ಮಂಗಳವಾರ ನವದೆಹಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾರತೀಯ ಯುವ ಕಾಂಗ್ರೆಸ್ ಮುಖ್ಯಸ್ಥ ಶ್ರೀನಿವಾಸ್ ಬಿವಿ ಮತ್ತು ಇತರ ಪಕ್ಷದ ಕಾರ್ಯಕರ್ತರು. 
ರಾಜಕೀಯ

ರಾಹುಲ್ ಗಾಂಧಿ ವಿರುದ್ಧ ಇಡಿ ಕ್ರಮಕ್ಕೆ ವಿರೋಧ: ದೆಹಲಿಯಲ್ಲಿಂದು 'ಕೈ' ಶಕ್ತಿ ಪ್ರದರ್ಶನ

ಬೆಂಗಳೂರು: ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಕ್ರಮ ಕೈಗೊಂಡಿರುವುದನ್ನು ವಿರೋಧಿಸಿ ರಾಜ್ಯ ಕಾಂಗ್ರೆಸ್ ನಾಯಕರು ನವದೆಹಲಿಯಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಂಗಳೂರು: ಬೆಂಗಳೂರು: ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಕ್ರಮ ಕೈಗೊಂಡಿರುವುದನ್ನು ವಿರೋಧಿಸಿ ರಾಜ್ಯ ಕಾಂಗ್ರೆಸ್ ನಾಯಕರು ನವದೆಹಲಿಯಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.

ದೆಹಲಿಯ ಜಂತರ್ ಮಂತರ್ ಬಳಿ ಕಾಂಗ್ರೆಸ್ ಬೃಹತ್ ಪ್ರತಿಭಟನೆಯನ್ನು ಆಯೋಜಿಸಿದ್ದು, ಈ ಪ್ರತಿಭಟನೆಯಲ್ಲಿ ರಾಜ್ಯದ ಕಾಂಗ್ರೆಸ್ ಹಾಗೂ ಇತರೆ ರಾಜ್ಯಗಳ ತನ್ನ ಸಂಸದರು, ಶಾಸಕರು, ಜನಪ್ರತಿನಿಧಿಗಳು ನಾಯಕರು ಪಾಲ್ಗೊಳ್ಳಲಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ಮಂಗಳವಾರ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಾತನಾಡಿ, ಬಿಜೆಪಿಯವರು ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ನಾಯಕರ ಧ್ವನಿಯನ್ನು ಅಡಗಿಸಲು ಪ್ರಯತ್ನಿಸುತ್ತಿದ್ದಾರೆ, ಆದರೆ, ಅದು ಕೆಲಸ ಮಾಡುವುದಿಲ್ಲ. ಅವರು ನಮ್ಮ ನಾಯಕರಿಗೆ ಕಿರುಕುಳ ನೀಡುತ್ತಿದ್ದಾರೆ. ಒಂದು ರೂಪಾಯಿಯೂ ದುರುಪಯೋಗವಾಗಿಲ್ಲ ಎಂದು ಹೇಳಿದರು.

ನಮಗೆ ನಮ್ಮ ಪಕ್ಷದ ಕಚೇರಿ ಪೂಜಾ ಸ್ಥಳ, ಆದರೆ, ಪೊಲೀಸರು ನಮ್ಮನ್ನು ನಮ್ಮ ಕಚೇರಿಗೆ ತಲುಪದಂತೆ ತಡೆಯುತ್ತಿದ್ದಾರೆ. ನಾವು ಪ್ರತಿಭಟಿಸಲು ಬಂದಿದ್ದೇವೆ. ಪರಿಸ್ಥಿತಿ ಬದಲಾಗಲಿದೆ, ಇದನ್ನು ಬಿಜೆಪಿ ನಾಯಕರು ಅರಿತುಕೊಳ್ಳಬೇಕು. ದೆಹಲಿಯಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ವೇಳೆ ಸಂಸದ ಡಿಕೆ ಸುರೇಶ್ ಮತ್ತು ಕಾಂಗ್ರೆಸ್ ಯುವ ಅಧ್ಯಕ್ಷ ಬಿವಿ ಶ್ರೀನಿವಾಸ್ ಅವರಿಗೆ ಪೊಲೀಸರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದರು.

ಇದೇ ವೇಳೆ ಇಡಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಶಿವಕುಮಾರ್, ರಾಹುಲ್ ಗಾಂಧಿಯನ್ನು 40 ಗಂಟೆಗಳ ಕಾಲ ಏಕೆ ಪ್ರಶ್ನಿಸಲಾಗಿದೆ ಎಂದು ತಿಳಿಯಬೇಕಿದೆ. ಸೋನಿಯಾ ಗಾಂಧಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಗುರುವಾರ ಇಡಿ ಕಚೇರಿಗೆ ಬರುವಂತೆ ತಿಳಿಸಲಾಗಿದೆ. ನಮಗೆ ಭಯವಿಲ್ಲ. ಆದರೆ, ಇಡಿ ಅಧಿಕಾರಿಗಳು ಮತ್ತು ಕೇಂದ್ರ ಸರ್ಕಾರ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದೆನಿಸುತ್ತಿದೆ ಎಂದು ಹೇಳಿದರು.

ಈ ನಡುವೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಸಂಜೆ ಬೆಂಗಳೂರಿನಿಂದ ಹೊರಟು ರಾತ್ರಿ ದೆಹಲಿ ತಲುಪಿದ್ದು, ಇಂದು ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Guarantee scheme: ಅರ್ಹವಲ್ಲದ ಫಲಾನುಭವಿಗಳ ಕೈಬಿಟ್ಟು ಹಣ ಉಳಿತಾಯಕ್ಕೆ ಸರ್ಕಾರ ಮುಂದು; ಈ ಬಾರಿಯ ಬಜೆಟ್‌ನಲ್ಲಿ ಅನುದಾನ ಕಡಿತ?

ಅಧಿಕಾರ ಹಸ್ತಾಂತರ ಗೊಂದಲ, ನಾಯಕರ ಹೇಳಿಕೆಗಳು: ವಿದೇಶಕ್ಕೆ ಹಾರಿದ ಸಿದ್ದು ಬಣದ 11 ಮಂದಿ 'ಕೈ' ಶಾಸಕರು

ಬೆಂಗಳೂರು: ಪೊಲೀಸರೆಂದು ಹೇಳಿಕೊಂಡು ಉದ್ಯಮಿ ಮನೆಗೆ ನುಗ್ಗಿ 20 ಲಕ್ಷ ರೂ. ನಗದು, 500 ಗ್ರಾಂ ಚಿನ್ನ ದರೋಡೆ!

ಕಾಂಗ್ರೆಸ್ ಭವನಕ್ಕಾಗಿ ಸರ್ಕಾರಿ ಭೂಮಿ ಗುಳುಂ: ಜನರಿಗಿಲ್ಲದ ಜಾಗ, ಅತ್ಯಂತ ಕಡಿಮೆ ದರದಲ್ಲಿ ಹೇಗೆ ಲಭ್ಯವಾಯಿತು? ಸರ್ಕಾರದ ವಿರುದ್ಧ BJP ಗಂಭೀರ ಆರೋಪ

SSLC, PUC Exam 2026: ಪರೀಕ್ಷೆ ಜೊತೆಗೆ ಫಲಿತಾಂಶ ದಿನಾಂಕ ಪ್ರಕಟ, 16 ಲಕ್ಷ ವಿದ್ಯಾರ್ಥಿಗಳು ನೋಂದಣಿ

SCROLL FOR NEXT