ವಿ.ಸೋಮಣ್ಣ 
ರಾಜಕೀಯ

ನನ್ನ ಹೆಸರಿಲ್ಲದ ಶಿಲಾಫಲಕ ಕೂಡಲೇ ಬದಲಾಯಿಸಿ, ಇಲ್ಲದಿದ್ದರೆ ನಾಳೆ ಬೆಳಗ್ಗೆಯೇ ಒಡೆದು ಹಾಕುತ್ತೇನೆ: ವಿ. ಸೋಮಣ್ಣ

ಜೂನ್ 20 ರಂದು ಬೆಂಗಳೂರು ಪ್ರವಾಸ ಕೈಗೊಳ್ಳಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೇಸ್ ಕ್ಯಾಂಪಸ್ ನಲ್ಲಿ 150 ಮೇಲ್ದರ್ಜೆಗೇರಿಸಲ್ಪಟ್ಟ ಐಟಿಐಗಳ ಲೋಕಾರ್ಪಣೆ ಮಾಡಲಿದ್ದಾರೆ.

ಬೆಂಗಳೂರು: ಜೂನ್ 20 ರಂದು ಬೆಂಗಳೂರು ಪ್ರವಾಸ ಕೈಗೊಳ್ಳಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೇಸ್ ಕ್ಯಾಂಪಸ್ ನಲ್ಲಿ 150 ಮೇಲ್ದರ್ಜೆಗೇರಿಸಲ್ಪಟ್ಟ ಐಟಿಐಗಳ ಲೋಕಾರ್ಪಣೆ ಮಾಡಲಿದ್ದಾರೆ. ಐಟಿಐ ಲೋಕಾರ್ಪಣೆ ಶಿಲಾ ಫಲಕದಲ್ಲಿ ತಮ್ಮ ಹೆಸರಿಲ್ಲದಿರುವುದಕ್ಕೆ ಸಚಿವ ಮತ್ತು ಗೋವಿಂದರಾಜನಗರ ಶಾಸಕ ವಿ. ಸೋಮಣ್ಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವ ಸ್ಥಳೀಯ ಶಾಸಕ ವಿ. ಸೋಮಣ್ಣ ಅವರ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬೇಸ್ ಕ್ಯಾಂಪಸ್ ಬರಲಿದೆ. ಅಧ್ಯಕ್ಷತೆ ವಹಿಸುವ ತಮ್ಮ ಹೆಸರೇ ಇಲ್ಲ ಅಂದರೆ ಹೇಗೆ? ಬೇಸ್ ಕ್ಯಾಂಪಸ್ ನಮ್ಮ ಕ್ಷೇತ್ರದಲ್ಲೇ ಬರುತ್ತದೆ. ಕೂಡಲೇ ಶಿಲಾಫಲಕ ಬದಲಾಯಿಸಿ. ಇಲ್ಲದಿದ್ದರೆ ನಾಳೆ ಬೆಳಗ್ಗೆಯೇ ಒಡೆದು ಹಾಕುತ್ತೇನೆ ಎಂದು ಸಚಿವ ವಿ. ಸೋಮಣ್ಣ ಗರಂ ಆದರು. ಬೇಸ್ ಕ್ಯಾಂಪಸ್ ನಲ್ಲಿ ಕಾರ್ಯಕ್ರಮದ ಸಿದ್ಧತೆಗೆ ತೆರಳಿದ್ದ ವೇಳೆ ಸಚಿವ ಸೋಮಣ್ಣ ಆಕ್ಷೇಪ ವ್ಯಕ್ತಪಡಿಸಿದರು .

ಇದೆಲ್ಲಾ ರಾಜ್ಯ ಸರ್ಕಾರದ ದುಡ್ಡು, ಕೇಂದ್ರ ಸರ್ಕಾರದ್ದಲ್ಲ. ಅವರು ಹೆದರಿಸುತ್ತಾರೆ ಅಂತಾ ನೀವೆಲ್ಲಾ ಹೆದರಿಕೊಂಡು ಕುಳಿತುಕೊಳ್ಳುತ್ತೀರಾ ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಜೊತೆ ವಿ. ಸೋಮಣ್ಣ ಆಕ್ಷೇಪ ವ್ಯಕ್ತಪಡಿಸಿದರು.  

ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಎದುರಲ್ಲಿ ಸಚಿವ ವಿ.ಸೋಮಣ್ಣ ಆಕ್ಷೇಪವೆತ್ತಿದರು. ಸದ್ಯ ಶಿಲಾಫಲಕದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಹೆಸರು ಮಾತ್ರ ಉಲ್ಲೇಖವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!