ಬೆಂಗಳೂರು: ಕಾಂಗ್ರೆಸ್ ಮುಕ್ತ ಕರ್ನಾಟಕದ ಅಘೋಷಿತ ಬ್ರ್ಯಾಂಡ್ ಅಂಬಾಸಿಡರ್ ಆಗಿ ನಾಲ್ವರು ನೇಮಕವಾಗಿದ್ದಾರೆ, ಕಾಂಗ್ರೆಸ್ ಪಕ್ಷವನ್ನು ಕರ್ನಾಟಕದಲ್ಲಿ ಬೇರು ಸಮೇತ ಕಿತ್ತು ಹಾಕಲು ಇವರು ಭಾರೀ ಪೈಪೋಟಿ ನಡೆಸುತ್ತಿದ್ದಾರೆ ಎಂದು ಬಿಜೆಪಿ ಲೇವಡಿ ಮಾಡಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಮುಕ್ತ ಕರ್ನಾಟಕದ ಅಘೋಷಿತ ಬ್ರ್ಯಾಂಡ್ ಅಂಬಾಸಿಡರ್ ಆಗಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಡಾ.ಜಿ. ಪರಮೇಶ್ವರ ನೇಮಕವಾಗಿದ್ದಾರೆ.
ಇದನ್ನೂ ಓದಿ: 'ಮುಂದಿನ ಚುನಾವಣೆಯಲ್ಲಿ ಚಾಮುಂಡೇಶ್ವರಿಯಿಂದ ಸ್ಪರ್ಧಿಸಲ್ಲ; ರಾಜ್ಯಸಭೆ ಸೇರಿ ಯಾವುದೇ ಹುದ್ದೆ ನೀಡಿದರೂ ಸ್ವೀಕರಿಸುವುದಿಲ್ಲ'
ಕೆಪಿಸಿಸಿ ಅಧ್ಯಕ್ಷರಾದವರೇ ಸಿಎಂ ಆಗುವುದು ವಾಡಿಕೆ ಎಂದಿದ್ದ ಡಾ.ಜಿ.ಪರಮೇಶ್ವರ ಅವರನ್ನು ಸಿದ್ದರಾಮಯ್ಯ ಬಣ ಸೋಲಿಸಿತ್ತು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಎಚ್ಚರಿಕೆಯ ಕರೆಗಂಟೆ ಬಾರಿಸುತ್ತಿದೆ! ತಾನು ಉಳಿಯಬೇಕೆಂದರೆ ಇನ್ನೊಬ್ಬರನ್ನು ಮಕಾಡೆ ಮಲಗಿಸುವ" ತಂತ್ರದಿಂದ ಕಾಂಗ್ರೆಸ್ ಮುಕ್ತ ಕರ್ನಾಟಕ ವಾಗುವುದರಲ್ಲಿ ಸಂಶಯವಿಲ್ಲ ಎಂದು ಬಿಜೆಪಿ ಕಾಲೆಳೆದಿದೆ.
ಇದನ್ನೂ ಓದಿ: ದೇವೇಗೌಡರು, ಕುಮಾರಣ್ಣಂಗೆ ಅವಕಾಶ ಮಾಡಿಕೊಟ್ಟಿದ್ದೀರಿ, ಸೇವೆ ಮಾಡಲು ನನಗೂ ಒಂದು ಚಾನ್ಸ್ ಕೊಡಿ: ಡಿಕೆ ಶಿವಕುಮಾರ್
ಟಗರು ಮತ್ತು ಬಂಡೆ ನಡುವೆ ಕಾದಾಟ ಆರಂಭಗೊಂಡಿದೆ. ಟಗರಿನ ಕೊಂಬು ಮುರಿಯಬಹುದೇ ಅಥವಾ ಬಂಡೆ ಪುಡಿಯಾಗಬಹುದೇ? ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವಿನ ಕಾದಾಟದಲ್ಲಿ ಕಾಂಗ್ರೆಸ್ ಮನೆ ಖಾಲಿಯಾಗಲಿದೆ. ಕಾಂಗ್ರೆಸ್ ಮುಕ್ತ ಕರ್ನಾಟಕ ನಿರ್ಮಿಸಲು ಪಣತೊಟ್ಟ ಈ ಇಬ್ಬರು ನಾಯಕರಿಗೆ ಜನತೆಯ ಪರವಾಗಿ ಅಭಿನಂದನೆಗಳು ಎಂದು ಬಿಜೆಪಿ ಟಾಂಗ್ ನೀಡಿದೆ.