ಕೆ.ಎಸ್ ಈಶ್ವರಪ್ಪ 
ರಾಜಕೀಯ

ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಸಮಾಜವಾದಿಗಳಂತೆ ನಟಿಸುತ್ತಿದ್ದಾರೆ: ಕೆಎಸ್ ಈಶ್ವರಪ್ಪ

ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಧಿಕಾರಕ್ಕೇರಲು ಹರಸಾಹಸ ಮಾಡುತ್ತಿದ್ದಾರೆ, ಜೊತೆಗೆ ಸಮಾಜವಾದಿಗಳಂತೆ ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಶಿವಮೊಗ್ಗ: ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅಧಿಕಾರಕ್ಕೇರಲು ಹರಸಾಹಸ ಮಾಡುತ್ತಿದ್ದಾರೆ, ಜೊತೆಗೆ ಸಮಾಜವಾದಿಗಳಂತೆ ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಈಶ್ವರಪ್ಪ, ಸಿದ್ದರಾಮೋತ್ಸವ ಕೊನೆಯ ನಾಟಕ, ಮುಂದಿನ ಚುನಾವಣೆಗೆ ಇದು ಕಸರತ್ತು. ಈ ಉತ್ಸವ ಮುಗಿಯುತ್ತಿದ್ದಂತೆ ಕಾಂಗ್ರೆಸ್‌ ಸರ್ಕಸ್‌ಗಳೇನೇನಾಗುತ್ತೆ ನೋಡುತ್ತಾ ಇರಿ. ಹುಟ್ಟುಹಬ್ಬವನ್ನು ಅಷ್ಟು ಅದ್ಧೂರಿಯಾಗಿ ಆಚರಿಸುವ ಅವಶ್ಯಕತೆ ಏನಿದೆ, ಅಭಿಮಾನಿಗಳ ಹೆಸರಿನಲ್ಲಿ ಮೈಲೇಜ್ ಪಡೆಯಲು ಯತ್ನಿಸುತ್ತಿರುವ ಸಿದ್ದರಾಮಯ್ಯ ಈ ಕಾರ್ಯಕ್ರಮಕ್ಕೆ 75 ಕೋಟಿ ಹಣ ಖರ್ಚು ಮಾಡಬೇಕೆ ಎಂದು ಪ್ರಶ್ನಿಸಿದ್ದಾರೆ.

ಕುವೆಂಪು ಅವರ ಮಾರ್ಗದಲ್ಲಿ ನಡಯುವುದಾಗಿ ಹೇಳುವ ಡಿಕೆ ಶಿವಕುಮಾರ್, ಎಲ್ಲರನ್ನೂ ಒಗ್ಗಟ್ಟಾಗಿ ಕರೆದುಕೊಂಡು ಹೋಗುವ ಬದಲು, ನಿರ್ದಿಷ್ಟ ಸಮುದಾಯದವರಿಗಾಗಿ ಕಾರ್ಯಕ್ರಮ ಆಯೋಜಿಸುತ್ತಾರೆ ಎಂದು ಈಶ್ವರಪ್ಪ ವ್ಯಂಗ್ಯ ಮಾಡಿದರು.

ಸಿದ್ದರಾಮೋತ್ಸವ ಮಾಡಿ ಕಾಂಗ್ರೆಸ್‌ ವ್ಯಕ್ತಿ ಪೂಜೆ ಶುರುಮಾಡಿದೆ ಎಂದು ನನಗೆ ಪ್ರಶ್ನೆ ಕೇಳೋದಕ್ಕಿಂತಾ ಸಿದ್ದರಾಮಯ್ಯ ಅವರನ್ನೇ ಕೇಳೋದು ಒಳಿತು. ತಾನು ಸಮಾಜವಾದಿ, ತುಂಬಾ ಸರಳ, ವೈಭವೀಕರಣ ಇಲ್ಲ ಅಂತ ಹೇಳಿಕೊಂಡು ಓಡಾಡುತ್ತಿದ್ದ ವ್ಯಕ್ತಿ ಇಂದು ಹಿಂದೆಂದೂ ಯಾವ ಮಹಾಪುರುಷರೂ ಮಾಡದಷ್ಟು ದೊಡ್ಡ ಮಟ್ಟದಲ್ಲಿ ಉತ್ಸವ ಮಾಡಿಕೊಳ್ಳಲು ಹೊರಟಿದ್ದಾರೆ ಎಂದರು. ಸಿದ್ದರಾಮಯ್ಯ ಖಂಡಿತವಾಗಿಯೂ  ಮುಸ್ಲಿಂ ಪ್ರಾಬಲ್ಯವಿರುವ ಸ್ಥಳದಿಂದ ಚುನಾವಣೆಗೆ ಸ್ಪರ್ಧಿಸುತ್ತಾರೆ ಇಲ್ಲದಿದ್ದಾರೆ ಅವರಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT