ರಾಜಕೀಯ

'ಸಿದ್ದರಾಮೋತ್ಸವ' ಖಾಸಗಿ ಕಾರ್ಯಕ್ರಮ: ಉಲ್ಟಾ ಹೊಡೆದ ಶಿವಕುಮಾರ್; ಜಮೀರ್ ನಡೆಯಿಂದ ಬೇಸತ್ತರಾ ಡಿಕೆಶಿ?

ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ  ಹುಟ್ಟುಹಬ್ಬವನ್ನು ಪಕ್ಷದ ಕಾರ್ಯಕ್ರವನ್ನಾಗಿ ಮಾಡುತ್ತೇವೆ ಎನ್ನುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಈಗ ಬದಲಾದ ಪರಿಸ್ಥಿತಿಯಲ್ಲಿ ಅದೊಂದು ಖಾಸಗಿ ಕಾರ್ಯಕ್ರಮ ಎಂದು ಹೇಳುವುದರ ಮೂಲಕ ಸಿದ್ದರಾಮಯ್ಯ ಬಣಕ್ಕೆ ಟಾಂಗ್ ಕೊಟ್ಟಿದ್ದಾರೆ.

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ  ಹುಟ್ಟುಹಬ್ಬವನ್ನು ಪಕ್ಷದ ಕಾರ್ಯಕ್ರವನ್ನಾಗಿ ಮಾಡುತ್ತೇವೆ ಎನ್ನುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಈಗ ಬದಲಾದ ಪರಿಸ್ಥಿತಿಯಲ್ಲಿ ಅದೊಂದು ಖಾಸಗಿ ಕಾರ್ಯಕ್ರಮ ಎಂದು ಹೇಳುವುದರ ಮೂಲಕ ಸಿದ್ದರಾಮಯ್ಯ ಬಣಕ್ಕೆ ಟಾಂಗ್ ಕೊಟ್ಟಿದ್ದಾರೆ.
 
ಕಾಂಗ್ರೆಸ್  ಪ್ರತಿಭಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟು ದಿನ ಸಿದ್ದರಾಮೋತ್ಸವವನ್ನು ಪಕ್ಷದ ಕಾರ್ಯಕ್ರಮವಾಗಿ ಆಚರಿಸುತ್ತೇವೆ ಎನ್ನುತ್ತಿದ್ದ ಡಿಕೆಶಿ, ಸಿದ್ದರಾಮಯ್ಯ ಬೆಂಬಲಿಗರು, ಜಮೀರ್ ನಡೆಯಿಂದ ಬೇಸತ್ತು ಸಿದ್ದರಾಮೋತ್ಸವವನ್ನ ಖಾಸಗಿ ಕಾರ್ಯಕ್ರಮ ಎಂದು ಹೇಳಿದ್ದಾರೆ ತಿಳಿದು ಬಂದಿದೆ.

ಇವತ್ತಿಗೆ ಮೌನ ಪ್ರತಿಭಟನೆ ನಿಲ್ಲಿಸುತ್ತಿದ್ದೀವಿ. ಆಗಸ್ಟ್ 15 ರಂದು ದೊಡ್ಡ ಜವಾಬ್ದಾರಿ ಇದೆ. ಸಂಘ ಸಂಸ್ಥೆ, ವಿದ್ಯಾರ್ಥಿ, ಕಾರ್ಯಕರ್ತರ ರಿಜಿಸ್ಟರ್ ಮಾಡಿಸಬೇಕು. 3ನೇ ತಾರೀಖು ಖಾಸಗಿ ಕಾರ್ಯಕ್ರಮ. ಅದು ಅಭಿಮಾನಿಗಳ ಕಾರ್ಯಕ್ರಮ. 15ನೇ ತಾರೀಖು ನಡೆಯೋದು ರಾಷ್ಟ್ರ ಕಾರ್ಯಕ್ರಮ ಎಂದು ಹೇಳಿದರು.

ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಇವತ್ತಿನ ಇ.ಡಿ ತನಿಖೆ ಮಕ್ತಾಯವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಹೋರಾಟವನ್ನು ಕೈಬಿಟ್ಟರು. ಒಂದೂವರೆ ದಿನಕ್ಕೆ ಮೌನ ಪ್ರತಿಭಟನೆ ಮುಕ್ತಾಯಗೊಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

SCROLL FOR NEXT