ದ್ರೌಪದಿ ಮುರ್ಮು 
ರಾಜಕೀಯ

ಆದಿವಾಸಿ ಮಹಿಳೆ ರಾಷ್ಟ್ರಪತಿಯಾದರೆ ಸಹಿಸಿಕೊಳ್ಳಲು ಕಷ್ಟವೇಕೆ? ನಿಮಗೆ ದೇವರಾಜ್ ಅರಸು ರೀತಿ ಕೆಲಸ ಮಾಡಲು ಸಾಧ್ಯವೇ?

ರಾಷ್ಟ್ರಪತಿ ಹುದ್ದೆಗೆ ಬುಡಕಟ್ಟು ಮಹಿಳಾ ಅಭ್ಯರ್ಥಿಯನ್ನು ಆಯ್ಕೆ ಮಾಡಿರುವ ಎನ್‌ಡಿಎ ನಿರ್ಧಾರ ಸಾಮಾಜಿಕ ನ್ಯಾಯವಲ್ಲ ಎಂದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ.

ಬೆಂಗಳೂರು: ರಾಷ್ಟ್ರಪತಿ ಹುದ್ದೆಗೆ ಬುಡಕಟ್ಟು ಮಹಿಳಾ ಅಭ್ಯರ್ಥಿಯನ್ನು ಆಯ್ಕೆ ಮಾಡಿರುವ ಎನ್‌ಡಿಎ ನಿರ್ಧಾರ ಸಾಮಾಜಿಕ ನ್ಯಾಯವಲ್ಲ ಎಂದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ. ಗಾಂಧಿ‌ ಕುಟುಂಬದ ತುತ್ತಿನ ಸೇವಕರಾದ ನಿಮಗೆ ಅವರ ಓಲೈಕೆ ಮಾಡುವುದೇ ಬದುಕಿನ ಭಾಗವಾಗಿದೆ ಎಂದು ಜರಿದಿದೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಸಿದ್ದರಾಮಯ್ಯನವರೇ ಗಾಂಧಿ‌ ಕುಟುಂಬದ ತುತ್ತಿನ ಸೇವಕರಾದ ನಿಮಗೆ ಅವರ ಓಲೈಕೆ ಮಾಡುವುದೇ ಬದುಕಿನ ಭಾಗವಾಗಿದೆ. ಒಬ್ಬ ಆದಿವಾಸಿ ಮಹಿಳೆ ರಾಷ್ಟ್ರಪತಿಯಾದರೆ ನಿಮಗೆ ಸಹಿಸಿಕೊಳ್ಳಲು ಕಷ್ಟವೇಕೆ? ಸಿದ್ದರಾಮಯ್ಯನವರೇ,  ನಿಮಗೆ ದೇವರಾಜ್ ಅರಸು ಅವರ ರೀತಿ ಕೆಲಸ ಮಾಡಲು ಸಾಧ್ಯವೇ? ಮುಖ್ಯಮಂತ್ರಿಯಾಗಿ ನೀವು ಮಾಡಿದ್ದು ಜಾತಿ ರಾಜಕಾರಣ ಮಾತ್ರವಲ್ಲವೇ?

ದೇಶದ ಮೇಲೆ ಇಂದಿರಾ ತುರ್ತು ಪರಿಸ್ಥಿತಿ ಹೇರಿದಾಗ ಆಗಿನ ರಾಷ್ಟ್ರಪತಿಗಳು ವರ್ತಿಸಿದ ರೀತಿಯನ್ನು ಒಮ್ಮೆ ನೆನಪಿಸಿಕೊಳ್ಳಿ. ಯಾರು ಯಾರನ್ನು ರಬ್ಬರ್‌ ಸ್ಟ್ಯಾಂಪ್‌ ಮಾಡಿಕೊಂಡಿದ್ದರು ಎಂಬುದನ್ನು ಈ ಘಟನೆಯೊಂದರಿಂದಲೇ ತಿಳಿಯಬಹುದು. ಅಂದು ರಾಷ್ಟ್ರಪತಿಯನ್ನು ಹೇಗೆ ನಡೆಸಿಕೊಳ್ಳಲಾಯ್ತು ಎಂಬುದನ್ನು ನೆನಪಿಸಬೇಕೇ? ಬಿಜೆಪಿ ರಾಷ್ಟ್ರಪತಿ ಸ್ಥಾನಕ್ಕೆ ಚುನಾಯಿಸುವ ವ್ಯಕ್ತಿಗಳು ರಬ್ಬರ್ ಸ್ಟ್ಯಾಂಪ್ ಎಂದು ಕಾಂಗ್ರೆಸ್ ಒರಟು ವಾದ ಮಾಡುತ್ತಿದೆ.

ಕಾಂಗ್ರೆಸ್ ಪಕ್ಷದಲ್ಲಿ ಇರುವ ನಾಯಕರು ನಕಲಿ ಗಾಂಧಿ ಕುಟುಂಬದ ರಬ್ಬರ್ ಸ್ಟ್ಯಾಂಪ್ ಅಲ್ಲದೆ ಮತ್ತೇನು? ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವಿದ್ದಾಗ ಮೂರು ಬಾರಿ ರಾಷ್ಟ್ರಪತಿ ಚುನಾವಣೆ ನಡೆಸುವ ಅವಕಾಶ ಲಭಿಸಿದೆ. ಅಬ್ದುಲ್ ಕಲಾಂ - ಮುಸ್ಲಿಂ ಸಮುದಾಯ,  ರಾಮನಾಥ್ ಕೋವಿಂದ್‌ -  ದಲಿತ ಸಮುದಾಯ, ದ್ರೌಪದಿ ಮುರ್ಮು -  ಬುಡಕಟ್ಟು ಮಹಿಳೆ  ಈ ಆಯ್ಕೆಗಳು ಕಾಂಗ್ರೆಸ್ ಪಕ್ಷಕ್ಕೆ ಏಕೆ ಕಹಿಯಾಗುತ್ತಿದೆ? ಎಂದು ಬಿಜೆಪಿ ಪ್ರಶ್ನಿಸಿದೆ.

ಅಬ್ದುಲ್ ಕಲಾಂ, ರಾಮನಾಥ್ ಕೊವಿಂದ್ ಹಾಗೂ ದ್ರೌಪದಿ ಮುರ್ಮು ಎಲ್ಲರೂ ಎನ್‌ಡಿಎ ಆಯ್ಕೆ. ಇಂತಹ ಮಹನೀಯರ ಬಗ್ಗೆ ಯೋಚಿಸಲೂ ಕಾಂಗ್ರೆಸ್‌ ಪಕ್ಷಕ್ಕೆ ಸಾಧ್ಯವಾಗಿಲ್ಲ.  ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಆಯ್ಕೆಯನ್ನು ಕಾಂಗ್ರೆಸ್ ರಬ್ಬರ್ ಸ್ಟ್ಯಾಂಪ್ ಎಂದಿರುವುದು ಅಕ್ಷಮ್ಯ. ಕಾಂಗ್ರೆಸ್ ನಕಲಿ ಗಾಂಧಿ ಸ್ಟ್ಯಾಂಪ್ ಅಲ್ಲವೇ?

ಮೆ ಲಡ್ಕಿ ಹೂ, ಲಡ್ ಸಕ್ತಿ ಹೂ ಎಂದು ಮಹಿಳೆಯರ ಪರವಾಗಿ ಹೂಂಕರಿಸಿದ್ದ ಕಾಂಗ್ರೆಸ್‌ ಪಕ್ಷ ಮಹಿಳೆಯರಿಗೆ ಆದ್ಯತೆಯೇ ನೀಡಲಿಲ್ಲ. ಬಿಜೆಪಿ ಮಹಿಳಾ ಸಬಲೀಕರಣಕ್ಕೆ ಬದ್ದವಾಗಿದೆ, ಆ ಕಾರಣದಿಂದಲೇ ವನವಾಸಿ ನಾಯಕಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿಸಿದ್ದೇವೆ. ಈ ಬದ್ಧತೆ ವಿಪಕ್ಷಗಳಲ್ಲಿ ಸಾಧ್ಯವೇ? ಎಂದು ಕಿಡಿ ಕಾರಿದೆ.

ದೇಶದ ಅತ್ಯುನ್ನತ ಪದವಿಗೆ ಏರುತ್ತಿರುವ ಮೊದಲ ಬುಡಕಟ್ಟು ಮಹಿಳೆಯಾಗಿ ದ್ರೌಪದಿ ಮುರ್ಮು ಅವರು ಗುರುತಿಸಿಕೊಳ್ಳಲಿದ್ದಾರೆ. ಬಿಜೆಪಿ ವಿರುದ್ಧ ಯೋಜಿತ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ಹಾಗೂ ಎಡಪಂಥೀಯ ಬುದ್ಧಿಜೀವಿಗಳಿಗೆ ಈಗ ಅಸ್ತಿತ್ವದ ಚಿಂತೆ ಮೂಡುತ್ತಿದೆಯೇ? ರಾಷ್ಟ್ರಪತಿ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರನ್ನು ಕಣಕ್ಕಿಳಿಸಿರುವುದನ್ನೇ ಟೀಕಿಸುತ್ತಿರುವ ಕಾಂಗ್ರೆಸ್ ಹಾಗೂ ಅದರ ಅಂಗಪಕ್ಷಗಳು ಬಯಲಿನಲ್ಲಿ ಬಚ್ಚಿಟ್ಟುಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ. ಒಬ್ಬ ಬುಡಕಟ್ಟು ಸಮುದಾಯದ ಮಹಿಳೆ ರಾಷ್ಟ್ರದ ಅತ್ಯುನ್ನತ ಸ್ಥಾನಕ್ಕೆ ಏರುವುದನ್ನು ನಿಮಗೇಕೆ ಸಹಿಸಲಾಗುತ್ತಿಲ್ಲ? ಎಂದು ಬಿಜೆಪಿ ತಪರಾಕಿ ಹಾಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT