ಮೋಟಮ್ಮ ಆತ್ಮಚರಿತ್ರೆ 
ರಾಜಕೀಯ

ರಾಜಕೀಯದಲ್ಲಿ ಬೆಳೆಯುವ ಎಲ್ಲ ಅವಕಾಶಗಳನ್ನು ಸಿದ್ದರಾಮಯ್ಯ ಶಾಶ್ವತವಾಗಿ ತಡೆದರು: ಮೋಟಮ್ಮ!

ವಿಧಾನಸಭೆ ಸ್ಪೀಕರ್ ಹಾಗೂ ಮತ್ತೆ ಸಚಿವೆಯಾಗುವ ಅವಕಾಶಕ್ಕೆ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ತಣ್ಣೀರೆರಚಿದರು ಎಂದು ಮೋಟಮ್ಮ ಆತ್ಮಚರಿತ್ರೆಯಲ್ಲಿ ಬರೆದುಕೊಂಡಿದ್ದಾರೆ.

ಚಿಕ್ಕಮಗಳೂರು: ಸಬ್ ರಿಜಿಸ್ಟ್ರಾರ್ ಆಗಿ ಕೆಲಸ ಮಾಡುತ್ತಿದ್ದ ದಲಿತ ಮಹಿಳೆ ರಾಜಕೀಯ ಕ್ಷೇತ್ರಕ್ಕೆ ಧುಮುಕುವುದು ಮತ್ತು ಕಾಂಗ್ರೆಸ್ ಪಕ್ಷದ ಉನ್ನತ ಸ್ಥಾನಕ್ಕೇರುವುದು ಅಷ್ಟು ಸುಲಭವಾಗಿರಲಿಲ್ಲ. ಆಗಿನ ಪ್ರಧಾನಿ ದಿವಂಗತ ಇಂದಿರಾಗಾಂಧಿ ಹೊರತುಪಡಿಸಿ ಬೇರೆಯವರ ಮೇಲೆ ಪ್ರಭಾವ ಬೀರುವುದು ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯೆಯಾಗಿ ಕೆಲಸ ಮಾಡುವುದು ಸರಳವಾಗಿರಲಿಲ್ಲ ಎಂದು ಮಾಜಿ ಸಚಿವೆ ಮೋಟಮ್ಮ ತಮ್ಮ ಆತ್ಮ ಚರಿತ್ರೆಯಲ್ಲಿ ಬರೆದುಕೊಂಡಿದ್ದಾರೆ.

ದಲಿತ ಮಹಿಳಾ ರಾಜಕಾರಣಿಯೂ ಆಗಿ ರಾಜ್ಯಭಾರ ಮಾಡಬಲ್ಲರು ಎಂಬುದನ್ನು ಮೂಡಿಗೆರೆಯ ಮೋಟಮ್ಮ ಸಾಬೀತುಪಡಿಸಿದರು. ಅವರು ಸಚಿವರಾಗಿ, ಪರಿಷತ್ತಿನಲ್ಲಿ ವಿರೋಧ ಪಕ್ಷದ ನಾಯಕಿ ಮತ್ತು ಎಂಎಡಿಬಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು. ಹಾಗೂ ಮಹಿಳಾ ಸಬಲೀಕರಣ ಯೋಜನೆಯಡಿ ಮಹಿಳಾ ಗುಂಪುಗಳನ್ನು ರಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.

ಆದರೆ ಸತತ ಸೋಲಿನ ನಂತರ, ಅವರು ಜನಮನದಿಂದ ದೂರ ಸರಿದರು 'ಬಿದಿರು, ನೀನ್ಯಾರಿಗಲ್ಲದವಳು' ಎಂಬ ಶೀರ್ಷಿಕೆಯಡಿ ತಮ್ಮ ಆತ್ಮಚರಿತ್ರೆ ಬರೆದಿದ್ದಾರೆ. ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರು ಇತ್ತೀಚೆಗೆ ಬೆಂಗಳೂರಿನಲ್ಲಿ ಈ ಪುಸ್ತಕ ಬಿಡುಗಡೆ ಮಾಡಿದರು. ತಮ್ಮ ಧ್ವನಿಯನ್ನು "ಮೌನಗೊಳಿಸಲು" ಕಾರಣವಾದ ಕಾಂಗ್ರೆಸ್ ನಾಯಕರ ಬಗ್ಗೆ ಪುಸ್ತಕದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಧಾನಸಭೆ ಸ್ಪೀಕರ್ ಹಾಗೂ ಮತ್ತೆ ಸಚಿವೆಯಾಗುವ ಅವಕಾಶಕ್ಕೆ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ತಣ್ಣೀರೆರಚಿದರು ಎಂದು ಮೋಟಮ್ಮ ಆತ್ಮಚರಿತ್ರೆಯಲ್ಲಿ ಬರೆದುಕೊಂಡಿದ್ದಾರೆ.

ಪಕ್ಷವನ್ನು ಬಲಪಡಿಸುವ ದೂರದೃಷ್ಟಿಯ ಚಿಂತನೆಯನ್ನು ಪಕ್ಷದ ಯಾವೊಬ್ಬ ನಾಯಕನೂ ಹೊಂದಿಲ್ಲ. ಎಲ್ಲರೂ ವೇದಿಕೆಯಲ್ಲಿ ಸೌಹಾರ್ದಯುತವಾಗಿ ವರ್ತಿಸುತ್ತಾರೆ ಆದರೆ ವೇದಿಕೆಯ ಹೊರಗೆ ಅವರು ತಮ್ಮ ವೈಯಕ್ತಿಕ ಲಾಭಗಳ ಬಗ್ಗೆ ಹೆಚ್ಚು ಗಮನ ಹರಿಸುತ್ತಾರೆ. ನಾನು ರಾಜಕೀಯದಲ್ಲಿ ಶಾಶ್ವತವಾಗಿ ಬೆಳೆಯುವ ಎಲ್ಲ ಅವಕಾಶಗಳನ್ನು ಸಿದ್ದರಾಮಯ್ಯ ಅವರು ತಡೆದಿದ್ದಾರೆ, ಎಂದು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

SCROLL FOR NEXT