ಸಿ ಎಂ ಇಬ್ರಾಹಿಂ 
ರಾಜಕೀಯ

ಸಿಎಂ ಇಬ್ರಾಹಿಂ ರಾಜಿನಾಮೆಯಿಂದ ತೆರವಾಗಿರುವ ಎಂಎಲ್ ಸಿ ಸ್ಥಾನ: ಹಿಂದುಳಿದ ವರ್ಗಕ್ಕೆ ನೀಡಲು ಬಿಜೆಪಿ ಪ್ಲಾನ್!

ರಾಜ್ಯ ವಿಧಾನಪರಿಷತ್ತಿನ ಖಾಲಿ ಇರುವ ಒಂದು ಸ್ಥಾನಕ್ಕೆ ಆಡಳಿತ ಪಕ್ಷ ಬಿಜೆಪಿ ಹಿಂದುಳಿದ ಸಮುದಾಯಗಳ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ.

ಬೆಂಗಳೂರು: ರಾಜ್ಯ ವಿಧಾನಪರಿಷತ್ತಿನ ಖಾಲಿ ಇರುವ ಒಂದು ಸ್ಥಾನಕ್ಕೆ ಆಡಳಿತ ಪಕ್ಷ ಬಿಜೆಪಿ ಹಿಂದುಳಿದ ಸಮುದಾಯಗಳ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ. ಹಿಂದುಳಿದ ಸಮುದಾಯಗಳಿಗೆ ಸೇರಿದ ಮೂವರು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಲಾಗಿದೆ.

ಸಿಎಂ ಇಬ್ರಾಹಿಂ ಅವರ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಆಗಸ್ಟ್‌ 11 ರಂದು ಚುನಾವಣೆ ನಡೆಯಲಿದ್ದು, ಆಗಸ್ಟ್‌ 1 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಒಂದೇ ಸ್ಥಾನ ಇರುವುದರಿಂದ ಪ್ರತಿಪಕ್ಷಗಳು ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರಲು ನಿರ್ಧರಿಸಿವೆ. ಹೀಗಾಗಿ ಬಿಜೆಪಿಯ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.

ಈ ಚುನಾವಣೆಯಲ್ಲಿ  ಹಿಂದುಳಿದ ವರ್ಗಗಳಿಗೆ ಆದ್ಯತೆ ನೀಡಬೇಕೆಂಬ ಚರ್ಚೆ ಬಿಜೆಪಿ ಪ್ರಮುಖ ನಾಯಕರ ಮಟ್ಟದಲ್ಲಿ ನಡೆದಿದೆ ಎನ್ನಲಾಗಿದ್ದು, ರಾಜಕೀಯವಾಗಿ ಅತ್ಯಂತ ಹಿಂದುಳಿದಿರುವ ಕೋಲಿ ಸಮುದಾಯ, ಮರಾಠ ಸಮುದಾಯ ಅಥವಾ ಬೇರಾವುದಾದರೂ ಹಿಂದುಳಿದ ವರ್ಗದ ವ್ಯಕ್ತಿಗೆ ಅವಕಾಶ ಕಲ್ಪಿಸಬೇಕೆಂಬ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾತಿನಿಧ್ಯ ನೀಡುವ ಸಾಧ್ಯತೆ ಹೆಚ್ಚಿದೆ ಎಂಬ ಮಾಹಿತಿ ಲಭ್ಯವಾಗಿದೆ.  ಆ ಭಾಗದ ಕೋಲಿ ಸಮುದಾಯದ ಅಭ್ಯರ್ಥಿ, ಅದೇ ರೀತಿ ಬಸವ ಕಲ್ಯಾಣ ಉಪ ಚುನಾವಣೆಯಲ್ಲಿ ಬಿಜೆಪಿ ಮರಾಠ ಸಮುದಾಯದವರಿಗೆ ವಿಧಾನ ಪರಿಷತ್ ಸ್ಥಾನ ನೀಡುವುದಾಗಿ ಭರವಸೆ ನೀಡಿತ್ತು ಎನ್ನಲಾಗಿದ್ದು, ಆ ಕಾರಣಕ್ಕಾಗಿ ಬೀದರ್ ಜಿಲ್ಲೆಯ ಮರಾಠ ಸಮುದಾಯಕ್ಕೆ ಸೇರಿದವರಿಗೆ ಪರಿಷತ್ ಟಿಕೆಟ್ ನೀಡುವ ಬಗ್ಗೆ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!