ನಟಿ ಭಾವನಾ - ಕಾಂಗ್ರೆಸ್ ಕಾರ್ಯಕರ್ತೆ 
ರಾಜಕೀಯ

“ನೀವು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋದವರು, ಮತ್ಯಾಕೆ ಬಂದ್ರೀ?”: ನಟಿ ಭಾವನಾ ತಬ್ಬಿಬ್ಬು!

ಕಾಂಗ್ರೆಸ್ ಪಕ್ಷದ ಮೌನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಚಿತ್ರನಟಿ ಭಾವನಾ ಅವರನ್ನು ಕಾಂಗ್ರಸ್ ನ ಹಿರಿಯ ಮುಖಂಡರ ಮುಂದೆಯೇ ಕೈ ಕಾರ್ಯಕರ್ತೆಯೊಬ್ಬರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಪ್ರಸಂಗ ಮಂಗಳವಾರ ನಡೆಯಿತು.

ಬೆಂಗಳೂರು: ಕಾಂಗ್ರೆಸ್ ಪಕ್ಷದ ಮೌನ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಚಿತ್ರನಟಿ ಭಾವನಾ ಅವರನ್ನು ಕಾಂಗ್ರಸ್ ನ ಹಿರಿಯ ಮುಖಂಡರ ಮುಂದೆಯೇ ಕೈ ಕಾರ್ಯಕರ್ತೆಯೊಬ್ಬರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಪ್ರಸಂಗ ಮಂಗಳವಾರ ನಡೆಯಿತು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಸಲೀಂ ಅಹಮದ್ ಅವರು ಕುಳಿತಿದ್ದ ವೇದಿಕೆಯತ್ತ ತೆರಳಿದ ನಟಿ ಭಾವನಾ ಅವರನ್ನು ಮಹಿಳಾ ಕಾರ್ಯಕರ್ತೆಯೊಬ್ಬರು ತಡೆಹಿಡಿದು, ವೇದಿಕೆ ಬಿಟ್ಟು ಬದಿಗೆ ಬನ್ನಿ ಎಂದು ಅಡ್ಡಿಪಡಿಸಿದರು.

ನೀವು ಬಿಜೆಪಿಗೆ ಹೋಗಿದ್ದೀರಿ ಮತ್ಯಾಕೆ ಇಲ್ಲಿಗೆ ಬಂದಿದ್ದೀರೀ ಎಂದು ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆ ಪ್ರಶ್ನಿಸಿದರು. ಈ ವೇಳೆ ನಟಿ ಭಾವನಾ ತಬ್ಬಿಬ್ಬಾದರು. ತಾನು ಬಿಜೆಪಿಗೆ ಹೋಗಿದ್ದು ನಿಜ. ಆದ್ರೆ ಮತ್ತೆ ಕಾಂಗ್ರೆಸ್ ಗೆ ಮರಳಿದ್ದೇನೆ ಎಂದು ಭಾವನಾ ಹೇಳಿದರು. ಮತ್ತೆ ಈ ಬಗ್ಗೆ ಮಾಧ್ಯಮದಲ್ಲೂ ಸುದ್ದಿ ನೋಡೆ ಇಲ್ಲ ಎಂದು ಮಹಿಳಾ ಕಾರ್ಯಕರ್ತೆ ಪ್ರಶ್ನಿಸಿದರು. ಈ ವೇಳೆ ವೇದಿಕೆಯಲ್ಲೇ ಉಪಸ್ಥಿತರಿದ್ದ ನಾಯಕರು ಮಧ್ಯಪ್ರವೇಶಿಸಿ ಸಮಾಧಾನಪಡಿಸಿದರು. ನಂತರ ನಟಿ ಭಾವನಾ ಕಾರ್ಯಕರ್ತರು ಕುಳಿತಿದ್ದ ಬದಿಯಲ್ಲೆ ನಿಂತು ಮೌನ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ಬಳಿಕ ಭಾವನಾ ಮಾತನಾಡಿ, “ಈ ಹಿಂದೆ ನಾನು ಕಾಂಗ್ರೆಸ್ ನಿಂದ ಬಿಜೆಪಿಗೆ ಹೋಗಿದ್ದೆ. ಅದು ಆತುರದ ನಡೆ ಎಂದು ಅನಿಸಿತು. ಈ ಹಿನ್ನೆಲೆಯಲ್ಲಿ ಮತ್ತೆ ಕಾಂಗ್ರಸ್ ಪಕ್ಷಕ್ಕೆ ಮರಳಿರುವುದಾಗಿ” ಸ್ಪಷ್ಟಪಡಿಸಿದರು. ಬಿಜೆಪಿಗೆ ಹೋದ ನಂತರ ನಾನು ಮಾಡಿದ್ದ ತಪ್ಪು ಅರಿವಿಗೆ ಬಂತು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT