಜಾಮೀನು ಪಡೆಯುವಲ್ಲಿನ ಕಷ್ಟಗಳ ಬಗ್ಗೆಯೂ ಮಾನ್ಯ ಮುಖ್ಯ ನ್ಯಾಯಮೂರ್ತಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಮಾನ್ಯ ಮುಖ್ಯ ನ್ಯಾಯಮೂರ್ತಿಗಳ ಮಾತುಗಳು ಹೊಣೆಗೇಡಿತನದ ಆಡಳಿತದ ಕಣ್ತೆರೆಸಲಿ ಎಂದು ಟ್ವೀಟ್ ನಲ್ಲಿ ಬರೆದಿದ್ದಾರೆ.

'ಸ್ವಾತಂತ್ರ್ಯ ಭಾರತದಲ್ಲಿ ನಾವು 75 ವರ್ಷ ಸಾಗಿದ್ದೇವೆ. ಈ ಸಂದರ್ಭದಲ್ಲಿ ಮಾನ್ಯ ಮುಖ್ಯ ನ್ಯಾಯಮೂರ್ತಿಗಳು ಎಚ್ಚರಿಸಿ ಹೇಳಿರುವ ಮಾತುಗಳನ್ನು ಎಲ್ಲರೂ ಕೇಳಲೇಬೇಕು. ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ-ಪ್ರತಿಪಕ್ಷಗಳ ಜುಗುಲ್‌ʼಬಂದಿ ಇದ್ದರೆ ದೇಶಕ್ಕೆ ಶ್ರೇಯಸ್ಸು. ಕ್ರಿಮಿನಲ್‌ ನ್ಯಾಯ ವ್ಯವಸ್ಥೆಯಲ್ಲಿ ವಿಚಾರಣೆಯೇ ಇಲ್ಲದೆ ದೀರ್ಘಕಾಲ ಬಂಧನದಲ್ಲಿ ಇರಿಸುವುದೂ ಒಂದು ಶಿಕ್ಷೆಯೇ ಸರಿ. ಆತುರ, ವಿವೇಚನೆ ಇಲ್ಲದ ಬಂಧನಗಳು, ಜಾಮೀನು ಪಡೆಯುವಲ್ಲಿನ ಕಷ್ಟಗಳ ಬಗ್ಗೆಯೂ ಮಾನ್ಯ ಮುಖ್ಯ ನ್ಯಾಯಮೂರ್ತಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಮಾನ್ಯ ಮುಖ್ಯ ನ್ಯಾಯಮೂರ್ತಿಗಳ ಮಾತುಗಳು ಹೊಣೆಗೇಡಿತನದ ಆಡಳಿತದ ಕಣ್ತೆರೆಸಲಿ'.

'ಸುಪ್ರೀಂ ಕೋರ್ಟ್‌'ನ ಘನವೇತ್ತ ಮುಖ್ಯ ನ್ಯಾಯಮೂರ್ತಿಗಳಾದ ರಮಣ ಅವರು ಜೈಪುರದ ಸಭೆಗಳಲ್ಲಿ ಪ್ರತಿಪಕ್ಷಗಳು ಮತ್ತು ವಿಚಾರಣಾಧೀನ ಕೈದಿಗಳ ಬಗ್ಗೆ ಪ್ರಸ್ತಾಪಿಸಿರುವ ಮಹತ್ವದ ಅಂಶಗಳ ಬಗ್ಗೆ ನನ್ನ ಸಹಮತ ಇದೆ. ಅದಕ್ಕಾಗಿ ನಾನು ಮಾನ್ಯ ಮುಖ್ಯ ನ್ಯಾಯಮೂರ್ತಿಗಳನ್ನು ಅಭಿನಂದಿಸುತ್ತೇನೆ' ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT