ಸಿಎಂ ಬಸವರಾಜ ಬೊಮ್ಮಾಯಿ 
ರಾಜಕೀಯ

ಪಠ್ಯ ಪುಸ್ತಕ ಪರಿಷ್ಕರಣೆ: ದೇವೇಗೌಡರ ಸಲಹೆ ಗಂಭೀರವಾಗಿ ಪರಿಗಣನೆ – ಸಿಎಂ ಬೊಮ್ಮಾಯಿ

ಪಠ್ಯ ಪುಸ್ತಕ ಪರಿಷ್ಕರಣೆ ಕುರಿತು ಮಾಜಿ ಪ್ರಧಾನಿ ದೇವೇಗೌಡರು ನೀಡಿರುವ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ.

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ಕುರಿತು ಮಾಜಿ ಪ್ರಧಾನಿ ದೇವೇಗೌಡರು ನೀಡಿರುವ ಸಲಹೆಗಳನ್ನು ಗಂಭೀರವಾಗಿ ಪರಿಗಣಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಹೇಳಿದ್ದಾರೆ.

ಪಠ್ಯ ಪರಿಷ್ಕರಣೆ ವಾಪಸ್ ಗೆ ಆಗ್ರಹಿಸಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಸಿಎಂ ಬೊಮ್ಮಾಯಿಗೆ ಪತ್ರ ಬರೆದಿದ್ದು, ಕುರಿತು ಆರ್ ಟಿ ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, ಮಾಜಿ ಪ್ರಧಾನಿಗಳು ಬರೆದಿರುವ ಪತ್ರದ ವಿವರಗಳ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ಮಾಡ್ತೇನೆ. ಮಾಜಿ ಪ್ರಧಾನಿಗಳು ನಮಗೆಲ್ಲರಿಗೂ ಹಿರಿಯರು. ಅವರು ಪಠ್ಯ ಕ್ರಮದ ಬಗ್ಗೆ ಪತ್ರ ಬರೆದಿದ್ದಾರೆ. ನಾನು ನಾಳೆ ಶಿಕ್ಷಣ ಇಲಾಖೆ ಮುಖ್ಯಸ್ಥರ ಜತೆ ಚರ್ಚಿಸ್ತೇನೆ ಎಂದರು.

ದೇವೇಗೌಡರು ಬರೆದಿರುವ ಪತ್ರದ ಸಾರವನ್ನು ಸಂಪೂರ್ಣವಾಗಿ ಅವಲೋಕಿಸುತ್ತೇವೆ. ಅವರು ಏನೆಲ್ಲ ಸಲಹೆ ಕೊಟ್ಟಿದ್ದಾರೋ ಅವುಗಳನ್ನು ಗಂಭೀರವಾಗಿ ಪರಿಗಣಿಸ್ತೇವೆ. ಏನೆಲ್ಲ ಬದಲಾವಣೆ ಮಾಡಲು ಸಾಧ್ಯವೋ ಅದರ ಸಂಬಂಧ ತೀರ್ಮಾನಗಳನ್ನು ಮಾಡ್ತೇವೆ ಮತ್ತು ಅವರಿಗೆ ಉತ್ತರವನ್ನು ಗೌರವಪೂರ್ವಕವಾಗಿ ಬರೆಯುತ್ತೇನೆ ಎಂದು ಹೇಳಿದರು.

ಜನದ್ರೋಹ ಮಾಡಿ ಯೋಗ ಮಾಡಲು ರಾಜ್ಯಕ್ಕೆ ಮೋದಿ ಬಂದಿದ್ದಾರೆಂಬ ಸಿದ್ದರಾಮಯ್ಯ ಹೇಳಿಕೆಯನ್ನು ಟೀಕಿಸಿದ ಸಿಎಂ, ಇವತ್ತೇನಾದರೂ ಕೋವಿಡ್ ಅನ್ನು ಇಡೀ ದೇಶದಲ್ಲಿ ಯಶಸ್ವಿಯಾಗಿ ನಿರ್ವಹಿಸಿದ್ದಾರೆ ಅಂದ್ರೆ ಅದು ಮೋದಿಯವರು. ಕರ್ನಾಟಕಕ್ಕೆ ಕೋವಿಡ್ ನಿರ್ವಹಣೆಗೆ ಸಾವಿರಾರು ಕೋಟಿ ಕೊಟ್ಟಿದ್ದಾರೆ. ಔಷಧ, ಲಸಿಕೆ, ಉಪಕರಣಗಳು, ಆಕ್ಸಿಜನ್, ಆಕ್ಸಿಜನ್ ಉತ್ಪಾದಿಸುವ ಯಂತ್ರಗಳನ್ನು, ವೆಂಟಿಲೇಟರ್ ಗಳನ್ನು ಕಳಿಸಿದ್ದಾರೆ. ರಾಜಕೀಯವಾಗಿ ಮಾತಾಡಬೇಕು ಅಂತ ಮಾತಾಡಿದರೆ ಅದಕ್ಕೆ ಅರ್ಥ ಇರಲ್ಲ. ಜನರಿಗೆ ಎಲ್ಲವೂ ನೆನಪು ಇರುತ್ತದೆ. ಮೋದಿಯವರು ರಾಜ್ಯಕ್ಕೆ ಏನ್ ಸಹಾಯ ಮಾಡಿದ್ದಾರೆ ಅಂತ ಜನಕ್ಕೆ ಗೊತ್ತಿದೆ. ಅವರ ಜನಪ್ರಿಯತೆ ನೋಡಿ ಈ ತರಹ ಮಾತಾಡ್ತಿದ್ದಾರೆ ಎಂದು ಸಿದ್ದರಾಮಯ್ಯ ಗೆ ತಿರುಗೇಟು ನೀಡಿದರು.

ಬಳಿಕ ಬೊಮ್ಮಾಯಿ ಆಡಳಿತಕ್ಕೆ ಮೋದಿ ಮೆಚ್ಚುಗೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಮೋದಿಯವರು ಯಾವಾಗಲೂ ಸುಶಾಸನ, ಅಭಿವೃದ್ಧಿ ಪರ ಆಡಳಿತ ಮೆಚ್ಚಿಕೊಂಡವರು. ರಾಜ್ಯದಲ್ಲೂ ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಮತ್ತು ಜನಪರ ಯೋಜನೆಗಳ ಜಾರಿ ಆಗಿದೆ. ಕೇಂದ್ರವು ದೊಡ್ಡ ಪ್ರಮಾಣದಲ್ಲಿ ಹಣ ನೀಡಿ ಅವರ ಸಹಭಾಗಿತ್ವದಲ್ಲಿ ಹಲವು ಯೋಜನೆಗಳನ್ನು ಜಾರಿ ಮಾಡಿರೋದನ್ನು ಅವರು ನೋಡಿದ್ದಾರೆ. ಮೋದಿಯವರ ಮೆಚ್ಚುಗೆ ನನಗೆ ದೊಡ್ಡ ಶಕ್ತಿ ನೀಡಿದೆ. ನಾನು ಇನ್ನಷ್ಟು ಬದ್ಧತೆಯಿಂದ, ಇನ್ನಷ್ಟು ದಕ್ಷತೆಯಿಂದ ಕೆಲಸ ಮಾಡಲು ಅವರ ಮೆಚ್ಚುಗೆ ಪುಷ್ಟಿ ಕೊಟ್ಟಿದೆ ಎಂದು ಹೇಳಿದರು.

ಇನ್ನು ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಬಗ್ಗೆ ನಾಳೆ ಸ್ವಾಮೀಜಿಗಳ ಸಭೆ ವಿಚಾರ ಕುರಿತು ಮಾತನಾಡಿದ ಸಿಎಂ, ಅದರ ಬಗ್ಗೆ ಸಮುದಾಯವರು ಮತ್ತು ಸಿಸಿ ಪಾಟೀಲ್ ಅವರು ಸ್ವಾಮೀಜಿಗಳ ಜತೆ ಮಾತಾಡ್ತಾರೆ ಎಂದರು. ಈ ಸಭೆ ನಾಳೆ ಬೆಳಿಗ್ಗೆ 10 ಗಂಟೆಗೆ ಸಚಿವ ಸಿ ಸಿ ಪಾಟೀಲ್ ಮನೆಯಲ್ಲಿ ನಡೆಯಲಿದ್ದು, ಜಯ ಮೃತ್ಯುಂಜಯ ಸ್ವಾಮೀಜಿಯೂ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT