ಸಿಎಂ ಬೊಮ್ಮಾಯಿ 
ರಾಜಕೀಯ

ಸಿಎಂ ಬೊಮ್ಮಾಯಿ ಜುಲೈ 25ರಿಂದ ಎರಡು ದಿನ ದೆಹಲಿ ಪ್ರವಾಸ: ಹೈಕಮಾಂಡ್ ಜೊತೆ ಸಂಪುಟ ವಿಸ್ತರಣೆ ಚರ್ಚೆ?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು  ಇದೇ 25 ಮತ್ತು 26 ರಂದು ದೆಹಲಿ ಪ್ರವಾಸ ಕೈಗೊಂಡು, ಪಕ್ಷ ಸಂಘಟನೆ, ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಷಯಗಳ ಕುರಿತು ಪಕ್ಷದ ರಾಷ್ಟ್ರೀಯ ನಾಯಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು  ಇದೇ 25 ಮತ್ತು 26 ರಂದು ದೆಹಲಿ ಪ್ರವಾಸ ಕೈಗೊಂಡು, ಪಕ್ಷ ಸಂಘಟನೆ, ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಷಯಗಳ ಕುರಿತು ಪಕ್ಷದ ರಾಷ್ಟ್ರೀಯ ನಾಯಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ಈ ಕುರಿತು ನಿನ್ನೆ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿದ ಅವರು, ಜುಲೈ 25ರಂದು ನೂತನ ರಾಷ್ಟ್ರಪತಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಹಲವು ಇಲಾಖೆಗಳ ನಿಯೋಗದೊಂದಿಗೆ ದೆಹಲಿಗೆ ಹೋಗುತ್ತೇನೆ. ಪಕ್ಷದ ನಾಯಕರು ವಿಚಾರವೆತ್ತಿದರೆ ಆ ಸಮಯದಲ್ಲಿ ಸಂಪುಟ ವಿಸ್ತರಣೆ ಕುರಿತು ಸಹ ಚರ್ಚಿಸುತ್ತೇನೆ ಎಂದರು.

ಕಸ್ತೂರಿರಂಗನ್ ವರದಿಯ ಕುರಿತು ಚರ್ಚೆ ನಡೆಸಲು ಸಹ ನಿಯೋಗವನ್ನು ಕರೆದೊಯ್ಯುವುದಾಗಿ ತಿಳಿಸಿದರು. ಮೊನ್ನೆ ಸೋಮವಾರ ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ಸಂಸತ್ತು ಮತ್ತು ಆಯಾ ರಾಜ್ಯ ವಿಧಾನಸಭೆಯಲ್ಲಿ ಜನಪ್ರತಿನಿಧಿಗಳು ನೂತನ ರಾಷ್ಟ್ರಪತಿಗಳ ಆಯ್ಕೆಗೆ ಮತದಾನ ಮಾಡಿದ್ದರು. ಸುಗಮವಾಗಿ ನಡೆದ ಪ್ರಕ್ರಿಯೆಯಲ್ಲಿ ಶೇಕಡಾ 98.91ರಷ್ಟು ಮತದಾನವಾಗಿತ್ತು. 

ಬಿಜೆಪಿ ನೇತೃತ್ವದ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಹಾಗೂ ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹ ಮಧ್ಯೆ ಸ್ಪರ್ಧೆಯೇರ್ಪಟ್ಟಿದೆ. ದೇಶದ ಸಂಸದರು ಮತ್ತು ರಾಜ್ಯ ವಿಧಾನಸಭೆಯ ಶಾಸಕರು ಸೇರಿ ರಾಷ್ಟ್ರಪತಿಗಳನ್ನು ಆಯ್ಕೆ ಮಾಡುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

SCROLL FOR NEXT