ಜಮೀರ್ ಗೆ ಬೆನ್ನುತಟ್ಟುತ್ತಿರುವ ವಿರಕ್ತಮಠ ಸ್ವಾಮೀಜಿ 
ರಾಜಕೀಯ

ಜಮೀರ್ ಅಹ್ಮದ್ ಮುಂದೊಂದು ದಿನ ರಾಜ್ಯದ ಸಿಎಂ ಆಗಬೇಕು: ವಿರಕ್ತಮಠ ಸ್ವಾಮೀಜಿ

ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿ ಬಡಿದಾಟ ಜೋರಾಗಿರುವಾಗಲೇ ವಿರಕ್ತಮಠದ ಪಂಚಾಕ್ಷರಿ ಸ್ವಾಮಿಗಳು ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ. ಜಮೀರ್ ಅಹ್ಮದ್ ಖಾನ್ ಅವರು ಜಾತಿ ಧರ್ಮ ನೋಡದೇ ಸರ್ವಧರ್ಮೀಯರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ. ಮುಂಬರುವ ದಿನಗಳಲ್ಲಿ ಸಿಎಂ ಆಗುತ್ತಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬೆಳಗಾವಿ: ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿ ಬಡಿದಾಟ ಜೋರಾಗಿರುವಾಗಲೇ ವಿರಕ್ತಮಠದ ಪಂಚಾಕ್ಷರಿ ಸ್ವಾಮಿಗಳು ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ. ಜಮೀರ್ ಅಹ್ಮದ್ ಖಾನ್ ಅವರು ಜಾತಿ ಧರ್ಮ ನೋಡದೇ ಸರ್ವಧರ್ಮೀಯರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ. ಮುಂಬರುವ ದಿನಗಳಲ್ಲಿ ಸಿಎಂ ಆಗುತ್ತಾರೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಬೈಲಹೊಂಗಲ ಮತಕ್ಷೇತ್ರದ ಯಕ್ಕುಂಡಿ ಗ್ರಾಮದ ದೀಲಾವರ್ ದರ್ಗಾದಲ್ಲಿ ನಿನ್ನೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಕ್ಕುಂಡಿ ಗ್ರಾಮದ ದರ್ಗಾ ಹಿಂದೂ-ಮುಸ್ಲಿಂ ಭಾವೈಕ್ಯತೆ ಸಂಕೇತವಾಗಿದ್ದು, ಶಂಕರ ಪಾಟೀಲ್ ಅವರಿಂದ ದರ್ಗಾ ಅಭಿವೃದ್ಧಿಯಾಗಿದೆ. ಬೆಂಗಳೂರಿನಿಂದ ದರ್ಗಾಕ್ಕೆ ಮಾಜಿ ಸಚಿವರು ಜಮೀರ್ ಅಹ್ಮದ್‍ಖಾನ್ ಬಂದಿದ್ದಾರೆ. ಹಾಗಿರುವಾಗ ಇದರ ಶಕ್ತಿ ಎಷ್ಟಿದೆ ಎಂದು ಊಹಿಸಿಕೊಳ್ಳಿ ಎಂದಿದ್ದಾರೆ. 

ಜಮೀರ್ ಮುಂದೆ ಸಿಎಂ ಆಗುತ್ತಾರೆ: ಜಮೀರ್ ಅಹ್ಮದ್‍ಖಾನ್ ಅವರು ಮುಂದೆ ಸಿಎಂ ಆಗುತ್ತಾರೆ. ಜಮೀರ್ ಅಹ್ಮದ್ ಖಾನ್ ಅವರು ಜಾತಿ ಧರ್ಮ ನೋಡದೇ ಸರ್ವಧರ್ಮೀಯರನ್ನು ಪ್ರೀತಿ ವಿಶ್ವಾಸದಿಂದ ಕಾಣುತ್ತಾರೆ. ಸಮಾಜಸೇವೆ ಮಾಡುತ್ತಾ ಬಂದಿದ್ದಾರೆ. ಇವರು ಮತ್ತೊಮ್ಮೆ ಮಂತ್ರಿಗಳಾಗಿ, ಮಠಕ್ಕೆ ಬರಬೇಕು. ಅಷ್ಟೇ ಅಲ್ಲದೇ ಇಂತಹ ಒಳ್ಳೆಯ ಮನಸ್ಸಿನ ಜಮೀರ್ ಅವರು, ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿಗಳಾಗಬೇಕು ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT